Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲಯನ್ಸ್ ಕ್ಲಬ್ ಹಂಗಳೂರಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ
    ಕುಂದಾಪ್ರದ್ ಸುದ್ಧಿ

    ಲಯನ್ಸ್ ಕ್ಲಬ್ ಹಂಗಳೂರಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಲಯನ್ಸ್ ಕ್ಲಬ್ ಹಂಗಳೂರಿಗೆ ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಡಿ. ಶ್ರೀಧರ ಶೇಣವ ಅವರ ಅಧಿಕೃತ ಭೇಟಿಯ ಹಿನ್ನಲೆಯಲ್ಲಿ ಕುಂದಾಪುರದ ಆಶೀರ್ವಾದ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಲಯನ್ಸ್ ಕ್ಲಬ್ ಹಂಗಳೂರಿನ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಅವರ ಕಾರ್ಯ ಚಟುವಟಿಕೆ, ಸೇವೆಯನ್ನು ಪ್ರಶಂಸಿದ ಜಿಲ್ಲಾ ಗವರ್ನರ್ ಡಿ.ಶ್ರೀಧರ ಶೇಣವ ಅವರು ಸಮಾಜಕ್ಕೆ ಮಾದರಿಯಾಗಿ ಲಯನ್ಸ್ ಕ್ಲಬ್ ಹಂಗಳೂರು ಕಾರ್ಯ ನಿರ್ವಹಿಸಿದೆ ಎಂದು ಅಭಿನಂದಿಸಿದರು. ಲಯನ್ಸ್ ಕ್ಲಬ್ ಹಂಗಳೂರಿನ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಜಿಲ್ಲಾ ಗವರ್ನರ್ ಜಯಕರ ಶೆಟ್ಟಿ, ಜಿಲ್ಲಾ ಸಂಯೋಜಕ ತಲ್ಲೂರು ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎಚ್. ಬಾಲಕೃಷ್ಣ ಶೆಟ್ಟಿ, ಖಜಾಂಚಿ ಸ್ಟ್ಯಾನಿ ಡಿ ಮೆಲ್ಲೋ ಉಪಸ್ಥಿತರಿದ್ದರು.

    ಕೊಲ್ಲೂರು ಭೇಟಿ : ಲಯನ್ಸ್ ಕ್ಲಬ್ ಹಂಗಳೂರಿಗೆ ಅಧಿಕೃತ ಭೇಟಿ ನೀಡಿದ ಸಂದರ್ಭ ಜಿಲ್ಲಾ ಗವರ್ನರ್ ಡಿ ಶ್ರೀಧರ ಶೇಣವ ಅವರು ಕೊಲ್ಲೂರಿಗೆ ತೆರಳಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಶ್ರೀಧರ್ ಶೇಣವ ದಂಪತಿಗಳನ್ನು ಶಾಲು ಹೊದಿಸಿ ಗೌರವಿಸಲಾಯಿತು. ಬಳಿಕ ಗೋಳಿಹೊಳೆ ಗ್ರಾಮಕ್ಕೆ ತೆರಳಿ ಅಲ್ಲಿನ ನಿವಾಸಿ ಮರಾಠಿ ಜನಾಂಗದ ಮುಕಾಂಬು ಎಂಬವರಿಗೆ ಮನೆ ನಿರ್ಮಿಸಲು 25ಸಾವಿರ ರೂ.ಗಳ ಸಹಾಯಧನವನ್ನು ಲಯನ್ಸ್ ಕ್ಲಬ್ ಹಂಗಳೂರು ವತಿಯಿಂದ ನೀಡಲಾಯಿತು. ಅರೆಶಿರೂರು ಗ್ರಾಮ ಜೋಗಿ ಜೆಡ್ಡು ಎಂಬಲ್ಲಿ ಸುಮಾರು 14 ವರ್ಷ ಬಾಲಕ ಆಶಿಷ್ ಕಳೆದ 3 ತಿಂಗಳ ಹಿಂದೆ ಮೋಟಾರ್ ಬೈಕ್ ಅಪಘಾತದಿಂದ ಬಿದ್ದು ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿ ಚಿಕಿತ್ಸೆಗೆ ರೂ 12,500ನ್ನು ಒದಗಿಸಲಾಯಿತು.

    ಹೆಮ್ಮಾಡಿ ಸಮೀಪದ ಹರಗೋಡು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರಕ್ಕೆ ಗೋಡೆ ಗಡಿಯಾರ, ಕುಡಿಯುವ ನೀರಿನ ಡ್ರಮ್, ಫೈಬರ್ ಕುರ್ಚಿಗಳು, ಕರಿಹಲಗೆ, ನೀರಿನ ಪಾತ್ರೆ ಇತ್ಯಾದಿಗಳನ್ನು ಕೊಡುಗೆಯಾಗಿ ಹಸ್ತಾಂತರಿಸಲಾಯಿತು.
    ಕಟ್‌ಬೇಲ್ತೂರಿನ ಸುಳ್ಸೆಯ ನಾಗ ನಾಯ್ಕ್ ಮತ್ತು ನಾಗಮ್ಮ ದಂಪತಿಗಳು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ೫ ಸಾವಿರ ರೂ. ದೇಣಿಗೆ ನೀಡಲಾಯಿತು.
    ಈ ಸಂದರ್ಭದಲ್ಲಿ ಲಯನ್ ಜಿಲ್ಲಾ ಗವರ್ನರ್ ಡಿ.ಶ್ರೀಧರ್ ಶೇಣವ, ಜ್ಯೋತಿ ಶೇಣವ, ಲಯನ್ಸ್ ಕ್ಲಬ್ ಹಂಗಳೂರಿನ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಕಾರ್ಯದರ್ಶಿ ಎಚ್. ಬಾಲಕೃಷ್ಣ ಶೆಟ್ಟಿ, ಖಜಾಂಚಿ ಸ್ಟ್ಯಾನಿ ಡಿ ಮೆಲ್ಲೋ, ಸದಸ್ಯರಾದ ಫಿಲಿಪ್ ಡಿ. ಕೋಸ್ತಾ, ಮಹೇಶ್ ಹೆಗ್ಡೆ, ಆರ್ಚಿಬಾಲ್ಡ್ ಕ್ವಾಡ್ರಸ್, ಮಲ್ಯಾಡಿ ಸೀತಾರಾಮ ಶೆಟ್ಟಿ, ಸುಭೋಧ್ ಕುಮಾರ್ ಹೆಗ್ಡೆ, ವಾಲ್ಟರ್ ಡಿ. ಸೋಜಾ, ವಿಲ್ಟ್ರಡಾ ಡಿ ಸೋಜಾ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    fifteen − 8 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.