Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    Uncategorized

    ಕುಂದಾಪುರ: ರೈತರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಬೇಕು ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರೈತರು ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕೃಷಿಯಲ್ಲಿ ಹೆಚ್ಚು ಆದಾಯ ಗಳಿಸುವಂತಾಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ನೂತನವಾಗಿ ಕೋಟೇಶ್ವರದಲ್ಲಿ ನಿರ್ಮಿಸಲಾಗಿರುವ ಕುಂದಾಪುರ ರೈತ ಸಂಪರ್ಕ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರೈತರು ಕೃಷಿಯಲ್ಲಿ ಆಧುನಿಕರಣ ಕಂಡುಕೊಳ್ಳಬೇಕು, ರೈತರು ಸುಖಿಯಾಗಿದ್ದಾಗ ಮಾತ್ರ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

    ರೈತ ಸಂಪರ್ಕ ಕೇಂದ್ರಗಳು ರೈತರಿಗೆ ಅನುಕೂಲವಾಗಿದೆ. ಕೃಷಿಯ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಸಲಹೆ ನೀಡಬೇಕು. ಸರ್ಕಾರದ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು, ಅಧಿಕಾರಿಗಳು ರೈತರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಕೆಲಸ ಮಾಡಬೇಕು, ರೈತರ ಮಿತ್ರರಾಗಿ ಕೆಲಸ ಮಾಡಬೇಕು ಎಂದು ಸಚಿವರು ಕರೆ ನೀಡಿದರು.

    ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ರೈತರ ಪರ ಸರ್ಕಾರ, ರೈತರ ಪರ ಕಾಳಜಿ ಹೊಂದಿರುವ ಸರ್ಕಾರ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ರೈತರ ಕೃಷಿ ಚಟುವಟಿಕೆ ನಿರಂತರವಾಗಿರುತ್ತದೆ. ಕೃಷಿ ಚಟುವಟಿಕೆ, ಕೃಷಿ ಸಲಕರಣೆಗಳು, ಸಬ್ಸಿಡಿ ಸಿಗುವ ಬಗ್ಗೆ ರೈತರಿಗೆ ಮಾಹಿತಿ ಸಿಗುವಂತಾಗಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

    ಭಾರತ ಕೃಷಿ ಪ್ರಧಾನವಾದ ದೇಶ, ಭಾರತದ ದೇಶ ಹಳ್ಳಿಗಳ ದೇಶ, ರೈತರ ದೇಶ, ನಮಗೆ ಕೃಷಿಯೇ ಪ್ರಧಾನವಾಗಿದೆ. ಅದಕ್ಕಾಗಿಯೇ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜೈಜವಾನ್ ಜೈ ಕಿಶಾನ್ ಅಂತ ಕರೆಕೊಟ್ಟಿದ್ದರು.. ರೈತ ಸುಮ್ಮನೆ ಕುಳಿತರೆ ನಾವೆಲ್ಲರೂ ಉಪವಾಸ ಕೂರಬೇಕಾಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click here

    Click here

    Click here

    Call us

    Call us

    ಬ್ರಿಟಿಷರು ಸ್ವತಂತ್ರ ಕೊಟ್ಟು ಹೋಗುವಾಗ ನಮ್ಮ ಕೃಷಿಗೆ ಪೆಟ್ಟು ನೀಡಿಯೇ ಹೋದರು. ಭಾರತ ಮುಂಚೂಣಿಗೆ ಬರಬಾರದು ಅಂತ ಕೃಷಿ ಉತ್ಪನ್ನಗಳಿಗೆ ರಾಸಾಯನಿಕ ಬೆರಸಿಹೋಗಿದ್ದರು. ಆದರೆ, ನಮಗೆ ಕೃಷಿಯೇ ಪ್ರಧಾನವಾಗಿದೆ. ಕೃಷಿಯಿಂದಲೇ ನಾವು ವಿಶ್ವಗುರುವಿನ ಪಟ್ಟದತ್ತ ನಡೆಯುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.

    ದೇವರ, ಜನರ ಆಶೀರ್ವಾದಿಂದ ಬದುಕುಳಿದಿರುವೆ:
    ಅಪಘಾತದಿಂದಾಗಿ ನಾನು ವಾಪಸ್ ಬರುತ್ತೀನಿ ಅಂತ ಅಂದುಕೊಂಡಿರಲಿಲ್ಲ. ಆ ದೇವರ, ಜನರ ಆಶೀರ್ವಾದಿಂದ ಬದುಕುಳಿದು, ನಿಮ್ಮ ಸೇವೆಗೆ ವಾಪಸ್ ಬಂದಿರುವೆ. ದೇವರು ದೊಡ್ಡವನು ಎನ್ನುತ್ತಾ ಸಚಿವರು ಗದ್ಗದಿತರಾದರು.

    ಕಾರ್ಯಕ್ರಮದಲ್ಲಿ ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷರಾದ ದಿನೇಶ್ ಹೆಗಡೆ, ಜಿಲ್ಲಾ ಕೆಡಿಪಿ ಸದಸ್ಯರಾದ ಪ್ರಸನ್ನ ಕುಮಾರ್ ಶೆಟ್ಟಿ, ಹರಿ ಪ್ರಸಾದ್ ಶೆಟ್ಟಿ, ಶಿವರಾಮ ಶೆಟ್ಟಿ, ವಿಕಾಸ ಹೆಗಡೆ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d