ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಜಿ ಸಭಾಪತಿ ಕೆ ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರತಾಪಚಂದ್ರ ಶೆಟ್ಟಿಯವರಿಂದ ಮಾಹಿತಿ ಪಡೆದರು. ಜಿಲ್ಲೆಯ ಸಮಸ್ಯೆ ಕುರಿತು ಮತ್ತು ರಾಜಕೀಯ ಸಲಹೆ ಮಾರ್ಗದರ್ಶನ ನೀಡಬೇಕೆಂದು ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ , ಮುನಿಯಾಲು ಉದಯ ಶೆಟ್ಟಿ , ಬೆಳ್ಟೆ ಸತೀಶ ಕಿಣಿ, ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಶೋಕ ಶೆಟ್ಟಿ ಉಪಸ್ಥಿತರಿದ್ದರು.










