Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ ರಥಬೀದಿಯ ಶ್ರೀದುರ್ಗಾ ಫ್ರೆಂಡ್ಸ್‌ನ ನಾಲ್ಕನೇ ವಾರ್ಷಿಕೋತ್ಸವ
    ಊರ್ಮನೆ ಸಮಾಚಾರ

    ಉಪ್ಪುಂದ ರಥಬೀದಿಯ ಶ್ರೀದುರ್ಗಾ ಫ್ರೆಂಡ್ಸ್‌ನ ನಾಲ್ಕನೇ ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬೈಂದೂರು: ಅಧ್ಯಕ್ಷ, ಪದಾಧಿಕಾರಿಗಳಿಲ್ಲದೇ ಎಲ್ಲರೂ ಸಮಾನರು ಎಂಬ ನೆಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳದ ರಥಬೀದಿ ಪರಿಸರದ ೫೦ ಜನರ ಯುವಪಡೆ ಶ್ರೀದುರ್ಗಾ ಫ್ರೆಂಡ್ಸ್ ತಂಡವನ್ನು ಕಟ್ಟಿಕೊಂಡು ಎಲ್ಲರೂ ಕಾರ್ಯಕರ್ತರಂತೆ ಎಲೆ ಮರೆಯ ಕಾಯಿಯ ಹಾಗೆ ಯಾವುದೇ ಪ್ರಚಾರ ಬಯಸದೇ ಸಾಮಾಜಿಕ ಕಾರ್ಯ ಚಟುವಟಿಕೆ ಮಾಡುತ್ತಿರುವುದು ಶ್ಲಾಘನೀಯ ಎಂದು ಕೊಲ್ಲೂರು ದೇವಳದ ಮಾಜಿ ಆಡಳಿತ ಧರ್ಮದರ್ಶಿ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಉಪ್ಪುಂದ ರಥಬೀದಿಯ ಶ್ರೀದುರ್ಗಾ ಫ್ರೆಂಡ್ಸ್‌ನ ನಾಲ್ಕನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಸಮಾಜಮುಖಿ ಹಾಗೂ ಜನಹಿತ ಕೆಲಸ ಮಾಡುವವರಿಗೆ ದೇವರ ವಿಶೇಷ ಕೃಪೆ ಇರುತ್ತದೆ. ವೈಜ್ಞಾನಿಕ ಯುಗದಲ್ಲಿಯೂ ಕೂಡಾ ವರ್ಷದಿಂದ ವರ್ಷಕ್ಕೆ ದೇವತಾಕಾರ್ಯ ಮತ್ತು ಜಾತ್ರೆಗೆ ಹೆಚ್ಚು ಜನ ಸೇರುತ್ತಿರುವುದರಿಂದ ಜನರಲ್ಲಿ ಧಾರ್ಮಿಕ ಪ್ರಜ್ಞೆ ಮೂಡುವುದರ ಮೂಲಕ ಸಮಾಜವನ್ನು ದೈವತ್ವದ ಕಡೆಗೆ ಅಕರ್ಷಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

    ನಂತರ ಜಿಪಂ ಮಾಜಿ ಸದಸ್ಯ ಮದನ್‌ಕುಮಾರ್ ಮಾತನಾಡಿ, ನಾಡುಕಟ್ಟುವ ಕೆಲಸ ಕೇವಲ ಸರಕಾರ, ಮಂತ್ರಿ, ಜನಪ್ರತಿನಿಧಿಗಳಿಂದ ಮಾತ್ರ ಸಾಧ್ಯವಿಲ್ಲ. ದೇಶದ ಪ್ರತಿಯೊಬ್ಬ ನಾಗರಿಕ ಹಾಗೂ ಮುಖ್ಯವಾಗಿ ಯುವಸಮುದಾಯ ಆತ್ಮಪೂರ್ವಕವಾಗಿ ನಿಸ್ವಾರ್ಥದಿಂದ ಪ್ರತಿಫಲಾಪೇಕ್ಷೆಗಳಿಲ್ಲದೇ ನಾಡುಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು. ಸಂಘ-ಸಂಸ್ಥೆಗಳು ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವುದು ಹಾಗೂ ಪ್ರೋತ್ಸಾಹಿಸುವುದು ಒಂದು ಉತ್ತಮ ಬೆಳವಣಿಗೆ. ಇದು ಕೂಡಾ ನಾಡುಕಟ್ಟುವಲ್ಲಿ ಸಹಕಾರಿಯಾಗುತ್ತದೆ ಎಂದರು.

    ಜಿಪಂ ಶಿಕ್ಷಣ ಮತ್ತು ಆರೋಗ್ಯಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದ ಪ್ರೌಢಶಾಲಾ ವಿಭಾಗದ ಬೈಲ್‌ಮನೆ ಪ್ರಶಾಂತ್ ದೇವಾಡಿಗ ಮತ್ತು ಬೆಮ್ಮಣ್ಣುಮನೆ ಸಂಜಯ್ ದೇವಾಡಿಗರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ರೈತ ಮುಖಂಡ ಎನ್. ದೀಪಕ್‌ಕುಮಾರ್ ಶೆಟ್ಟಿ, ಗ್ರಾಪಂ ಸದಸ್ಯ ಯು.ಎ.ಮಂಜು ದೇವಾಡಿಗ, ಗ್ರಾಪಂ ಮಾಜಿ ಅಧ್ಯಕ್ಷ ಜಗನ್ನಾಥ ಉಪ್ಪುಂದ, ತಾರಾಪತಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಎ. ಅನಂದ ಖಾರ್ವಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಬಿ.ಹೆಚ್.ಕೆ. ಕುಮಾರ್ ಖಾರ್ವಿ ಉಪಸ್ಥಿತರಿದ್ದರು.

    ಸಂಘದ ಕಾರ್ಯಕರ್ತ ನಾಗೇಶ್ ದೇವಾಡಿಗ ಸ್ವಾಗತಿಸಿ, ಗಣೇಶ ದೇವಾಡಿಗ ವಂದಿಸಿದರು. ಶಿಕ್ಷಕ ನಾರಾಯಣರಾಜು ದೇವಾಡಿಗ ನಿರೂಪಿಸಿದರು. ನಂತರ ವಿವಿಧ ಭಾಗಗಳಿಂದ ಆಗಮಿಸಿದ ನೃತ್ಯತಂಡದವರಿಂದ ಫಿಲ್ಮಿಡ್ಯಾನ್ಸ್ ಪ್ರದರ್ಶನ ನಡೆಯಿತು.

    Click here

    Click here

    Click here

    Call us

    Call us

    -ಜನನಿ ಉಪ್ಪುಂದ

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.