Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಕೊರಗ ಸಂಘಟನೆಯಿಂದ ಪ್ರತಿಭಟನೆ. ನಮ್ಮ ಭೂಮಿ ನಮ್ಮ ಹಕ್ಕು ಆಗ್ರಹ
    ಊರ್ಮನೆ ಸಮಾಚಾರ

    ಬೈಂದೂರು: ಕೊರಗ ಸಂಘಟನೆಯಿಂದ ಪ್ರತಿಭಟನೆ. ನಮ್ಮ ಭೂಮಿ ನಮ್ಮ ಹಕ್ಕು ಆಗ್ರಹ

    Updated:12/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ಮಹತ್ಮಾ ಜ್ಯೋತಿಬಾಪುಲೆ ಕೊರಗರ ಕಲಾ ವೇದಿಕೆ ನೇತೃತ್ವದಲ್ಲಿ ತಾಲೂಕಿನ ಕೊರಗರ ಭೂಮಿ ಸಮಸ್ಯೆ ಮತ್ತು ಇತರ ಬೇಡಿಕೆ ಆಗ್ರಹಿಸಿ ನಮ್ಮ ಭೂಮಿ ನಮ್ಮ ಹಕ್ಕು ಪ್ರತಿಭಟನಾ ರ್ಯಾಲಿ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯಿತು.

    Click Here

    Call us

    Click Here

    ಈ ಸಂದರ್ಭ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿ, ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಲಾಯಿತು. ತಾಲೂಕಿನ ಕೊರಗ ಸಮುದಾಯದ ಹಲವು ಕುಟುಂಬಗಳು ಭೂಮಿಯಿಂದ ವಂಚಿತರಾಗಿದ್ದಾರೆ. ಕೊರಗರಿಗೆ ಭೂಮಿ ನೀಡುವ ಬಗ್ಗೆ ಹಲವು ಬಾರಿ ಸಭೆ ನಡೆದಿದ್ದರೂ ಕೂಡ ಈವರೆಗೆ ಯಾವ ಕುಟುಂಬಗಳಿಗೂ ಭೂಮಿ ನೀಡುವ ಕಾರ್ಯ ನಡೆದಿಲ್ಲ ಶೀಘ್ರ, ಕೊರಗ ಸಮುದಾಯದವರಿಗೆ ಕೃಷಿ ಚಟುವಟಿಕೆಗಳಿಗೆ ಯೋಗ್ಯವಾದ ಭೂಮಿ ನೀಡಬೇಕು ಹಾಗೂ ಮೂಲ ಸೌಕರ್ಯ ಕಲಿಸಬೇಕು ಎಂದು ಆಗ್ರಹಿಸಿದರು.

    ಪ್ರತೀ ಎರಡು ತಿಂಗಳಿಗೊಮ್ಮೆ ಕೊರಗರ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ಕೊರಗರ ಭೂಮಿ ಹಾಗೂ ಇತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆಯನ್ನು ಕರೆಯಬೇಕು. ಆ ಸಭೆಯಲ್ಲಿ ಕಂದಾಯ ಇಲಾಖೆಯ ಗ್ರಾಮಆಡಳಿತಾಧಿಕಾರಿ, ಕಂದಾಯ ಅಧಿಕಾರಿಗಳು ಭಾಗವಹಿಸಿ ಭೂಮಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದರು.

    ನಾಡಾ ಗ್ರಾ.ಪಂ. ವ್ಯಾಪ್ತಿಯ ಪಡುಕೋಣೆಯಲ್ಲಿ ಎಂಪಿಸಿ ಸೆಂಟರ್ ಮಂಜೂರಾಗಿದ್ದು ಇದಕ್ಕೆ ಜಾಗ ಗುರುತಿಸಿಕೊಡುವಮತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿ ಎಂಟು ತಿಂಗಳು ಕಳೆದರೂ ಇನ್ನೂ ಜಾಗ ಗುರುತಿಸುವ ಕಾರ್ಯವಾಗಿಲ್ಲ ಎಂದು ದೂರಿದ ಕೊರಗ ಸಂಘಟನೆಯ ಮುಖಂಡರು ತಾಲೂಕಿನ ಬೈಂದೂರು, ಕಾಲ್ಲೋಡು, ತಗ್ಗರ್ಸೆ, ಗೋಳಿಹೊಳೆ, ಜಡ್ಕಲ್, ಹೇರೂರು ಮೊದಲಾದ

    ಗ್ರಾ.ಪಂ. ವ್ಯಾಪ್ತಿಯ ಕೊರಗ ಕುಟುಂಬಗಳಿಗೆ ಭೂಮಿಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಅದನ್ನು ಇತ್ಯರ್ಥಪಡಿಸಿ, ಭೂಮಿ ವಂಚಿತ ಕೊರಗ ಕುಟುಂಬಗಳಿಗೆ ಭೂಮಿ ಹಂಚಲು ಶೀಘ್ರ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಸಮಸ್ಯೆಗಳಿಗೆ ಆಡಳಿತ ವ್ಯವಸ್ಥೆ ಸ್ಪಂದಿಸದಿದ್ದರೆ ಒಂದು ತಿಂಗಳ ಬಳಿಕ ನ್ಯಾಯಕ್ಕಾಗಿ ತಾಲೂಕು ಆಡಳಿತ ಸೌಧದ ಎದುರು ಅಹೋರಾತ್ರಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು.

    Click here

    Click here

    Click here

    Call us

    Call us

    ಪ್ರತಿಭಟನ ಸ್ಥಳಕ್ಕೆ ಶಾಸಕ ಗುರುರಾಜ ಗಂಟೆಹೊಳೆ ಭೇಟಿ ನೀಡಿ, ಸ್ಥಳದಲ್ಲಿಯೇ ಕುಂದಾಪುರದ ಸಹಾಯಕ ಕಮಿಷನರ್ ಅವರೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ಕೊರಗ ಕುಟುಂಬಗಳಿಗೆ ಭೂಮಿ ನೀಡುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಶೀಘ್ರ ಸಂಬಂಧಿತ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಕೊರಗ ಸಂಘಟನೆಯ ಮುಖಂಡರಾದ ಗಣೇಶ ಕುಂದಾಪುರ, ಗಣೇಶ ಬಾರಕೂರು, ಸೂರಸಿದ್ದ ಹೇರೂರು, ವೈ. ಲಕ್ಷ್ಮಣ ಕೊರಗ ಬೈಂದೂರು, ಚಂದ್ರಶೇಖರ ಹೇರೂರು, ಸುರೇಶ ಯಳಜಿತ್, ಶಂಕರ ಬೋಳಂಬಳ್ಳಿ, ವಿನಿತಾ ಪಡುಕೋಣೆ, ಸಿಐಟಿಯು ಮುಖಂಡ ರಾಜು ಪಡುಕೋಣೆ, ಸಿಐಟಿಯು ಮುಖಂಡ ಸುರೇಶ ಕಲ್ಲಾಗಾರ್, ಚಂದ್ರ ಜಡಲ್, ಮಹಾಬಲ ಕೋಟ, ಗಿರಿಜಾ ಮುದೂರು, ಸುನೀತಾ ಪಡುಕೋಣೆ, ಗುಂಡ ಜಡ್ಗಲ್, ನಾಗಮ್ಮ ಬೈಂದೂರು, ಭಾರತಿ ಶಿರೂರು, ರುಕ್ಕಿಣಿ ಮರವಂತೆ, ಯಡ್ತರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ ಪೂಜಾರಿ, ಬೈಂದೂರಿನ ಸಾಮಾಜಿಕ ಕಾರ್ಯಕರ್ತ ಸುಬ್ರಹ್ಮಣ್ಯ ಬಿಜೂರು, ಮತ್ತಿತರರು ಉಪಸ್ಥಿತರಿದ್ದರು.

    ಬಳಿಕ ಜಿಲ್ಲಾ ಜನಸಮನ್ವಯಾಧಿಕಾರಿ ನಾರಾಯಣ ಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.