Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಂಪೂರ್ಣ ನಿಯಂತ್ರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯಾಗುವುದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಾದಕ ವಸ್ತುಗಳಿಗೆ ಯುವ ಸಮುದಾಯ ಹೆಚ್ಚು ಆಕರ್ಷಿತವಾಗುತ್ತಿದೆ. ಇವುಗಳ ಬಳಕೆಯಿಂದ ದೇಹದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಹೆಚ್ಚು ಹೆಚ್ಚು ವಿದ್ಯಾಸಂಸ್ಥೆಗಳಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ ಅವರು, ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇವುಗಳು ಎಷ್ಟು ಪ್ರಮಾಣದಲ್ಲಿ ಉಪಯುಕ್ತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ಕಲೆ ಹಾಕಬೇಕು ಎಂದರು.

    ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ.  ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತಿತ ಕಾರ್ಯಕ್ರಮಗಳನ್ನು ಕಾರ್ಮಿಕ ಇಲಾಖೆಯ ವತಿಯಿಂದ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಇವುಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಿಂದಾಗ್ಗೆ ಕೃಷಿ ಜಮೀನುಗಳು, ತೋಟಗಳಿಗೆ ಭೇಟಿ ನೀಡಿ, ಗಾಂಜಾ ಬೆಳೆಗಳನ್ನು ಬೆಳೆಯುತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್‌ಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳು ಕಂಡುಬರುತ್ತಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವೀಸ್‌ಗಳ ಕಚೇರಿಗಳನ್ನು ಹಾಗೂ ಆನ್‌ಲೈನ್ ಮಾರುಕಟ್ಟಯೆ ಗೋದಾಮುಗಳನ್ನು ಪರಿಶೀಲಿಸಬೇಕು. ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ವಹಿಸಬೇಕು. ಅನುಮಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.

    Click here

    Click here

    Click here

    Call us

    Call us

    ಕರಾವಳಿ ಪೊಲೀಸನವರು ಮೀನುಗಾರಿಕಾ ಜೆಟ್ಟಿಗಳಲ್ಲಿ ಇವುಗಳ ಸರಬರಾಜು ಆಗುತ್ತಿವೆಯೇ ಎಂಬ ಬಗ್ಗೆ ಆಗಾಗ ಪರಿಶೀಲಿಸಬೇಕು. ಬೀಚ್‌ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಬಗ್ಗೆ ನಿಗಾ ವಹಿಸಬೇಕು ಎಂದರು.

    ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳ ಮಾಡಿದ 9 ಪ್ರಕರಣಗಳು ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಅವುಗಳಲ್ಲಿನ 6 ಪ್ರಕರಣಗಳಲ್ಲಿ 80,000 ರೂ. ದಂಡ ವಿಧಿಸಲಾಗಿದೆ. ಇನ್ನು 3 ಪ್ರಕರಣಗಳು ಚಾಲ್ತಿಯಲ್ಲಿವೆ. ಜೀವಕ್ಕೆ ಹಾನಿ ಉಂಟು ಮಾಡುವಂತಹ  ಆಹಾರ ಪದಾರ್ಥಗಳ ಮಾರಾಟ ಮಾಡಿದ 6 ಪ್ರಕರಣಗಳು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದು, ಪ್ರಗತಿಯಲ್ಲಿವೆ ಎಂದ ಅವರು ಮಾರಾಟವಾಗುವ ಸಿದ್ಧ ಆಹಾರಗಳ ಗುಣಮಟ್ಟ ಹಾಗೂ ಮತ್ತಿತರ ಆಹಾರ ಪದಾರ್ಥಗಳ ನಿರಂತರವಾಗಿ ಸ್ಯಾಂಪಲ್‌ಗಳನ್ನು ತೆಗೆದು ಪ್ರಯೋಗ ಶಾಲೆಗಳಿಗೆ ವಿಶ್ಲೇಷಣೆಗೆ ಕಳುಹಿಸಬೇಕು  ಎಂದು ಸೂಚನೆ ನೀಡಿದರು.

    ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ ಮಾತನಾಡಿ, ನಿರ್ಬಂಧಿತ ಮತ್ತುಬರಿಸುವ ಔಷಧಿಗಳು ಜನಸಾಮಾನ್ಯರೆಲ್ಲರಿಗೂ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು ಎಂದ ಅವರು, ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

    ಸಭೆಯಲ್ಲಿ ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d