Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನನ, ಮರಣ ದಾಖಲೆಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ
    ಉಡುಪಿ ಜಿಲ್ಲೆ

    ಜನನ, ಮರಣ ದಾಖಲೆಗಳ ಸಮರ್ಪಕ ನಿರ್ವಹಣೆಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾರ್ವಜನಿಕರಿಗೆ ಜನನ, ಮರಣ ದಾಖಲೆಗಳು ತಮ್ಮ ಶೈಕ್ಷಣಿಕ ಹಾಗೂ ಆರ್ಥಿಕ ವ್ಯವಹಾರಗಳು ಸೇರಿದಂತೆ ಮತ್ತಿತರ ಕೆಲಸ ಕಾರ್ಯಗಳಿಗೆ ಅತ್ಯವಶ್ಯಕ. ಇವುಗಳ ನಿರ್ವಹಣೆ ಸಮರ್ಪಕವಾಗಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಸರಕಾರ ನಾಗರಿಕ ನೋಂದಣಿ ಪದ್ಧತಿಯಲ್ಲಿ ಪ್ರತಿಯೊಬ್ಬ ನಾಗರಿಕರ ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಲು ಕಾನೂನು ಜಾರಿಗೆ ತಂದಿದ್ದು, ಅದರನ್ವಯ ಪ್ರತಿಶತಃ ನೂರರಷ್ಟು ನೋಂದಣಿ ಕಾರ್ಯಗಳು ಆಗುವಂತೆ ಜನನ, ಮರಣ ನೋಂದಣಿ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಎಂದರು.

    ಜನನ, ಮರಣ ಹಾಗೂ ನಿರ್ಜೀವ ಜನನಗಳ ಘಟನೆ ಸಂಭವಿಸಿದ 21 ದಿವಸಗಳ ಒಳಗಾಗಿ ಯಾವುದೇ ಶುಲ್ಕವಿಲ್ಲದೇ 21 ರಿಂದ ನಂತರ 30 ದಿನಗಳೊಳಗಾಗಿ ಶುಲ್ಕ 20 ರೂ. ಗಳನ್ನು ನೀಡಿ, ನಂತರ ಒಂದು ವರ್ಷದ ಅವಧಿಯೊಳಗೆ 50 ರೂ. ಶುಲ್ಕ ಭರಿಸಿ ಪ್ರಾಧಿಕಾರದಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವರ್ಷದ ನಂತರದ ವಿಳಂಬ ನೋಂದಣಿಗೆ ನ್ಯಾಯಾಲಯದ ಆದೇಶ ಪಡೆದು ಮಾಡಬಹುದಾಗಿದೆ ಎಂದರು.

    ಒಂದೊಮ್ಮೆ ಜನನ, ಮರಣ ದಾಖಲಾತಿಗಳನ್ನು ತಪ್ಪು ಮಾಹಿತಿ ನೀಡಿ, ಘಟನೆಗಳನ್ನು ದಾಖಲಿಸುವ ಮಾಹಿತಿದಾರರಿಗೆ ದಂಡ ವಿಧಿಸಲಾಗುವುದು ಎಂದ ಅವರು, ವಿದೇಶದಲ್ಲಿ ಭಾರತೀಯ ಪೌರರು ಜನಿಸಿದ ಮಗುವಿನ ಮಾತಾ-ಪಿತರರು ಭಾರತದಲ್ಲಿ ನೆಲೆಸುವ ಉದ್ದೇಶದಿಂದ ಭಾರತಕ್ಕೆ ಹಿಂದಿರುಗಿದ ಪಕ್ಷದಲ್ಲಿ ಶಿಶುವು ಭಾರತಕ್ಕೆ ಆಗಮಿಸಿದ 60 ದಿನದ ಒಳಗಾಗಿ ಶಿಶುವಿನ ಜನನವನ್ನು ನೋಂದಣಿ ಮಾಡಿಸಲು ಅವಕಾಶವಿದೆ ಎಂದರು.

    Click here

    Click here

    Click here

    Call us

    Call us

    ಜನನ ಮರಣ ನೋಂದಣಿ ದಾಖಲಾತಿಗಳಲ್ಲಿ ಬದಲಾವಣೆ, ತಿದ್ದುಪಡಿ ಮಾಡಲು ಅವಕಾಶಗಳು ಇರುವುದಿಲ್ಲ. ಲಿಪಿಕ ಅಥವಾ ಔಪಚಾರಿಕ ತಪ್ಪುಗಳು ಅಂದರೆ ಅಜಾಗರೂಕತೆ, ಮುದ್ರಣ ದೋಷ, ವಾಸ್ತವಿಕ ತಪ್ಪು, ಯಾವುದೇ ದುರುದ್ದೇಶವಿಲ್ಲದೆ ಅನುಚಿತ ನಮೂದುಗಳನ್ನು ಮಾತ್ರ ತಿದ್ದುಪಡಿಗೆ ಅವಕಾಶವಿದೆ ಎಂದರು.

    ಜನನ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯವನ್ನು 2015 ರಿಂದಲೇ ಜಾರಿಗೆ ತರಲಾಗಿದ್ದು, ಎಲ್ಲಾ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ಇ-ಜನ್ಮ ತಂತ್ರಾಶದಲ್ಲಿ ನೋಂದಣಿ ಕಾರ್ಯವನ್ನು ಕಡ್ಡಾಯವಾಗಿ ಮಾಡಬೇಕು ಎಂದರು.

    ಜನನ, ಮರಣ ಘಟನೆಗಳ ನೋಂದಣಿ ಹಾಗೂ ಪ್ರಮಾಣಪತ್ರಗಳ ವಿತರಣೆಯನ್ನು ಸಕಾಲ ವ್ಯಾಪ್ತಿಯಲ್ಲಿ ಒಳಪಡಿಸಲಾಗಿದ್ದು, ಸಾರ್ವಜನಿಕರಿಗೆ ನಿಗಧಿತ ಕಾಲಾವಧಿಯ ಒಳಗೆ ವಿತರಣೆಗೆ ಕ್ರಮವಹಿಸಬೇಕು ಎಂದರು.

    ಪ್ರಸಕ್ತ ಸಾಲಿನ ಜನವರಿಯಿಂದ ಈವರೆಗೆ ಗ್ರಾಮಾಂತರ ಪ್ರದೇಶದಲ್ಲಿ 763, ನಗರ ವ್ಯಾಪ್ತಿಯಲ್ಲಿ 5436 ಒಟ್ಟು 6,199 ಜನನ ಘಟನೆಗಳು ನೋಂದಾವಣೆಯಾದರೆ, ಗ್ರಾಮೀಣ ಪ್ರದೇಶದಲ್ಲಿ 4242, ನಗರ ಪ್ರದೇಶದಲ್ಲಿ 2789 ಒಟ್ಟು 7031 ಮರಣ ಘಟನೆಗಳು ನೋಂದಾವಣೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 22 ನಿರ್ಜೀವ ಜನನಗಳು ನೋಂದಣಿಯಾಗಿವೆ. ಜಿಲ್ಲೆಯಲ್ಲಿ ಲಿಂಗಾನುಪಾತವು 1000 ಗಂಡುಗಳಿಗೆ, 1004 ಹೆಣ್ಣು ಮಕ್ಕಳಿದ್ದಾರೆ ಎಂದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎಮ್.ವಿ ದೊಡಮನಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d