Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಾಣಿಗ ಪ್ರತಿಷ್ಠಾನ ಬೈಂದೂರು ವತಿಯಿಂದ ಪ್ರತಿಭಾ ಪುರಸ್ಕಾರ, ಕೊಡೆ, ಕಲಿಕಾ ಸಾಮಾಗ್ರಿ ವಿತರಣೆ
    ಊರ್ಮನೆ ಸಮಾಚಾರ

    ಗಾಣಿಗ ಪ್ರತಿಷ್ಠಾನ ಬೈಂದೂರು ವತಿಯಿಂದ ಪ್ರತಿಭಾ ಪುರಸ್ಕಾರ, ಕೊಡೆ, ಕಲಿಕಾ ಸಾಮಾಗ್ರಿ ವಿತರಣೆ

    Updated:12/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಯ ಮುಂದಿನ ಶಿಕ್ಷಣ ಸಾಧನೆಗೆ ಉತ್ತೇಜನ ನೀಡುತ್ತದೆ. ವಿದ್ಯಾರ್ಥಿವೇತನ ಪಡೆದುಕೊಳ್ಳುವಾಗ ಆಗುವ ಖುಷಿಯೇ ವಿಶಿಷ್ಟವಾದುದು. ಮುಂದೆ ಈ ವಿದ್ಯಾರ್ಥಿಗಳು ಸಾಧನೆಯ ಪಥಕ್ಕೇರಿದ ಬಳಿಕ ಪ್ರೋತ್ಸಾಹಿಸಿದ ಸಂಸ್ಥೆಗಳನ್ನು ಮರೆಯಬಾರದು, ಸಮಾಜಕ್ಕೆ ಸ್ಪಂದಿಸುವ ಸಮಾಜಮುಖಿತ್ವ ಮೈಗೂಡಿಸಿಕೊಳ್ಳಬೇಕು ಎಂದು ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಹೇಳಿದರು.

    Click Here

    Call us

    Click Here

    ಅವರು ಗಾಣಿಗ ಪ್ರತಿಷ್ಠಾನ ರಿ., ಬೈಂದೂರು ವತಿಯಿಂದ ಬೈಂದೂರು ವತ್ತಿನಕಟ್ಟೆಯ ಮಹಾಸತಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಎಸ್.ಎಸ್.ಎಲ್.ಸಿ., ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ ಪುಸ್ತಕ, ಕಲಿಕೋಪಕರಣ, ಕೊಡೆ ವಿತರಣೆ, ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಗಾಣಿಗ ಪ್ರತಿಷ್ಠಾನ ರಿ., ಬೈಂದೂರು ಇದರ ಅಧ್ಯಕ್ಷರಾದ ಕೆ. ರಮೇಶ ಗಾಣಿಗ ಕೊಲ್ಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದಲ್ಲಿ ಯಾರೂ ಕೂಡಾ ವಂಚಿತರಾಗಬಾರದು. ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ, ಸಮಾಜದ ಸತ್ಪ್ರಜೆಗಳಾಗಿ ರೂಪಿಸಿ. ಮಕ್ಕಳಿಗೆ ಸಮಾಜಮುಖಿ ಚಿಂತನೆ, ಸಮಯಪ್ರಜ್ಞೆ, ಶಿಸ್ತು, ಶ್ರದ್ದೆಯನ್ನು ಕಲಿಸಿ ಅವರನ್ನು ಸಮಾಜದ ಆಧಾರಸ್ತಂಭಗಳಾಗಿ ಮಾಡಿ ಎಂದು ಹೇಳಿದ ಅವರು, ಹಲವಾರು ಯೋಜನೆಗಳು ನಮ್ಮ ಪ್ರತಿಷ್ಠಾನದ ಮುಂದೆ ಇದೆ. ಪ್ರಮುಖವಾಗಿ ಗಾಣಿಗ ಸಮಾಜ ಧಾರ್ಮಿಕತೆ ಬಗ್ಗೆಯೂ ಒತ್ತು ನೀಡಬೇಕು, ಬೈಂದೂರಿನ ಗೋಪಿನಾಥ ದೇವಸ್ಥಾನ ಅಭಿವೃದ್ಧಿ ಕಾರ್ಯಕ್ಕೆ ತಮ್ಮಲ್ಲರ ಸಹಕಾರ ಬೇಕು ಎಂದು ಹೇಳಿದರು.

    ಬೈಂದೂರು ಪಟ್ಟಣ ಪಂಚಾಯತ್ ನಾಮ ನಿರ್ದೇಶಿತ ಸದಸ್ಯರಾದ ಬಿ.ಎಂ ನಾಗರಾಜ ಗಾಣಿಗ ಬಂಕೇಶ್ವರ ವಿದ್ಯಾರ್ಥಿವೇತನ ವಿತರಿಸಿದರು. ಕುಂದಾಪುರ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾದ ಸತೀಶ ಗಾಣಿಗ ಕುಂದಾಪುರ ಕಲಿಕಾ ಸಾಮಾಗ್ರಿ ವಿತರಿಸಿದರು. ಚಿಕ್ಕಯ್ಯ ಗಾಣಿಗ ಬಂಕೇಶ್ವರ ವಿದ್ಯಾರ್ಥಿಗಳಿಗೆ ಉಚಿತ ಕೊಡೆ ವಿತರಿಸಿದರು.

    ಯುಬಿ ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಸಂಯೋಜಕಿ ಪ್ರೇಮ ಗಾಣಿಗ,  ಪ್ರಗತಿಪರ ಕೃಷಿಕ ರಾಜು ಗಾಣಿಗ ಹುಳುವಾಡಿ, ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖಾ ವ್ಯವಸ್ಥಾಪಕ ಸುದರ್ಶನ ಗಾಣಿಗ,  ಆರೋಗ್ಯ ಇಲಾಖೆಯ ನಿವೃತ್ತ ಅಧಿಕಾರಿ ನಾಗಪ್ಪ ಗಾಣಿಗ ಶಿರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆನಂದ ಗಾಣಿಗ ಉಪ್ಪುಂದ, ಉಪ್ಪುಂದ ಗ್ರಾ.ಪಂ. ಉಪಾಧ್ಯಕ್ಷೆ ಮಹಾಲಕ್ಷ್ಮೀ, ರಂಗಕರ್ಮಿ ಗಣೇಶ ಟೈಲರ್ ಅವರನ್ನು ಸನ್ಮಾನಿಸಲಾಯಿತು. ಕುಂದಾಪುರ ವೆಂಕಟರಮಣ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ ಹರೇಗೋಡು ಅವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್‌ ಪಡೆದ ಸುಶ್ಮೀತಾ ಎಸ್. ಗಾಣಿಗ ಗಂಗೊಳ್ಳಿ, ಪಿಯುಸಿಯಲ್ಲಿ 8ನೇ ರ್ಯಾಕ್‌ ಪಡೆದ ಸಂಜನಾ ಗಾಣಿಗ ತಗ್ಗರ್ಸೆ ಅವರನ್ನು ಸನ್ಮಾನಿಸಲಾಯಿತು.

    ಎಸ್.ಎಸ್.ಎಲ್.ಸಿ, ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಲಾಯಿತು.

    ಸುಮನಾ ಪಡುಕೋಣೆ, ಸ್ವಾತಿ, ಗಂಗಮ್ಮ ಸನ್ಮಾನಿತರ ಪರಿಚಯಿಸಿದರು. ಸತ್ಯನಾರಾಯಣ ಗಾಣಿಗ ನಾವುಂದ ಪ್ರಾರ್ಥನೆ ಮಾಡಿದರು. ಗಾಣಿಗ ಪ್ರತಿಷ್ಠಾನ ರಿ., ಬೈಂದೂರು ಇದರ ಸಂಘಟನಾ ಕಾರ್ಯದರ್ಶಿ, ಪ್ರತಿಭಾ ಪುರಸ್ಕಾರ ಸಮಿತಿಯ ಪ್ರಮುಖರಾದ ಶಿವಾನಂದ ಗಾಣಿಗ ಸ್ವಾಗತಿಸಿ, ನಾಗೇಂದ್ರ ಗಾಣಿಗ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    two × 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.