Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ
    ಊರ್ಮನೆ ಸಮಾಚಾರ

    ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಭಜನೆ ಎಂಬ ಮೂರಕ್ಷರಕ್ಕೆ ಬಹಳ ಮಹತ್ವವಿದ್ದು, ನಮ್ಮಿಂದ ಮನಃಪೂರ್ವಕವಾಗಿ ದೇವರಿಗೆ ನೀಡುವಂತಹ ಒಂದು ಭಾವನಾತ್ಮಕ ಸಂಪತ್ತು. ಭಜನೆಯನ್ನು ಭಕ್ತಿಪೂರ್ವಕವಾಗಿ ಅರ್ಪಿಸಿದರೆ ಭಗವಂತನಿಗೆ ಅದಕ್ಕಿಂತ ದೊಡ್ಡ ಹರಕೆಯಿಲ್ಲ ಎಂದು ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ ಕೆ. ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಭಾನುವಾರ ತಾಲೂಕು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಡೆದ ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ, ಹಾಗೂ ಭಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಕಲಿಯುಗದಲ್ಲಿ ಭಜನೆಯಿಂದ ಮಾತ್ರ ದೇವರ ಒಲಿಸಿಕೊಳ್ಳಬಹುದು. ಪ್ರಸ್ತುತ ಹಿರಿಯ ಭಜನಾ ಕಲಾವಿದರು ಭಜನೆಯನ್ನು ಶ್ರೇಷ್ಠತೆಯ ಕಡೆಗೆ ಕೊಂಡು ಹೋಗುವ ಕೆಲಸ ಮಾಡಿದ್ದಾರೆ. ಇನ್ನು ಮುಂದಕ್ಕೆ ಇಂದಿನ ಯುವ ಪೀಳಿಗೆ ಭಜನೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕಡೆಗೆ ಹಿರಿಯ ಭಜನಾ ಕಲಾವಿದರು ತಮ್ಮ ಸೇವೆಯನ್ನು ಮಡಿಪಾಗಿಡಬೇಕು ಎಂದರು.

    ಭಜನಾ ಪರಿಷತ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್, ಹಿರಿಯ ಭಜನಾ ಹಾಡುಗಾರರಿಗೆ ಗೌರವಾರ್ಪಣೆ ಸಮರ್ಪಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ, ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ, ಯೋಜನಾಧಿಕಾರಿ ಸಂಜಯ್ ನಾಯ್ಕ್, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ರಾಮ ಮೇಸ್ತ, ತಾಲೂಕು ಜನಜಾಗೃತಿ ಸಮಿತಿ ಅಧ್ಯಕ್ಷ ಸುಧಾಕರ ಆಚಾರ್ಯ ಇದ್ದರು.

    ಸುರೇಖಾ ಪೂಜಾರಿ ಸ್ವಾಗತಿಸಿ, ಭಜನಾ ಪರಿಷತ್ ತಾಲೂಕು ಅಧ್ಯಕ್ಷ ಕೃಷ್ಣ ಪೂಜಾರಿ ಪ್ರಾಸ್ತಾವಿಸಿದರು. ಕಾರ್ಯದರ್ಶಿ ಮಂಜುನಾಥ ಉಳ್ಳೂರು ವರದಿ ಮಂಡಿಸಿದರು. ರಾಜು ಜೋಗಿ ನಿರೂಪಿಸಿ, ಕೃಷ್ಣ ಮರಾಠಿ ವಂದಿಸಿದರು. ಬೆಳಿಗ್ಗೆ 7ರಿಂದ 11ರ ತನಕ ಭಜನೋತ್ಸವ ಜರುಗಿತು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

    18/12/2025

    ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ

    18/12/2025

    ಯುವ ಸಮುದಾಯ ಕೃಷಿ ಕ್ಷೇತ್ರಕ್ಕೆ ಧುಮುಕಲಿ: ಡಾ. ಕೃಷ್ಣ ಕಾಂಚನ್

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ
    • ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ
    • ಮರವಂತೆ: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಆರನೇ ಶಾಖೆಯ ಉದ್ಘಾಟನೆ
    • ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ
    • ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.