Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವಿದ್ಯಾಧಿರಾಜ ಸಭಾಗೃಹ ಲೋಕಾರ್ಪಣೆ
    ಬೈಂದೂರು

    ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ವಿದ್ಯಾಧಿರಾಜ ಸಭಾಗೃಹ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ಪರ್ತಗಾಳಿ ಮಠದ 550 ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಇರುವ ಮಠದ ಶಾಖೆ, ಜಿಎಸ್‌ಬಿ ಸಮಾಜದ ದೇವಸ್ಥಾನಗಳಲ್ಲಿ ನಡೆಯುತ್ತಿರುವ 550 ಕೋಟಿ ಶ್ರೀರಾಮ ನಾಮ ತಾರಕ ಮಂತ್ರ ಜಪಯಜ್ಞವು ಯಶಸ್ವಿಯಾಗಿ ಸಾಗುತ್ತಿದ್ದು, ಈ ಜಪಯಜ್ಞದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಯುವಪೀಳಿಗೆ ಭಾಗವಹಿಸಬೇಕು. 2025ರ ಅಕ್ಟೋಬರ್‌ನಲ್ಲಿ ಪರ್ತಗಾಳಿಯಲ್ಲಿ 550 ಕೋಟಿ ರಾಮನಾಮ ತಾರಕ ಜಪದ ಹವನ, ಪೂರ್ಣಾಹುತಿ ನಡೆಯಲಿದ್ದು, ಜತೆಗೆ 77 ಅಡಿ ಕಂಚಿನ ಶ್ರೀರಾಮಚಂದ್ರ ದೇವರ ವಿಗ್ರಹ ಪ್ರತಿಷ್ಠಾಪನೆ ಜರುಗಲಿದೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠಾಧೀಶ ಶ್ರೀ ವಿದ್ಯಾಧೀಶ ಶ್ರೀಪಾದ ವಡೆಯರ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಉಪ್ಪುಂದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನೂತನ ನಿರ್ಮಾಣದ ಶ್ರೀ ವಿದ್ಯಾಧಿರಾಜ ಸಭಾಗೃಹ ಹಾಗೂ ಇತರ ನೂತನ ಕೊಠಡಿಗಳನ್ನು ಲೋಕಾರ್ಪಣೆಗೊಳಸಿ ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

    ರಾಮನಾಮ ಅಭಿಯಾನದಿಂದ ಸಮಾಜ ಜಾಗೃತಗೊಂಡಿರುವುದು ಸಮುದಾಯಕ್ಕೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಂತಾಗಿದೆ. ಈ ಅಭಿಯಾನದ ಅನುಭವಗಳನ್ನು ನಾವು ಜೀವನ ಪರ್ಯಂತ ಆನಂದದಿಂದ ಅನುಸರಿಸುವ ಮೂಲಕ ಮುಂದಿನ ಪೀಳಿಗೆಗೂ ಹಸ್ತಾಂತರಿಸಬೇಕು. ಹಿರಿಯರಿಂದ ಬಂದ ಆಚರಣೆ, ಸಂಪ್ರದಾಯಗಳನ್ನು ಮುಂದುವರಿಸಿಕೊಂಡು ಹೋದಾಗ ಮಾತ್ರ ನಮ್ಮ ಸಂಸ್ಕಾರ, ಸಂಸ್ಕೃತಿ ಉಳಿಯಲು ಸಾಧ್ಯ ಎಂದರು.

    ಸಂಜೆ ಉತ್ತರಕನ್ನಡ ಜಿಲ್ಲೆಯ ಮಂಕಿಯಿಂದ ಆಗಮಿಸಿದ ಸ್ವಾಮೀಜಿಯವರನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಿ ದೇವಳಕ್ಕೆ ಕರೆತಲಾಯಿತು. ದೇವಸ್ಥಾನದ ಟ್ರಸ್ಟ್, ಪೇಟೆ ಹತ್ತು ಸಮಸ್ತರು ಹಾಗೂ ಅರ್ಚಕ ವೃಂದದವರಿಂದ ಪಾದಪೂಜೆ ನೆರವೇರಿತು. ಮೇ.26ರ ತನಕ ಸ್ವಾಮೀಜಿಯವರು ಇಲ್ಲಿ ವಾಸ್ತವ್ಯವಿರಲಿದ್ದಾರೆ.

    ಗುರುವಾರ ಬೆಳಿಗ್ಗೆ ದೇವರಿಗೆ ಶತಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ ನಡೆಯಿತು. ರಾತ್ರಿ ಹನುಮಗಿರಿ ಮೇಳದವರಿಂದ ರಾಮ ರಾಮ ಶ್ರೀರಾಮ ಯಕ್ಷಗಾನ ಪ್ರದರ್ಶನಗೊಂಡಿತು. ಶುಕ್ರವಾರ ಏಕಾದಶಿ ಪ್ರಯುಕ್ತ ವಿವಿಧ ಭಜನಾ ತಂಡಗಳಿಂದ ವಿಶೇಷ ಭಜನಾ ಸಂಕೀರ್ತನೆ, ಗುರುಗಳಿಂದ ತಪ್ತ ಮುದ್ರಾಧಾರಣೆ, ಲಕ್ಷ ತುಳಸೀ ಅರ್ಚನೆ ಜರುಲಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖಂಬದಕೋಣೆ ಸೊಸೈಟಿ: ನಿವೃತ್ತ ಶಾಖಾ ವ್ಯವಸ್ಥಾಪಕರಿಗೆ ಬೀಳ್ಕೊಡುಗೆ, ಸನ್ಮಾನ

    20/05/2026

    ಬೈಕ್‌ಗೆ ಮಿನಿ ಬಸ್ ಢಿಕ್ಕಿ: ಸವಾರನಿಗೆ ಗಾಯ

    05/05/2026

    ರಾಘವೇಂದ್ರ ದೇವಾಡಿಗ ಅವರಿಗೆ ಜೆಸಿಐ ಬೈಂದೂರು ಸಿಟಿ ಗೌರವ

    05/05/2026
    Leave A Reply Cancel Reply

    13 − four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.