ಬೈಂದೂರು: ಬೈಕ್‌ಗೆ ನಾಯಿಕಟ್ಟಿ ಎಳೆದೊಯ್ದ ವಿಡಿಯೋ ವೈರಲ್. ಸಾರ್ವಜನಿಕರಿಂದ ಆಕ್ರೋಶ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತನ್ನ ಮನೆಯಲ್ಲಿ  ಸಾಕಿ ಬೆಳಸಿದ ನಾಯಿಯನ್ನು  ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

Click Here

Call us

Click Here

ಯಡ್ತರೆ ಗ್ರಾಮದ ರಾ.ಹೆ 66ರ ಬೈಂದೂರು – ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್‌ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕು ನಾಯಿಯೊಂದನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಡಿಯೋವನ್ನು ಪೊಲೀಸರು ಗಮನಿಸಿ, ಪರಿಶೀಲಿಸಿದಾಗ ವ್ಯಕ್ತಿಯ ಬೈಂದೂರು ಪಡುವರಿ‌ ಗ್ರಾಮದ ಸುಬ್ರಹ್ಮಣ್ಯ ಎಂಬುದಾಗಿ ತಿಳಿದು ಬಂದಿದೆ. ಮೂಕಪ್ರಾಣಿಯನ್ನು ಈ ರೀತಿಯಾಗಿ ಹಿಂಸಾತ್ಮಕ ರೀತಿಯಲ್ಲಿ ಎಳೆದಾಡಿಕೊಂಡು ಹೋಗಿರುವುದರಿಂದ ನಾಯಿಯು ಗಾಯಗೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಅದರಂತೆ ಆರೋಪಿ ವಿರುದ್ಧ ಬೈಂದೂರು ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

Leave a Reply