ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ ಮತ್ತು ಇಲ್ಲಿನ ಅಂಗನವಾಡಿ ಕೇಂದ್ರದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ ಆಚಾರ್ಯ ಮತ್ತು ಸಹ ಶಿಕ್ಷಕ ಯೋಗೇಶ್ ಮಕ್ಕಳಿಗೆ ಗಿಡಗಳನ್ನು ವಿತರಿಸಿ ಅವುಗಳ ಪ್ರಾಮುಖ್ಯತೆ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೋಷಕರು ಉಪಸ್ಥಿತರಿದ್ದರು.










