Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆ: ಯೋಗ ದಿನಾಚರಣೆ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆ: ಯೋಗ ದಿನಾಚರಣೆ

    Updated:21/06/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗದಿನದ ಅಂಗವಾಗಿ ವಿಜಯ ಕರ್ನಾಟಕ ಮತ್ತು ಟೈಮ್ಸ ಆಫ್‌ ಇಂಡಿಯಾ ಪತ್ರಿಕೆಗಳ ಸಹಯೋಗದೊಂದಿಗೆ ಶನಿವಾರ ಯೋಗ ದಿನಾಚರಣೆಯನ್ನು  ಆಚರಿಸಲಾಯಿತು.

    Click Here

    Call us

    Click Here

    ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ  ರಶ್ಮಿ ಎಸ್. ಆರ್. ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯೋಗವೆಂದರೆ ಕೇವಲ ಆಸನಗಳಲ್ಲ. ಅಷ್ಟಾಂಗಗಳನ್ನು ಹೊಂದಿದೆ. ನಾವು ಏಕಾಗ್ರತೆಗೆ ತಲುಪಿದರೆ ಮಾತ್ರ ಯೋಗ ಫಲ ನೀಡುವುದು. ಯೋಗಾಸನಗಳ ಅಭ್ಯಾಸ ಮಾಡುವುದು ದೇಹದ ಅಂಗಾಂಗಗಳಿಗೂ ಪುಷ್ಟಿದಾಯಕ. ಗುರಿಯನ್ನಿಟ್ಟುಕೊಂಡು ಸಾಧನೆ ಮಾಡಿ ಎಂದರು.

    ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಬರಹಗಾರರಾದ ಜಾನ್ ಡಿಸೋಜಾ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ದಿವಂಗತ ವೇದಮೂರ್ತಿ ರಾಮಚಂದ್ರ ಭಟ್ಟರ ಕನಸಿನ ಕೂಸಾದ ಈ ಶಾಲೆ ಭವ್ಯ ಭಾರತದ ಭವಿಷ್ಯ ನಿರ್ಮಿಸಬೇಕಾದ ಮಕ್ಕಳಿಗೆ ತಾಯಿಯ ಗರ್ಭಗೃಹದಂತೆ ಅಗತ್ಯತೆಗಳನ್ನು ಪೂರೈಸುತ್ತಿದೆ. ಮರಗಿಡಬಳ್ಳಿಗಳ ಮಧ್ಯದಲ್ಲಿ ಶುದ್ಧವಾದ ವಾತಾವರಣದಲ್ಲಿದ್ದು, ಮಕ್ಕಳಿಗೆ ಯೋಗಗಳ ಪೂರ್ಣಪ್ರಯೋಜನ ಪಡೆಯಲು ಸಹಕಾರಿಯಾಗಿದೆ. ಯುವ ಜನರಲ್ಲಿ ಜಾಗೃತಿಮೂಡಿಸಲು ನಾವು ಈ ಶಾಲೆಯ ಸಹಯೋಗದೊಂದಿಗೆ ಯೋಗದಿನಾಚರಣೆಯನ್ನು ಇಲ್ಲಿ ಆಚರಿಸುತ್ತಿದ್ದೇವೆ ಎಂದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ ವೈದ್ಯರಾದ ಡಾ. ರಾಜೇಶ ಬಾಯರಿ ಅವರು ಮಕ್ಕಳನ್ನುದ್ದೇಶಿಸಿ ಮಾತನಾಡಿ,  ಚಿತ್ತವೃತ್ತಿನಿರೋಧವೇ ಯೋಗ. ಮನಸ್ಸಿನ ನಿಯಂತ್ರಣವೇ ಯೋಗಾಭ್ಯಾಸದ ಪ್ರಧಾನ ಗುರಿ. ನಮ್ಮ ಭಾವನೆಗಳ ಹತೋಟಿ ಸಾಧಿಸಿ, ವಿಚಾರಧಾರೆಯನ್ನು ಸರಿಯಾದ ದಾರಿಯಲ್ಲಿ ಹರಿಸಲು ಅರ್ಥಾತ್ ಮಾನಸಿಕ ಆರೋಗ್ಯ ಸಾಧನೆಗೆ ಯೋಗಮಾರ್ಗ ಸಹಕಾರಿ.  ನಮ್ಮ ಆಹಾರವೇ ನಮ್ಮ ಭಾವನೆಗಳ ಜಾಗೃತಿಗೆ ಕಾರಣವಾಗಿದ್ದು, ಉತ್ತಮ ಆಹಾರಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಕರಿದ ಆಹಾರಸೇವನೆ ಆರೋಗ್ಯಕ್ಕೆ ಬಹಳ ಹಾನಿಕರ. ಇವೆಲ್ಲವನ್ನು ಅರಿತು ಈ ಎಳೆಯ ವಯಸ್ಸಿನಲ್ಲಿಯೇ ಸರಿಯಾದ ಮಾರ್ಗ ರೂಢಿಸಿಕೊಂಡರೆ ನಿಮ್ಮ ಭವಿಷ್ಯ ಹಾಗೂ ಮುಂದಿನ ಭಾರತದ ನಾಗರೀಕತೆ ಜಗತ್ತನ್ನೇ ನಿಬ್ಬೆರಗಾಗುವಂತೆ ಮಾಡುತ್ತದೆಂಬುದರಲ್ಲಿ ಸಂದೇಹವಿಲ್ಲ. ಎನ್ನುತ್ತಾ ತಮ್ಮ ಅನುಭವಗಳ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

    ಮತ್ತೋರ್ವ ಅತಿಥಿಗಳಾದ ಕುಂದಾಪುರ ತಾಲೂಕು ಆಯುಷ್ ಆಸ್ಪತ್ರೆಯ ವೈದ್ಯರಾದ ಡಾ. ಶಿಲ್ಪಾ ಮಾತಾಡುತ್ತಾ ಯೋಗದಿನಾಚರಣೆ ಎಂದರೆ ಪ್ರತಿನಿತ್ಯ ಯಾರೆಲ್ಲ  ಯೋಗ ಮಾಡಿಲ್ಲ ಅವರು ಪ್ರಾರಂಭಿಸಲು, ಯಾರೆಲ್ಲ ಯೋಗ ಮಾಡುತ್ತಿದ್ದರೋ ಅವರು ಮುಂದುವರಿಸಲು ಸ್ಪೂರ್ತಿಪಡೆವ ದಿನ ಎಂದರ್ಥ. ಸ್ವಚ್ಛತೆಗೂ ಯೋಗಕ್ಕೂ ಬಹಳ ನಂಟು. ಪರಿಸರ ನೈರ್ಮಲ್ಯ ಆರೋಗ್ಯಕ್ಕೆ ಬಾಹ್ಯ ಕಾರಣವಾದಂತೆ ಯೋಗವು ಅಂತಃಶುದ್ಧಿಯನ್ನು ಉಂಟುಮಾಡಿ ಆರೋಗ್ಯಕ್ಕೆ ಕಾರಣವಾಗುವುದು. ಎನ್ನುತ್ತಾ ಯೋಗಾಸನಗಳನ್ನು ತಾವೂ ಮಾಡಿ ಮಕ್ಕಳಿಗೂ ಬೋಧಿಸಿದರು.

    Click here

    Click here

    Click here

    Click Here

    Call us

    Call us

    ಈ ಕಾರ್ಯಕ್ರಮದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ವಿಶ್ವಯೋಗದಿನವು ಜನಸಮುದಾಯದಲ್ಲಿ ಪ್ರಚಾರಮಾಡುವ ಕಾರ್ಯಕ್ರಮವಲ್ಲ. ಜವಾಬ್ದಾರಿ ಹೆಚ್ಚಿಸುವ ಕಾರ್ಯ. ಭಾರತದೇಶವನ್ನು ಕಟ್ಟಿ ಬೆಳೆಸುವ ಚೈತನ್ಯಗಳಾದ ವಿದ್ಯಾರ್ಥಿಗಳಿಗೆ ಪುಸ್ತಕದ ಜ್ಞಾನ ಮಾತ್ರ ಸಾಕಾಗಲ್ಲ. ಅವರ ಸರ್ವತೋಮುಖ ಅಭಿವೃದ್ಧಿ ನಮ್ಮ ಕರ್ತವ್ಯವಾಗಿದ್ದು, ಆ ಪ್ರಯತ್ನವೇ ಒಂದು ಅಂಗ ಈ ಕಾರ್ಯಕ್ರಮ. ೧೯೦ ಕ್ಕೂ ಹೆಚ್ಚು ದೇಶಗಳಲ್ಲಿ ಯೋಗದಿನಾಚರಣೆ ನಡೆಸುತ್ತಿದ್ದಾರೆ. ಸ್ವಾಮಿ ವಿವೇಕಾನಂದರು ’ದಿನಕ್ಕೆ ೧೦ ನಿಮಿಷಯೋಗಾಭ್ಯಾಸ ಮಾಡಿದರೆ ಜೀವನದ ಎಲ್ಲಾ ಸಮಸ್ಯೆಯನ್ನೂ ನಗುಮುಖದಿಂದ ಎದುರಿಸಲು ಶಕ್ತಿ ದೊರಕುತ್ತದೆ’ ಎಂದಿದ್ದಾರೆ. ನಿರಂತರವಾದ ಅಭ್ಯಾಸ ಪೂರ್ಣಫಲಸಿದ್ಧಿಗೆ ಕಾರಣ. ಎನ್ನುತ್ತಾ ಅತಿಥಿಗಳಿಗೆ ಗೌರವಾರ್ಪಣೆ ನಡೆಸಿ, ವಿಜಯಕರ್ನಾಟಕ ಹಾಗೂ ಟೈಮ್ಸ್ ಆಫ಼್ ಇಂಡಿಯಾ ಪತ್ರಿಕಾತಂಡದವರ ಸಹಯೋಗವನ್ನು ಶ್ಲಾಘಿಸಿದರು.

    ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್, ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಶಿಕ್ಷಕ, ಶಿಕ್ಷಕೇತರ ವೃಂದದವರೂ ಉಪಸ್ಥಿತರಿದ್ದು ಕೆಲವಷ್ಟು ಯೋಗಾಸನಗಳ ಅಭ್ಯಾಸ ನಡೆಸಿದರು.

    ಸಿರಿ ಗೌಡ ಕಾರ್ಯಕ್ರಮವನ್ನು ನಿರೂಪಿಸಿ, ಮಾನಸ ಸ್ವಾಗತಿಸಿ, ದಿಶಾ ಧನ್ಯವಾದ ಸಮರ್ಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    13 − five =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.