Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲೆಯಲ್ಲಿ ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್
    ಉಡುಪಿ ಜಿಲ್ಲೆ

    ಜಿಲ್ಲೆಯಲ್ಲಿ ಪ್ರವಾಹ, ಅತಿವೃಷ್ಠಿ ಹಾನಿಗಳಿಗೆ ತ್ವರಿತವಾಗಿ ಸ್ಪಂದಿಸಿ: ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಮಳೆಹಾನಿ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಆನ್‌ಲೈನ್ ಮೂಲಕ ಸಭೆ ನಡೆಸಿ ಮಾತನಾಡಿದರು.

    ಈ ಬಾರಿ ಅವಧಿಗೆ ಮುನ್ನವೇ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ನಿರೀಕ್ಷೆಗಿಂತ ಹೆಚ್ಚಾಗಿದೆ. ಜನವರಿಯಿಂದ ಈವರೆಗೆ ವಾಡಿಕೆಯಂತೆ 177.4 ಮಿ.ಮೀ ಮಳೆಯಾಗಬೇಕಿತ್ತು. ಆದರೆ, 801.7 ಮಿ.ಮೀ ಕ್ಕೂ ಮಳೆಯಾಗಿ, ಮೂರು ಪಟ್ಟು ಹೆಚ್ಚಾಗಿದೆ. ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳ ಮಳೆಗಾಲದಲ್ಲಿ ಉಂಟಾಗುವ ಪ್ರವಾಹ, ಅತಿವೃಷ್ಠಿ ಸಮಸ್ಯೆಗಳನ್ನು ಎದುರಿಸಲು ಅಗತ್ಯವಾಗಿರುವ ಎಲ್ಲಾ ರೀತಿಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಟ್ಟುಕೊಂಡು ಸಮರ್ಪಕವಾಗಿ ಎದುರಿಸಲು ಸನ್ನದ್ಧರಾಗಿರಬೇಕು ಎಂದು ಸೂಚನೆ ನೀಡಿದರು.

    ಜಿಲ್ಲಾ ಹಾಗೂ ತಾಲೂಕು ಮಟ್ಟಗಳಲ್ಲಿ ಕಂಟ್ರೋಲ್ ರೂಂಗಳು 24*7 ಕಾರ್ಯನಿರ್ವಹಿಸಬೇಕು. ಯಾವುದೇ ಮಳೆಹಾನಿ ದೂರುಗಳು ಬಂದಲ್ಲಿ ಕೂಡಲೇ ಸ್ಪಂದಿಸಬೇಕು. ಅತಿವೃಷ್ಠಿಯಿಂದ ತೊಂದರೆಗೊಳಗಾದವರಿಗೆ ಪರಿಹಾರವನ್ನು ಸಹ ತ್ವರಿತವಾಗಿ ನೀಡಬೇಕು ಎಂದ ಅವರು, ವರಾಹಿ ಜಲಾಶಯದ ನೀರಿನ ಮಟ್ಟ ಹಾಗೂ ಒಳಹರಿವಿನ ಬಗ್ಗೆ ಮಾಹಿತಿ ಆಗಿಂದಾಗ್ಗೆ ಪಡೆಯುತ್ತಿರಬೇಕು. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಮುಂಚಿತವಾಗಿಯೇ ತಿಳಿಸಿ, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ವಿತರಿಸಬೇಕು. ಇದರಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಜಿಲ್ಲೆಗೆ ಹೊರಗಿನಿಂದ ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದಲ್ಲಿ ಹಾಗೂ ಹಳ್ಳ, ಕೊಳ್ಳ, ಜಲಪಾತಗಳ ಬಗ್ಗೆ ಅರಿವಿಲ್ಲದೇ ಪ್ರಾಣಹಾನಿ ಪ್ರಕರಣಗಳು ಉಂಟಾಗುವ ಸಾಧ್ಯತೆಗಳು ಇವೆ. ಈ ಬಗ್ಗೆ ಸಾರ್ವನಿಕರಿಗೆ ಮುನ್ಸೂಚನೆ ನೀಡುವ ಫಲಕಗಳನ್ನು ಅಳವಡಿಸಬೇಕು. ಸಾಧ್ಯವಾದಲ್ಲಿ ಸಿಬ್ಬಂದಿಗಳ ನಿಯೋಜನೆಯನ್ನು ಮಾಡಬೇಕು ಎಂದು ಸೂಚನೆ ನೀಡಿದರು.

    ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧಿಕ ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ಗಡಿಭಾಗದ ಸಮೀಪ ಸಹ ಸಣ್ಣ-ಪುಟ್ಟ ಪ್ರಕರಣಗಳು ಆಗಿರುವುದು ಕೇಳಿಬರುತ್ತಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವ್ಯವಸ್ಥಿತವಾಗಿರುವಂತೆ ಕ್ರಮ ವಹಿಸಬೇಕು. ಅನಗತ್ಯವಾಗಿ ಕಾನೂನು ಉಲ್ಲಂಘಿಸುವ ಘಟನೆಗಳು ಜರುಗದ ಹಾಗೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

    ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ. ಮಾತನಾಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರಸ್ಥಾನಗಳಲಿದ್ದು, ಪ್ರಕೃತಿ ವಿಕೋಪ ನಿರ್ವಹಣೆ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಲು ಕಾರ್ಯಪ್ರವೃತ್ತರಾಗಿರಬೇಕು. ಜನಸಾಮಾನ್ಯರಿಗೆ ಸ್ಪಂದಿಸಲು ಅನುಕೂಲವಾಗುವ ಹಾಗೆ ತಮ್ಮ ಮೊಬೈಲ್ ಅನ್ನು ದಿನದ ಇಪ್ಪತ್ತನಾಲ್ಕು ಗಂಟೆಯೂ ಸಕ್ರೀಯವಾಗಿ ಇಟ್ಟುಕೊಂಡು ದೂರು ಬಂದಾಗ ಕೂಡಲೇ ಸ್ಪಂದಿಸಬೇಕೆಂದರು.

    ಕಂಟ್ರೋಲ್ ರೂಂಗಳ ನಂಬರ್‌ಗಳೂ ಸಹಜವಾಗಿ ಜನರ ಮನಸ್ಸಿನಲ್ಲಿ ಇರುವ ಹಾಗೆ ಸರಳವಾಗಿರಬೇಕು. ಅವುಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವುದರೊಂದಿಗೆ ಸ್ಪಂದಿಸಬೇಕು ಎಂದ ಅವರು, ಮಳೆಯಿಂದ ಉಂಟಾಗುವ ವಿದ್ಯುತ್‌ಚ್ಛಕ್ತಿ ಅವಘಡಗಳು ಆಗದಂತೆ ಎಚ್ಚರಿಕೆ ವಹಿಸಬೇಕು. ವಿದ್ಯುತ್‌ಚ್ಛಕ್ತಿ ಸೌಲಭ್ಯದ ಪುನರ್ ಕಾರ್ಯಗಳನ್ನು ಶೀಘ್ರವಾಗಿ ಕೈಗೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆ, ಹಾನಿ ಸೇರಿದಂತೆ ಮತ್ತಿತರ ವಿವರಗಳನ್ನು ಸವಿಸ್ತಾರವಾಗಿ ತಿಳಿಸುವುದರೊಂದಿಗೆ ಪ್ರಕೃತಿ ವಿಕೋಪ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ತಯಾರಿ ಬಗ್ಗೆ ತಿಳಿಸಿದ ಅವರು, ಪ್ರವಾಸಿ ತಾಣಗಳಲ್ಲಿ ಜೂನ್ ಆರಂಭದಿಂದಲೇ ಮೂವತ್ತಕ್ಕೂ ಹೆಚ್ಚು ಗೃಹ ರಕ್ಷಕ ದಳದವರನ್ನು ನಿಯೋಜಿಸುವುದಾಗಿ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಡಿ.ಎಫ್.ಓ ಗಣಪತಿ, ಸಹಾಯಕ ಕಮೀಷನರ್ ರಶ್ಮಿ ಎಸ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    06/12/2025

    ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d