ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ್ವಿತೀಯ ಪಿಯುಸಿ ಪರೀಕ್ಷೆ 2 ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹರಿಕೃಪಾ ಎಮ್ಎಸ್ 597 ಅಂಕ ದಾಖಲಿಸುವುದರ ಮೂಲಕ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ, ರಾಜ್ಯ ಮಟ್ಟದಲ್ಲಿ 4 ನೇ ರ್ಯಾಂಕ್ ಪಡೆದುಕೊಂಡು ಅದ್ವಿತೀಯ ಸಾಧನೆ ಮೆರೆದಿದ್ದಾಳೆ.
ವಿದ್ಯಾರ್ಥಿನಿಯ ಶೈಕ್ಷಣಿಕ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.










