ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಸ್ತೆ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮ ಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಗಂಗೊಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಡುಬಿದಿರೆ ನಿವಾಸಿ ಮೊಹಮ್ಮದ್ ಅನ್ಸಾರ್ ಯಾನೆ ಅನ್ಸಾರ್ ತೋಡಾರ್ (32) ಬಂಧಿತ ಆರೋಪಿ. ಈತನ ಮೇಲೆ ಈಗಾಗಲೇ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳಿವೆ.
ಜುಲೈ 31ರಂದು ಗಂಗೊಳ್ಳಿ ಗ್ರಾಮದ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮೇಲ್ ಗಂಗೊಳ್ಳಿ ಸಮೀಪ ತೆರಳುತ್ತಿದ್ದಾಗ ಬಿಳಿ ಬಣ್ಣದ ಕ್ರೆಟಾ ಕಾರನಲ್ಲಿ ರಸ್ತೆಯ ಬದಿಯಲ್ಲಿ ಮಲಗಿರುವ ದನವನ್ನು ಹಿಂಸಾತ್ಮಕವಾಗಿ ಹಿಡಿದುಕೊಂಡು ಕಾರಿನ ಹಿಂಬದಿ ಡಿಕ್ಕಿಗೆ ತುಂಬಿಸಿಕೊಂಡಿದ್ದ ಗಮನಕ್ಕೆ ಬಂಧಿದೆ. ಗಸ್ತಿನಲಿದ್ದ ಪೊಲೀಸರು ಗಮನಿಸಿದಾಗ ಕಾರನ್ನು ವೇಗವಾಗಿ ತ್ರಾಸಿ ಕಡೆಗೆ ಚಲಾಯಿಸಿದ್ದಾರೆ. ಪೊಲೀಸರು ಕಾರನ್ನು ಹಿಂಬಾಲಿಸಿಕೊಂಡು ಹೋಗಿದ್ದು ಅಲ್ಲಿಂದ ಪರಾರಿಯಾಗಿದ್ದರು. ಜಾನುವಾರು ವಧೆ ಮಾಡುವ ಸಲುವಾಗಿ ಹಿಂಸಾತ್ಮಕವಾಗಿ ಕೊಂಡೊಯ್ದ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಆರೋಪಿಯ ಪತ್ತೆಗೆ ಗಂಗೊಳ್ಳಿ ಪೊಲೀಸ್ ಠಾಣೆಯಿಂದ ವಿಶೇಷ ತಂಡ ರಚಿಸಿ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿಮೊಹಮ್ಮದ್ ಅನ್ಸಾರ್ ಎಂಬಾತನನ್ನು ಮಂಗಳೂರಿನ ಕೂಳೂರಿನಲ್ಲಿ ಕೃತ್ಯಕ್ಕೆ ಬಳಸಿದ ಕಾರು ಸಮೇತ ವಶಕ್ಕೆ ಪಡೆದು ಅಗಸ್ಟ್ 07ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿತನ ಮೇಲೆ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಒಟ್ಟೂ 13 ಪ್ರಕರಣಗಳು ದಾಖಲಾಗಿರುತ್ತದೆ. ಗಂಗೊಳ್ಳಿ ದನಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಉಳಿದ 3 ಆರೋಪಿತರನ್ನು ಪತ್ತೆಮಾಡಬೇಕಿದೆ.
ಕೃತ್ಯಕ್ಕೆ ಬಳಸಿದ ಬಿಳಿ ಬಣ್ಣದ ಕ್ರೆಟಾ ಕಾರ್ ( ಅಂದಾಜು ಮೌಲ್ಯ 6 ಲಕ್ಷ ರೂಪಾಯಿ) ಹಾಗೂ 1 ಮೊಬೈಲ್ ಪೋನ್ ಗಳನ್ನು (ಅಂದಾಜು ಮೌಲ್ಯ 5 ಸಾವಿರ) ಸ್ವಾದೀನಪಡಿಸಿಕೊಳ್ಳಲಾಗಿದೆ.
ಗಂಗೊಳ್ಳಿ ಪೊಲೀಸ್ ಠಾಣಾ ಪಿ.ಎಸ್.ಐ ಪವನ್ ನಾಯಕ್ (ಕಾ & ಸು), ಬಸವರಾಜ ಕನಶೆಟ್ಟಿ (ತನಿಖೆ), ಹಾಗೂ ಸಿಬ್ಬಂದಿಗಳಾದ ಕೃಷ್ಣ ದೇವಾಡಿಗ, ಚೇತನ್, ಶಾಂತರಾಮ ಶೆಟ್ಟಿ, ಸುರೇಶ್, ಸಚಿನ್ ಶೆಟ್ಟಿ , ರಾಜು ಹಾಗೂ ಸಂದೀಪ ಕುರಣಿ, ಪ್ರಸನ್ನ, ರಾಘವೇಂದ್ರ ಪೂಜಾರಿ,ಮಾಳಪ್ಪ ದೇಸಾಯಿ, ಚಿದಾನಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ತಂಡಕ್ಕೆ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ – ಐಪಿಎಸ್ ಅವರು ಅಭಿನಂದಿಸಿರುತ್ತಾರೆ.















