ಹೋಟೆಲ್ ಉದ್ಯಮಿ ಸುರೇಶ್ ಪೂಜಾರಿ ಪಡುಕೋಣೆ ವಿಧಿವಶ 

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್. ಪೂಜಾರಿ (87) ಅವರು ಇಂದು ಮುಂಬೈಯ ಸ್ವಗೃದಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

Click Here

Call us

Click Here

ಅವರು ಕುಂದಾಪುರದ ಬಿಲ್ಲವ ಸಮಾಜ ಸೇವಾ ಸಂಘ ಗೌರವಾಧ್ಯಕ್ಷರಾಗಿ ಹಾಗೂ ಕುಂದಾಪುರದ ಶ್ರೀ ನಾರಾಯಣ ಗುರು ಏಜ್ಯುಕೇಶನಲ್ & ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.

ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Leave a Reply