Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೋಳಂಬಳ್ಳಿಯಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರಿಂದ ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ದೇವರ ಮೂರ್ತಿ ಲೋಕಾರ್ಪಣೆ
    Uncategorized

    ಬೋಳಂಬಳ್ಳಿಯಲ್ಲಿ ಡಾ. ಡಿ. ವಿರೇಂದ್ರ ಹೆಗ್ಗಡೆ ಅವರಿಂದ ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ದೇವರ ಮೂರ್ತಿ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಬೋಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ ಪದ್ಮಾವತಿ ಅಮ್ಮನವರ ದೇವಸ್ಥಾನದಲ್ಲಿ 27 ಅಡಿ ಎತ್ತರದ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿ ಹಾಗೂ 21 ಅಡಿ ಎತ್ತರದ ಶ್ರೀ ರಾಮಚಂದ್ರ ದೇವರ ಏಕಶಿಲಾ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಲೋಕಾರ್ಪಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.

    Click Here

    Call us

    Click Here

    ಆಚಾರ್ಯ ಶ್ರೀ ಗುಲಾಬ್‌ ಭೂಷಣ ಮುನಿಮಹಾರಾಜರ ಸಾನಿಧ್ಯ ಹಾಗೂ ಸ್ವಸ್ತೀಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿ ಹುಂಬುಚ, ಸೋಂದಾ ಶ್ರೀ ಕ್ಷೇತ್ರ ಜೈನ ಮಠದ ಜಗದ್ಗುರು ಅಕಲಂಕ ಕೇಸರಿ ಸ್ವಸ್ತಿ ಶ್ರೀ ಭಟ್ಟ ಕಲಂಕ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ ಪ್ರತಿಷ್ಠಾಪನಾ ಕಾರ್ಯ ನೆರವೇರಿತು.

    ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ವಿರೇಂದ್ರ ಹೆಗ್ಡಡೆಯವರು ಶ್ರೀ ಕ್ಷೇತ್ರ ಬೋಳಂಬಳ್ಳಿಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ಮೂರ್ತಿ ಅದನ್ನು ನಿರ್ಮಾಣ ಮಾಡಿರುವವರ ಮನಸ್ಸಿನ ಪ್ರತೀಕ ಎಂಬಂತೆ ಮೂಡಿಬಂದಿದೆ. ಈ ಪವಿತ್ರ ಕಾರ್ಯದಲ್ಲಿ ಬೋಳಂಬಳ್ಳಿ ಮನೆತನ ಹಾಗೂ ಕ್ಷೇತ್ರದ ಧರ್ಮದರ್ಶಿಗಳಾದ ಧರ್ಮರಾಜ್‌ ಜೈನ್‌ ದಂಪತಿಯವರ ಭಕ್ತಿ ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ದೇವರು ಇಬ್ಬರದ್ದೂ ಕೂಡ ಆದರ್ಶ ವ್ಯಕ್ತಿತ್ವ. ಹಾಗಾಗಿ ಇಲ್ಲಿ ಈ ಇಬ್ಬರ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸುವುದು ಎಂದರೆ ಅದು ಮೂರ್ತಿ ಪೂಜೆಯಲ್ಲ ಬದಲಾಗಿ ಆದರ್ಶಗಳ ಪೂಜೆ. ಭಾರತೀಯ ಸಂಸ್ಕೃತಿಯ ತ್ಯಾಗ ಪ್ರವೃತ್ತಿಯನ್ನು ಮುಂದಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಇಂತಹ ಆದರ್ಶ ವ್ಯಕ್ತಿತ್ವದ ಮೂರ್ತಿ ಪೂಜೆ ಅವಶ್ಯ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು.
    ಭಗವಾನ್‌ ಬಾಹುಬಲಿ ಮತ್ತು ಶ್ರೀ ರಾಮಚಂದ್ರ ಸ್ವಾಭಿಮಾನದ ಸಂಕೇತ. ಜಗತ್ತಿನಲ್ಲಿ ಸ್ವಾರ್ಥ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಇಂತಹ ತ್ಯಾಗ ಮೂರ್ತಿಯನ್ನು ಪ್ರತಿಷ್ಠಾಪನೆ ಮೂಲಕ ವೈಭವೀಕರಿಸುವ ಪುಣ್ಯ ಕಾರ್ಯ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವುದು ಅಭಿನಂದನಾರ್ಹ ಎಂದರು.

    ಕಾರ್ಯಕ್ರಮದ ವೇದಿಕೆಯಲ್ಲಿ ಆಳುಪ ಮನೆತನದ ಧರ್ಮದರ್ಶಿಗಳಾದ ಧರ್ಮರಾಜ್‌ ಜೈನ್‌ ಹಾಗೂ ವನಿತಾ ಧರ್ಮರಾಜ್‌ ಜೈನ್‌, ಶೃದ್ಧಾ ಅಮಿತ್‌ ಕುಮಾರ್‌ ಧರ್ಮಸ್ಥಳ, ಸುಗ್ಗಿ ಸುಧಾಕರ್‌ ಶೆಟ್ಟಿ, ಉದ್ಯಮಿ ಜಯಶೀಲ ಶೆಟ್ಟಿ ಕಾಲ್ತೋಡು, ಬಾರ್ಕೂರು ಶಾಂತರಾಮ ಶೆಟ್ಟಿ, ರತ್ನಾಕರ ಜೈನ್‌ ಮಂಗಳೂರು, ಮಂಜುನಾಥ ರಾವ್‌ ಬಾರ್ಕೂರು, ಹರ್ಷೇಂದ್ರ ಜೈನ್‌ ಮಾಳ, ಉದ್ಯಮಿ ಸುಭಾಷ್‌ ಜೈನ್ ಕುಂದಾಪುರ, ಅನಿಲ್‌ಕುಮಾರ್‌ ಬೋಳಂಬಳ್ಳಿ, ಡಾ. ಅಕ್ಷತಾ ಆದರ್ಶ್‌, ಜಿನೇಶ್‌ಪ್ರಸಾದ್ ನೆಲ್ಲಿಕಾರು ಮೊದಲಾದವರು ಉಪಸ್ಥಿತರಿದ್ದರು. ನಿರೀಕ್ಷಾ ಹೊಸ್ಮಾರು ಪ್ರಾರ್ಥಿಸಿ, ಡಾ. ಆಕಾಶ್‌ರಾಜ್‌ ಸ್ವಾಗತಿಸಿದರು. ಬಬಿತಾ ಜೈನ್ ಸಾಗರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    Click here

    Click here

    Click here

    Call us

    Call us

    ರಥೋತ್ಸವ:
    ಸಂಜೆ ಶ್ರೀ ಪದ್ಮಾವತಿ ಅಮ್ಮನವರ ರಥಯಾತ್ರ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ, ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ, ಅಳದಂಗಡಿಯ ತಿಮ್ಮಣ್ಣ ಅರಸರಾದ ಪದ್ಮಪ್ರಸಾದ್‌ ಅಜಿಲ ಹಾಗೂ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ ಆಳ್ವ ಮೊದಲಾದ ಗಣ್ಯರು ಹಾಗೂ ಊರ ಪರವೂರು ಭಕ್ತಾಧಿಗಳು ರಥೋತ್ಸವ ಕಾರ್ಯಕ್ರಮದಲ್ಲಿ ಪುಣ್ಯ ಭಾಗಿಗಳಾದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d