Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಕಲಿ ಆಧಾರ್ ಕಾರ್ಡ್‌ ಹೊಂದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ
    ಉಡುಪಿ ಜಿಲ್ಲೆ

    ನಕಲಿ ಆಧಾರ್ ಕಾರ್ಡ್‌ ಹೊಂದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ

    Updated:18/07/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆ ಜೋಡಿಸುವುದು ಕಡ್ಡಾಯ.

    Click Here

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್‌ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು.

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾರ್ನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಜಿಲ್ಲೆಯಲ್ಲಿ ಈವರೆಗೆ 14,11,209 ಜನರು ಆಧಾರ್ ಕಾರ್ಡ್ ಅನ್ನು ಹೊಂದಿದ್ದು, ಅವರಲ್ಲಿ 13,42,275 ಜನರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಶೇ. 68.93 ರಷ್ಟು ಆಗಿದೆ. ಬಾಕಿ ಉಳಿದ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್‌ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್‌ಡೇಟ್ ಮಾಡಿಸಿಕೊಳ್ಳಬೇಕು ಎಂದರು.

    ಜಿಲ್ಲೆಯಲ್ಲಿರುವ 15 ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್‌ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ಗಳನ್ನು ಸಕ್ರೀಯಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕಿೃಯಗೊಳ್ಳಲಿದ್ದು, ಪ್ರಸ್ತುತ 41,115 ಯುವಜನರ ಬಯೋಮೆಟ್ರಿಕ್ ನೀಡುವುದು ಬಾಕಿ ಇದೆ ಇದರಿಂದ ಭವಿಷ್ಯದಲ್ಲಿ ಯಾವುದೇ ಪರೀಕ್ಷೆಗಳನ್ನು ತೆಗೆದುಕೊಳ್ಳಲು ತೊಂದರೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಬಯೋಮೆಟ್ರಿಕ್ ನೀಡಿ, ಅಪ್‌ಡೇಟ್ ಮಾಡಿಕೊಳ್ಳಬೇಕೆಂದರು.

    Click here

    Click here

    Click here

    Click Here

    Call us

    Call us

    ಅಂಗನವಾಡಿ ಕೇಂದ್ರಗಳಿಗೆ ಪೋಷಣ್ ಟ್ರ್ಯಾಕರ್ 45,832 ಮಕ್ಕಳು ದಾಖಲಾಗಿದ್ದು, ಅವರಲ್ಲಿ 33,425 ಮಕ್ಕಳಿಗೆ ಆಧಾರ್ ಕಾರ್ಡ್ ಹೊಂದಿದ್ದಾರೆ. ಬಾಕಿ ಉಳೀದ 11,947 ಮಕ್ಕಳಿಗೂ ಆಧಾರ್ ಕಾರ್ಡ್ ಹೊಂದುವುದು ಅವಶ್ಯ. ತಮ್ಮ ಹತ್ತಿರದ ಅಂಚೆ ಕಚೇರಿಗಳಲ್ಲಿ ಆಧಾರ್ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ನೋಂದಣಿಯನ್ನು ಮಾಡಿಸಬೇಕು ಎಂದರು.

    ಆಧಾರ್ ಕಾರ್ಡ್ ಹೊಂದಿರುವರು ತಮ್ಮ ಆಧಾರ್ ಬಗ್ಗೆ ಮಾಹಿತಿ ಪರಿಶೀಲಿಸಲು ಇಚ್ಛಿಸಿದ್ದಲ್ಲಿ ಪ್ಲೇಸ್ಟೋರ್ ಮೂಲಕ M-Aadhar App ನಲ್ಲಿ ಡೌನ್‌ಲೋಡ್ ಮಾಡಿಕೊಂಡು ನೋಡಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರಸದ್ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದರು.

    ಹೊರರಾಜ್ಯ ಹಾಗೂ ವಿದೇಶಗಳಿಂದ ಬಂದಿರುವ ಜನರು ಸಹ ಸುಳ್ಳು ದಾಖಲೆ ಪತ್ರಗಳನ್ನು ನೀಡಿ ಆಧಾರ್ ನೋಂದಣಿಗೆ ಮುಂದಾಗುವ ಸಾಧ್ಯತೆಗಳಿರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು. ಕೆಲವರು ನಕಲಿ ಆಧಾರ್ ಪ್ರತಿಗಳನ್ನು ಹೊಂದಿರುವ ಬಗ್ಗೆ ಕ್ಯೂ ಆರ್ ಕೋಡ್ ಅನ್ನು ಪರಿಶೀಲಿಸುವುದರೊಂದಿಗೆ ಆಧಾರ್ ಕಾರ್ಡ್ನ ನೈಜತೆಯನ್ನು  ಪರಿಶೀಲಿಸಬೇಕು ಎಂದ ಅವರು, ಸುಳ್ಳು ದಾಖಲೆಗಳನ್ನು ನೀಡಿ ಆಧಾರ್ ಕಾರ್ಡ್ ಪಡೆಯಲು ಮುಂದಾಗುವುದು ಹಾಗೂ ನಕಲಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದಲ್ಲಿ ಅಂತಹವರ ಮೇಲೆ ಪೊಲೀಸ್  ಇಲಾಖೆಯು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.  

    ಜನನ ಪ್ರಮಾಣ ಪತ್ರ ಹಾಗೂ ಶಾಲೆಯ ದಾಖಲೆಗಳಲ್ಲಿ ಹೆಸರು ಬದಲಾವಣೆ ಹಿನ್ನೆಲೆ ಕೆಲವು ವಿದ್ಯಾರ್ಥಿಗಳು, ವೃದ್ಧಾಶ್ರಮದಲ್ಲಿರುವ ಹಿರಿಯ ನಾಗರಿಕರು ಹಾಗೂ ಹಾಸಿಗೆ ಹಿಡಿದ ಕೆಲವು ಅಂಗವಿಕರುಗಳು ಆಧಾರ್ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಸಮಸ್ಯೆ ಉಂಟಾಗುತ್ತಿದೆ. ಇವುಗಳನ್ನು ಕೂಡಲೇ ಬಗೆಹರಿಸಿ ಅವರಿಗೂ ಸಹ ಆಧಾರ್ ಕಾರ್ಡ್ ಪಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  

    ಯು.ಐ.ಡಿ.ಎ.ಐ ಉಪನಿರ್ದೇಶಕ ಗುಲ್ಷನ್ ಕುಮಾರ್ ಸಿಂಗ್, ಅಸಿಸ್ಟೆಂಟ್ ಮ್ಯಾನೆಜರ್ ಮೊಹಮ್ಮದ್ ಮೂಸಾಬ್ ವಿಡಿಯೋ ಕಾನ್ಫ್ರೆನ್ಸ್ ಮೂಲಕ ಭಾಗವಹಿಸಿದ್ದರು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಡಿಡಿಪಿಐ ಮಾರುತಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.