Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಎಜುಕೇಶನಲ್ ಟ್ರಸ್ಟ್: ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಸುಜ್ಞಾನ ಎಜುಕೇಶನಲ್ ಟ್ರಸ್ಟ್: ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮ

    Updated:11/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್  ಪ್ರವರ್ತಿತ ಯಡಾಡಿ-ಮತ್ಯಾಡಿಯ  ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮವು ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯಿತು.

    Click Here

    Call us

    Click Here

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕ‌ರ್ ಅವರು ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ವಿದ್ಯಾರ್ಥಿ ಸಂಸತ್ತು ಪದಗ್ರಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಗೌರವಿಸಿದ ಹರಿರಾಮ್ ಶಂಕ‌ರ್ ಅವರು ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಕೂಡ ಒಂದೊಂದು ಪ್ರತಿಭೆ ಅಡಗಿರುತ್ತದೆ ಅಂತಹ ಪ್ರತಿಭೆಯನ್ನು ವಿದ್ಯಾರ್ಥಿ ವೇದಿಕೆಯ ಮೂಲಕ ಜೀವನದಲ್ಲಿ ದೊಡ್ಡ ಗುರಿಯನ್ನು ಇಟ್ಟುಕೊಂಡು ಎಲ್ಲರನ್ನು ಸಮಾನರಾಗಿ ನೋಡಿಕೊಂಡು, ಇನ್ಸ್ಟಾಗ್ರಾಮ್, ವಾಟ್ಸಾಪ್, ಫೇಸ್ ಬುಕ್ ಅದುವೆ ಜೀವನ ಅಲ್ಲ ಎಂದು ತಿಳಿದು ಪಾಠ ಪ್ರವಚನದ ಮೂಲಕ ಹೆಚ್ಚು ಆಸಕ್ತರಾಗಿ ಮುಂದೆ ಸಾಗಿದಾಗ ಆದರ್ಶ ವಿದ್ಯಾರ್ಥಿಯಾಗಿ ಬೆಳೆಯಬಹುದು.

    ಸಮಾಜದಲ್ಲಿ ಭವಿಷ್ಯ ಹಾಳು ಮಾಡುವ ಉದ್ದೇಶದಿಂದ ಜಾಲತಾಣದ ಮೂಲಕ ಬ್ಲಾಕ್ ಮೇಲ್ ಪಿತೂರಿ ನಡೆಯುತ್ತದೆ. ಇದ್ಯಾವುದಕ್ಕೂ ಜಗ್ಗದೆ, ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ. ಯಾವುದೇ ಭೀತಿಗೆ ಒಳಗಾಗದೆ ಪೋಲಿಸರ ಹತ್ತಿರ ಬಂದು ದೂರು ನೀಡಿದಾಗ ನಿಮ್ಮ ಸಮಸ್ಯೆಯನ್ನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ ಎಂದರು.

    ಸುಜ್ಞಾನ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನದಲ್ಲಿ ಒಳ್ಳೆಯ ಗುರಿಯನ್ನು ಇಟ್ಟುಕೊಂಡು ಯಾವುದೇ ವ್ಯಸನಕ್ಕೆ ಬಲಿಯಾಗದೆ ಪಾಠದ ಜೊತೆಗೆ ಬದುಕಿನ ಉತ್ತಮ ರೀತಿ ನೀತಿಗಳನ್ನು ಅನುಸರಿಸಿಕೊಂಡಾಗ ಸಮಾಜದಲ್ಲಿ ಆದರ್ಶ ವಿದ್ಯಾರ್ಥಿಯಾಗಿ ಬೆಳೆದು ಕೀರ್ತಿವಂತರಾಗಬಹುದು ಎಂದರು.

    Click here

    Click here

    Click here

    Call us

    Call us

    ಕಾರ್ಯದರ್ಶಿ ಪ್ರತಾಪ್‌ ಚಂದ್ರ ಶೆಟ್ಟಿ ಮಾತನಾಡಿ, ಸಮಾಜ ಸೇವೆಯಲ್ಲಿ ಸಾಧನೆಗೈದ ಆದರ್ಶ ವ್ಯಕ್ತಿಗಳನ್ನು ಮಾದರಿಯಾಗಿಟ್ಟುಕೊಂಡು ವಿದ್ಯಾರ್ಥಿಗಳು ಅನುಸರಿಸಿದಾಗ ಉನ್ನತಮಟ್ಟದ ಸಾಧನೆಗಯ್ಯಲು ಸಾಧ್ಯ ಎಂದರು.

    ವೇದಿಕೆಯಲ್ಲಿ ಖಜಾಂಚಿ ಭರತ್ ಶೆಟ್ಟಿ, ಸುಜ್ಞಾನ ಪಿಯು ಕಾಲೇಜಿನ ಪ್ರಾಂಶುಪಾಲ ರಂಜನ್ ಬಿ ಶೆಟ್ಟಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ, ಶಾಲಾ ವಿದ್ಯಾರ್ಥಿ ನಾಯಕಿ ಪ್ರಕೃತಿ ಪಿ.ಶೆಟ್ಟಿ ಉಪ ನಾಯಕ ಶಮಂತ್ ಉಪಸ್ಥಿತರಿದ್ದರು.

    ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನದ ಮೂಲಕ ಮುಖ್ಯ ಅತಿಥಿಗಳನ್ನು ಹಾಗೂ ಸಂಸತ್ ಸದಸ್ಯ ವಿದ್ಯಾರ್ಥಿಗಳನ್ನು ವೇದಿಕೆಯಡೆಗೆ ಕರೆತರಲಾಯಿತು. ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರದೀಪ್ ಕೆ. ಅವರು ಪ್ರತಿಜ್ಞಾವಿಧಿ ಬೋಧಿಸಿದರು.

    ಟ್ರಸ್ಟ್ ಖಜಾಂಚಿ ಭರತ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದು, ವಿದ್ಯಾರ್ಥಿ ವೇದಿಕೆ ಮೂಲಕ ಸಮಾಜ ಸೇವಾ ಕೈಂಕರ್ಯದಿಂದ ತನ್ನ ಏಳಿಗೆಯೊಂದಿಗೆ ಎಲ್ಲರ ಏಳಿಗೆ ಸಾಧಿಸಿದಾಗ ತನ್ನ ವ್ಯಕ್ತಿತ್ವ ಉನ್ನತ ಮಟ್ಟದಲ್ಲಿ ಬೆಳೆದು ಸಮಾಜದ ಅಭಿವೃದ್ಧಿ ಸಾಧ್ಯ ಎಂದರು.

    ಶಿಕ್ಷಕ ವಿನಯ ಕುಮಾ‌ರ್ ಕೆ. ನಿರೂಪಿಸಿ, ಸಂಸ್ಥೆಯ ಪ್ರಾಂಶುಪಾಲ ರಂಜನ್ ಬಿ. ಶೆಟ್ಟಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.