Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅ.03ರಂದು ಬೈಂದೂರಿನಲ್ಲಿ “ಗಮ್ಮತ್ತ್”ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ
    ಊರ್ಮನೆ ಸಮಾಚಾರ

    ಅ.03ರಂದು ಬೈಂದೂರಿನಲ್ಲಿ “ಗಮ್ಮತ್ತ್”ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಕುಂದಾಪ್ರ ಕನ್ನಡ ಭಾಷೆಯ ಬಗೆಗಿನ ಅಭಿಮಾನ ಹಾಗೂ ಗ್ರಾಮೀಣ ಸಂಸ್ಕೃತಿ ಸೊಗಡನ್ನು ಅನಾವರಣಗೊಳಿಸುವ ಉದ್ದೇಶದೊಂದಿಗೆ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗ್ರಾಮೀಣ ಹಾಗೂ ಕೆಸರುಗದ್ದೆ ಕ್ರೀಡಾಕೂಟ “ಗಮ್ಮತ್ತ್”ಕಾರ್ಯಕ್ರಮವನ್ನು ಅಗಸ್ಟ್ 03ರ ಭಾನುವಾರ ಬೆಳಿಗ್ಗೆ ಗಂಟೆ 09ರಿಂದ ಬೈಂದೂರು ಯಡ್ತರೆಯ ನೆಲ್ಯಾಡಿ ಬೈಲ್ ಹಾಗೂ ಜೆ.ಎನ್.ಆರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಅಧ್ಯಕ್ಷ ಶರತ್ ಶೆಟ್ಟಿ ಉಪ್ಪುಂದ ಹೇಳಿದರು.

    Click Here

    Call us

    Click Here

    ಅವರು ಬೈಂದೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಮಾನ ಮನಸ್ಕರ ತಂಡ ಒಂದುಗೂಡಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಸಂಸ್ಥೆಯ ಮೂಲಕ ಕಳೆದೊಂದು ವರ್ಷದಿಂದ ಅದ್ದೂರಿ ಕಾರ್ಯಕ್ರಮ ಆಯೋಜಿಸುತ್ತಾ ಬರಲಾಗುತ್ತಿದ್ದು, ಜನರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.  ಸ್ಪರ್ಧೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ನೀಡಲಾಗಿದ್ದು, ವಿಜೇತರಿಗೆ ನಗದು ಬಹುಮಾನ, ಪದಕ, ಪ್ರಶಸ್ತಿ ಪತ್ರಗಳನ್ನು ನೀಡಲಾಗುತ್ತಿದೆ ಎಂದರು.

    ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು:
    ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್‌, ಕಬಡ್ಡಿ, ಕೆಸರ್‌ ಗದ್ದೆ ಓಟ, ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಬೀಸ್‌ ಬಲಿ ಬೀಸುದ್‌, ಚಿಟ್‌ ಬಿಲ್‌ ಶೂಟಿಂಗ್‌, ಅಪ್ಪ – ಮಗು ಉಪ್ಪು ಮೂಟೆ, ಚನ್ನೆಮಣೆ, ಸಾಂಪ್ರದಾಯಿಕ ಗೀತಗಾಯನ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

     ಮಹಿಳೆಯರಿಗೆ ಹಗ್ಗಜಗ್ಗಾಟ, ಥ್ರೋಬಾಲ್, ಕೆಸರ್‌ ಗದ್ದೆ ಓಟ, ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಮಡ್ಲ್‌ ನೇಯುವುದು, ಗುಡ್ನ ಆಟ, ಚನ್ನೆಮಣೆ ಆಟ, ಅಮ್ಮ – ಮಗು ಉಪ್ಪು ಮೂಟೆ, ಕೊಟ್ಟಿ ಸೆಟ್ಟುದ್, ಹೂಮಾಲೆ ಕಟ್ಟುವುದು, ಸಾಂಪ್ರದಾಯಿಕ ಗೀತಗಾಯನ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

    ಮಕ್ಕಳಿಗೆ ಕೆಸರ್‌ ಗದ್ದೆ ಓಟ (1-7ನೇ ತರಗತಿ & 8-12ನೇ ತರಗತಿ ವಿಭಾಗ), ಬೆನ್‌ ಚೆಂಡ್‌ ಆಟ (8 – 12ನೇ ತರಗತಿ), ಅಡಿಕೆ ಹಾಳಿಯಲ್ಲಿ ಕೂರಿಸಿ ಎಳೆಯುವುದು, ಲಿಂಬೆ ಚಮಚ ಓಟ (1-7ನೇ ತರಗತಿ & 8-12ನೇ ತರಗತಿ ವಿಭಾಗ), ಗೂಟಕ್ಕೆ ಸುತ್ತಿ ಓಡುವುದು (8-12ನೇ ತರಗತಿ), ಚಿತ್ರಕಲಾ ಸ್ಪರ್ಧೆ (ಎಲ್.ಕೆ.ಜಿ -4ನೇ ತರಗತಿ, 5 -7ನೇ ತರಗತಿ & 8 -10ನೇ ತರಗತಿ ವಿಭಾಗ), ಕುಂದಾಪ್ರ ಕನ್ನಡ ಭಾಷಣ ಸ್ಪರ್ಧೆ (6-10ನೇ ತರಗತಿ) ಛದ್ಮವೇಷ ಸ್ಪರ್ಧೆ (ಎಲ್.ಕೆ.ಜಿಯಿಂದ – 7ನೇ ತರಗತಿ) ಆಯೋಜಿಸಲಾಗಿದೆ. ತೆಂಗಿನ ಚ್ವಾಂಗಿಯಿಂದ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳು ಮುಕ್ತ ವಿಭಾಗದಲ್ಲಿ ನಡೆಯಲಿದೆ. ಸಾರ್ವಜನಿಕರು ಎಲ್ಲಾ ಸ್ಪರ್ಧೆಗಳಲ್ಲಿ ಉಚಿತವಾಗಿ ನೊಂದಣಿಯೊಂದಿಗೆ ಭಾಗವಹಿಸಬಹುದಾಗಿದೆ.

    Click here

    Click here

    Click here

    Call us

    Call us

    ಹಲವು ಕಾರ್ಯಕ್ರಮಗಳು:
    ಅ.03ರ ಬೆಳಿಗ್ಗೆ 09-00ಕ್ಕೆ ರಾಹುತನಕಟ್ಟೆಯಿಂದ  ಜೆ.ಎನ್.ಆರ್ ಹಾಲ್ ತನಕ ವೈಭವದ ಮೆರವಣಿಗೆ ಇರಲಿದ್ದು, ಕಂಬಳ ಕೋಣಗಳು, ಭಜನಾ ತಂಡಗಳು, ಎತ್ತಿನಗಾಡಿ, ಯಕ್ಷಗಾನ ವೈಭವ, 2 ಚಂಡೆ ತಂಡಗಳು ಮೆರವಣಿಗೆ ಸೊಬಗು ಹೆಚ್ಚಿಸಲಿದೆ. ಕಂಬಳ ಕ್ಷೇತ್ರದ ದಿಗ್ಗಜ ದಿ. ವೆಂಕಟ ಪೂಜಾರಿ ಅವರ ನೆನಪಿನಲ್ಲಿ ಈ ಭಾರಿ ಕಂಬಳವನ್ನು ಆಯೋಜಿಸಲಾಗುತ್ತಿದ್ದು ಬೆಳಿಗ್ಗೆಯಿಂದ 35 ಜೊತೆ ಕಂಬಳ ಕೋಣಗಳ ಆಕರ್ಷಕ ಓಟ ಇರಲಿದೆ. ಹಳೆ ಕಾಲದ ವಸ್ತು ಪ್ರದರ್ಶನ, ವಿವಿಧ ತಿನಿಸುಗಳ ಅಂಗಡಿಗಳು, ಸಿನಿ ತಾರೆಯರು, ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿ, ಮನು ಹಂದಾಡಿ, ಚೇತನ್ ನೈಲಾಡಿ ಅವರ ಹಾಸ್ಯ ಚಟಾಕಿ, ಕುಂದಾಪ್ರ ಶೈಲಿಯಲ್ಲಿ ಎಲ್ಲರಿಗೂ ಊಟದ ವ್ಯವಸ್ಥೆ, ಸೆಲ್ಫಿ ಪಾಯಿಂಟ್, ಶವರ್ ಡಾನ್ಸ್, ಪಕ್ಕದ ಹೊಳೆಯಲ್ಲಿ ಕಯಾಕಿಂಗ್, ಬೋಟಿಂಗ್ ಸೇರಿದಂತೆ ಹಲವು ವಿಶೇಷತೆಗಳನ್ನು ಒಳಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣವಾಗಲಿದೆ ಎಂದರು.

    ಉದ್ಘಾಟನಾ ಸಮಾರಂಭದ ಬಳಿಕ ಒಳಾಂಗಣ ಹಾಗೂ ಹೊರಂಗಾಣದಲ್ಲಿ ಏಕಕಾಲದಲ್ಲಿ ಸ್ಪರ್ಧೆಗಳ ನಡೆಯಲಿದೆ. ಮಕ್ಕಳ ಸ್ಪರ್ಧೆಗಳಿಗೆ ಬೆಳಿಗ್ಗೆ 9ರ ತನಕ ಸ್ಥಳದಲ್ಲಿಯೇ ನೊಂದಣಿ ಇರಲಿದೆ. ಬೆಳಿಗ್ಗೆಯಿಂದಲೇ ಎಲ್ಲಾ ಸ್ಪರ್ಧೆಗಳು ಆರಂಭವಾಗುವುದರಿಂದ ಸ್ಪರ್ಧಿಗಳು ಆರಂಭದಲ್ಲಿಯೇ ಹಾಜರಿರಬೇಕು. ಎಲ್ಲಾ ವಿಭಾಗದ ವಿಜೇತರಿಗೆ ಪದಕ, ಸರ್ಟಿಫಿಕೇಟ್ ಕೊಡಲಾಗುವುದು.

    ಪತ್ರಿಕಾಗೋಷ್ಠಿಯಲ್ಲಿ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯದರ್ಶಿ ಸುನಿಲ್ ಹೆಚ್. ಜಿ. ಬೈಂದೂರು, ಸಂಚಾಲಕರಾದ ಸುಬ್ರಹ್ಮಣ್ಯ ಜಿ. ಉಪ್ಪುಂದ, ಅರುಣ್ ಕುಮಾರ್ ಶಿರೂರು, ಪ್ರಸಾದ್ ಪ್ರಭು ಶಿರೂರು, ಪ್ರಮುಖರಾದ ದಿವಾಕರ ಶೆಟ್ಟಿ ಉಪ್ಪುಂದ, ರಘುರಾಮ ಪೂಜಾರಿ ಶಿರೂರು, ಶೇಖರ ಪೂಜಾರಿ ಉಪ್ಪುಂದ, ಗೌರಿ ದೇವಾಡಿಗ, ಗಣೇಶ್ ಕೊಠಾರಿ, ಸವಿತಾ ದಿನೇಶ್, ಪ್ರಭಾಕರ ಶೆಟ್ಟಿ, ಅನುರ್ ಮೆಂಡನ್, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಕಿಶೋರ್ ಸಸಿಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    18/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ

    18/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.