Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಹಣಬರಮಕ್ಕಿ ಕಾಲೋನಿ ಜನರಿಗೆ ಮೂಲಭೂತ ಸೌಕರ್ಯಗಳದ್ದೇ ಸಮಸ್ಯೆ
    ವಿಶೇಷ ವರದಿ

    ಬೈಂದೂರು: ಹಣಬರಮಕ್ಕಿ ಕಾಲೋನಿ ಜನರಿಗೆ ಮೂಲಭೂತ ಸೌಕರ್ಯಗಳದ್ದೇ ಸಮಸ್ಯೆ

    Updated:17/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಆಲ್ಲಿನ ಕಾಲೋನಿ ಜನರಿಗೆ ಕುಡಿಯಲು ನೀರಿಲ್ಲ, ವಾಸಿಸಲು ಸ್ವಂತದ್ದು ಎಂದು ಹೇಳಿಕೊಳ್ಳುವ ಮನೆಯೂ ಇಲ್ಲ. ದಶಕವೇ ಕಳೆದರೂ ಈ ನೂರಾರು ಕುಟುಂಬಗಳಿಗಿನ್ನೂ ಮೂಲಭೂತ ಸೌಕರ್ಯ ಹಾಗೂ ಹಕ್ಕುಪತ್ರವೆನ್ನವುದು ಕನಸಾಗಿಯೇ ಉಳಿದಿದೆ. ತಮಗೆ ಸಿಗಬೇಕಾದ ಸೌಕರ್ಯವನ್ನಾದರೂ ದೊರಕಿಸಿಕೊಡಿ ಎಂದು ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊದಿನಪುರ ಹಣಬರಮಕ್ಕಿ ಕಾಲೋನಿಯ ಜನರು ಜನಪ್ರತಿನಿಧಿಗಳಲ್ಲಿ ಮನವಿ ಸಲ್ಲಿಸುತ್ತಲೇ ಬಂದಿದ್ದಾರೆ. ಆದರೂ ಈವರೆಗೂ ಅವರ ನೋವಿಗೆ ನೆರವಾದವರು ಮಾತ್ರ ಯಾರೂ ಇಲ್ಲ.
    ಹಕ್ಕಪತ್ರವಿಲ್ಲ, ಸರಕಾರಿ ಸವಲತ್ತೂ ದೊರೆಯೊಲ್ಲ

    Click Here

    Call us

    Click Here

    ಹಣಬರಮಕ್ಕಿ ಕಾಲೋನಿಯ ಜನ ಸುಮಾರು 12-13 ವರ್ಷಗಳಿಂದ ಇಲ್ಲಿಯೇ ವಾಸಿಸುತ್ತಿದ್ದರೂ ಈವರೆಗೂ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ದೊರೆತಿಲ್ಲ. ಹಕ್ಕುಪತ್ರವಿಲ್ಲದೇ ಇಲ್ಲಿನ ನಿವಾಸಿಗಳಿಗೆ ಯಾವ ಸರಕಾರಿ ಸೌಲಭ್ಯಗಳೂ ದೊರಕುತ್ತಿಲ್ಲ. ರೆಷನ್ ಕಾರ್ಡು, ವೋಟರ್ ಐಡಿ ಯಾವುದೂ ಇಲ್ಲದೇ ಪಾಡು ಹೇಳತೀರದು.

    ಕುಡಿಯುವ ನೀರಿನ ಸಮಸ್ಯೆ
    ಕಾಲೋನಿಯಲ್ಲಿ ಕುಡಿಯವ ನೀರಿನದ್ದೇ ದೊಡ್ಡ ಸಮಸ್ಯೆ. ಮಳೆಗಾಲದಲ್ಲಾದರೂ ದೂರದ ಸರಕಾರಿ ಬಾವಿಯನ್ನು ಇಲ್ಲಿನ ಜನ ಅವಲಂಬಿಸಿದ್ದಾರೆ. ಬೇಸಿಗೆ ಬಂತೆಂದರೆ ಆ ಬಾವಿಯಲ್ಲಿಯೂ ನೀರಿನ ಕೊರತೆ ಕಾಣಿಸಿಕೊಳ್ಳುತ್ತದೆ. ಇನ್ನು ದಿನನಿತ್ಯದ ಉಪಯೋಗಕ್ಕಾಗಿ ತೋಡಿನಲ್ಲಿ ಹರಿದು ಬರುವ ನೀರನ್ನೇ ಜನ ಅವಲಂಬಿಸಿಕೊಂಡಿದ್ದಾರೆ.

    ರಸ್ತೆಯೆಲ್ಲ ಹಳ್ಳವಾಗಿದೆ.
    ಹಣಬರಮಕ್ಕಿ ಕಾಲೋನಿಗೆ ಬರಬೇಕೆಂದರೆ ಹರಸಾಹಸ ಪಡಬೇಕು. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದೇ ಇರುವ ಮಣ್ಣಿನ ರಸ್ತೆಯ ಮೇಲೆಯೇ ನೀರು ಹರಿಯುತ್ತಿರುತ್ತೆ. ಶಾಲೆಗೆ ತೆರಳುವ ಮಕ್ಕಳು, ಅಶಕ್ತರಿಗೆ ಈ ಮಾರ್ಗದಲ್ಲಿ ತೆರಳುವುದು ಕೂಡ ಕಷ್ಟವೇ. ಮಳೆಗಾಲದ ಆರಂಭದಿಂದಲೂ ಈ ಸ್ಥಿತಿ ಮುಂದವರಿದಿದ್ದರೂ ಸ್ಥಳೀಯಾಡಳಿತ ಮಾತ್ರ ಕಣ್ಣಮುಚ್ಚಿ ಕುಳಿತಿದೆ.

    ಕರೆಂಟಿನದ್ದೂ ಸಮಸ್ಯೆ
    ಕಾಲೋನಿಯ ಎಲ್ಲಾ ಮನೆಗಳಿಗೆ ಈವರೆಗೆ ಕರೆಂಟು ದೊರೆತಿಲ್ಲ. ಇಲ್ಲಿನ ನಿವಾಸಿಗಳು ಸಾಕಷ್ಟು ಭಾಗಿ ಜನಪ್ರತಿನಿಧಿಗಳ ಸಂಪರ್ಕಿಸಿ ಕರೆಂಟು ಹಾಕಿಸಿಕೊಳ್ಳಲು ಸೋತಿದ್ದಾರೆ. ಗ್ರಾಮಸಭೆಯಲ್ಲಿ ಎಲ್ಲರಿಗೂ ಕರೆಂಟು ನೀಡುವ ಭರವಸೆ ನೀಡದ ಮೇಲೂ ಪಂಚಾಯತಿಗೆ ಅರ್ಜಿ ಸಲ್ಲಿಸಲು ಹೋದರೆ ನೂರೊಂದು ಕಾರಣ ನೀಡಿ ಅರ್ಜಿ ತಿರಸ್ಕರಿಸುತ್ತಿದ್ದಾರೆ ಇಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

    Click here

    Click here

    Click here

    Call us

    Call us

    ಶಿರೂರು ಗ್ರಾಮ ಪಂಚಾಯತ್ ಇನ್ನಾದರೂ ಎಚ್ಚೆತ್ತುಕೊಂಡು ಕಾಲೋನಿಯ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮನಸ್ಸು ಮಾಡಬೇಕಿದೆ. ಜನಪ್ರತಿನಿಧಿಗಳು ಭರವಸೆಯನ್ನು ನೀಡುವುದರ ಹೊರತಾಗಿಯೂ ನೈಜ ಕಾಳಜಿಯನ್ನು ತೋರಿ ದಶಕಗಳ ಸ್ವಯತ್ತತೆಯ ಕೂಗಿಗೆ ಧ್ವನಿಯಾಗಬೇಕಿದೆ.

    ಚಿತ್ರ ವರದಿ: ಸುನಿಲ್ ಹೆಚ್. ಜಿ. ಬೈಂದೂರು

    _MG_9467 _MG_9480 _MG_9484

    Like this:

    Like Loading...

    Related

    Shiruru
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಅರಣ್ಯ ಲೋಕದ ಮರುಸೃಷ್ಟಿ – ಕುಮ್ರಿಕಾನ್. ‌ಬೈಂದೂರು ಉತ್ಸವದ ವಿಶೇಷ ಆಕರ್ಷಣೆ

    01/11/2024

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d