Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೃಷಿಯಿಂದ ಬೆಂಝ್ ಕಾರಿನವರೆಗೆ – ಪರಿಶ್ರಮವೇ ಯಶಸ್ಸಿನ ಬೀಗ: ರಾಜೇಶ್ ನಾಯ್ಕ್
    alvas nudisiri

    ಕೃಷಿಯಿಂದ ಬೆಂಝ್ ಕಾರಿನವರೆಗೆ – ಪರಿಶ್ರಮವೇ ಯಶಸ್ಸಿನ ಬೀಗ: ರಾಜೇಶ್ ನಾಯ್ಕ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.

    Click Here

    Call us

    Click Here

    ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೈಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್‌ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ’ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು ಶ್ರಮಿಸಿದರೆ, ಉಳಿದ ಹತ್ತು ತಿಂಗಳು ಇತರ ಚಟುವಟಿಕೆಗಳಿಗೆ ಮೀಸಲಿಡಲು ಸಾಧ್ಯ. ಎಲ್ಲಾ ವೃತ್ತಿಗಳಿಗಿಂತಲೂ ಕೃಷಿಯೇ ಹೆಚ್ಚು ಸಂತಸ ಮತ್ತು ತೃಪ್ತಿ ನೀಡುವ ಉದ್ಯೋಗವಾಗಿದೆ ಎಂದು ಅವರು ಹೇಳಿದರು.

    ಬಂಜರು ಭೂಮಿಯನ್ನು ಸಮೃದ್ಧ ಕೃಷಿಭೂಮಿಯಾಗಿಸಿದ ಪರಿ ಮಂಗಳೂರಿನ ಸಮೀಪ ಒಡ್ಡೂರಿನಲ್ಲಿರುವ 150 ಎಕರೆ ಬಂಜರು ಭೂಮಿಯನ್ನು ಸಾವಯವ ಕೃಷಿ ತೋಟವನ್ನಾಗಿ ಪರಿವರ್ತಿಸಿದ ಪರಿಯನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಹಲವಾರು ಸವಾಲುಗಳನ್ನು ಎದುರಿಸಿದರೂ, ನಿರಂತರ ಶ್ರಮ, ಹೋರಾಟ ಮನೋಭಾವ ಮತ್ತು ಸದಾ ಆಶಾವಾದೊಂದಿಗಿನ ಮನಸ್ಥಿತಿಯಿಂದ ಈ ಸಾಧನೆ ಸಾಧ್ಯವಾಯಿತು ಎಂದರು. 

    ಕೃಷಿ ಮಾಡಿ ಫಾರ್ಚುನರ್ ಅಲ್ಲಾ ಬೆಂಝ್ ಕಾರು ಖರೀದಿಸಬಹುದು ಇತ್ತೀಚೆಗೆ ತಮ್ಮ ಫಾರ್ಮಾಗೆ ಆಗಮಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡದಲ್ಲಿದ್ದ ವಿದ್ಯಾರ್ಥಿಯೊಬ್ಬ ತಮಗೆ ಹಾಕಿದ ಪ್ರಶ್ನೆಗೆ ಉತ್ತರಿಸಿದ ಸಂಧರ್ಭವನ್ನು ಸಭಿಕರೊಂದಿಗೆ ಹಂಚಿಕೊಂಡರು. ಕೃಷಿಯಲ್ಲಿ ಯಶಸ್ಸು ಸಾಧಿಸಲು ಕೇವಲ ಭೂಮಿ ಸಾಕಾಗುವುದಿಲ್ಲ. ಅದರೊಂದಿಗೆ ನಿರಂತರ ಪರಿಶ್ರಮ, ನವೀನ ಆಲೋಚನೆ, ಸವಾಲುಗಳನ್ನು ಎದುರಿಸುವ ಮನೋಬಲ ಮತ್ತು ಉದ್ಯಮಶೀಲ ಮನೋಭಾವ ಅಗತ್ಯ. ಬೆಳೆಯ ಬಿತ್ತನೆದಿಂದ ಮಾರುಕಟ್ಟೆ ವಹಿವಾಟು ವರೆಗೆ ಪ್ರತಿಯೊಂದು ಹಂತದಲ್ಲೂ ಸಂಪೂರ್ಣ ತೊಡಗಿಸಿಕೊಂಡರೆ, ರೈತ ತನ್ನ ಆರ್ಥಿಕ ಸ್ಥಿತಿಯನ್ನು ಉನ್ನತ ಮಟ್ಟಕ್ಕೆ ಏರಿಸಬಲ್ಲ ಎಂಬುದಕ್ಕೆ ತಾನೇ ಉತ್ತಮ ಉದಾಹರಣೆ ಎಂದರು.

    Click here

    Click here

    Click here

    Call us

    Call us

    ಆಹಾರದ ಬೆಲೆ ಕಡಿಮೆ ಇರಬೇಕಾದರೆ ಬದಿ ಬೀದಿ ಮಾರಾಟ ಅನಿವಾರ್ಯ ಪಾದಗಳಿಗೆ ಹಾಕುವ ಚಪ್ಪಲಿಯನ್ನು ಏರ್‌ಕಂಡೀಷನ್ ಕೊಠಡಿಯಲ್ಲಿ ಮಾರಲಾಗುತ್ತದೆ, ಆದರೆ ಹೊಟ್ಟೆಗೆ ತಿನ್ನುವ ಆಹಾರವನ್ನು ಏಕೆ ಬದಿ ಬೀದಿಯಲ್ಲಿ ಮಾರಲಾಗುತ್ತದೆ ಎಂಬ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿ ಕೊಳ್ಳುವವನ ಮನಸ್ಥಿತಿಯೇ ಮುಖ್ಯ. ಜನರು ಕಡಿಮೆ ಬೆಲೆಗೆ ಆಹಾರ ಪದಾರ್ಥಗಳನ್ನು ಪಡೆಯಬೇಕೆಂದು ಬಯಸುತ್ತಾರೆ. ಆದರೆ ಅದನ್ನು ಏರ್‌ಕಂಡೀಷನ್ ಅಂಗಡಿಯಲ್ಲಿ ಮಾರಾಟ ಮಾಡುವುದಾದರೆ, ವೆಚ್ಚ ಹೆಚ್ಚಾಗಿ, ಬೆಲೆಯೂ ಹೆಚ್ಚಾಗುತ್ತದೆ. ಆದ್ದರಿಂದ, ಹೆಚ್ಚು ದುಂದುವೆಚ್ಚವಿಲ್ಲದ ಬದಿ ಬೀದಿಯಲ್ಲೇ ಮಾರಾಟ ಮಾಡುವುದು ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೂ ಅನುಕೂಲಕರವಾಗಿರುತ್ತದೆ ಎಂದು ವಿವರಿಸಿದರು.

    ತಾನು ರಾಜಕೀಯಕ್ಕೆ ಬೈ ಚಾನ್ಸ್ ಆಗಮಿಸಿದರೂ, ಸಂಪೂರ್ಣ ಸಮರ್ಪಣಾಭಾವದಿಂದ ಕೆಲಸಮಾಡಿದ ತೃಪ್ತಿ ತನಗಿದೆ. ಇನ್ನೂ ಕೆಲವು ವರ್ಷಗಳು ಸಕ್ರಿಯ ರಾಜಕೀಯದಲ್ಲಿದ್ದು, ಗೌರವಪೂರ್ವಕವಾಗಿ ಈ ಕ್ಷೇತ್ರದಿಂದ ನಿರ್ಗಮಿಸಬೇಕೆಂಬ ಹಂಬಲವಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆವಯಿಸಿ ಮಾತನಾಡಿದ ಸಂಸ್ಥೆಯ ಟ್ರಸ್ಟಿ ವಿವೇಕ್ ಆಳ್ವ, ದೇಶ ಕಟ್ಟುವ ಕೆಲಸ ಕೃಷಿ ಮೂಲಕ ಸಾಧ್ಯ. ಆಹಾರ ಭದ್ರತೆಯ ಕೊರತೆ ಯಾವುದೇ ರಾಷ್ಟ್ರದ ಪ್ರಗತಿಗೆ ದೊಡ್ಡ ತಡೆ. ಆದ್ದರಿಂದ, ಕೃಷಿ ಉತ್ಪಾದನೆ ಹೆಚ್ಚಿಸಿ, ಸಂಗ್ರಹಣೆ ಮತ್ತು ವಿತರಣೆ ವ್ಯವಸ್ಥೆ ಸುಧಾರಿಸುವ ಮೂಲಕ ಆಹಾರ ಭದ್ರತೆಯನ್ನು ಸಾಧಿಸಲು ಸಾಧ್ಯ. ವಿದ್ಯಾರ್ಥಿಗಳು ಇಂತಹ ಸಾಧಕರಿಂದ  ಪ್ರೇರಣೆಯನ್ನು  ಪಡೆದು ಕೃಷಿಯಲ್ಲಿ  ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಮುಂದೆ ಬರಬೇಕು ಎಂದರು.

    ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ ಕುರಿಯನ್, ವಿಭಾಗದ ಮುಖ್ಯಸ್ಥೆ ಸುರೇಖಾ ರಾವ್, ವೇದಿಕೆಯ ನಿರ್ದೇಶಕಿ ಸೋನಿ, ವಿದ್ಯಾರ್ಥಿ ಸಂಯೋಜಕರಾದ ನಿರೀಕ್ಷಣ್ ಶೆಟ್ಟಿ ಹಾಗೂ  ಇಶಿಕಾ ಅಂಚನ್ ಇದ್ದರು. ಮಾನಸ ಸ್ವಾಗತಿಸಿ, ಖುಷಿ ಶೆಟ್ಟಿ ನಿರೂಪಿಸಿ, ಸಮೀಕ್ಷಾ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೋಲು ಕಲಿಸುವ ಪಾಠ ದೊಡ್ಡ ಯಶಸ್ಸಿಗೆ ಕಾರಣ: ಮುನಿಯಾಲ್ ಉದಯ ಕುಮಾ‌ರ್ ಶೆಟ್ಟಿ

    08/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ವಾರ್ಷಿಕೋತ್ಸವ

    08/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d