Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬೆಳಕು -ಆಪ್ತ ಸಮಾಲೋಚನಾ ಘಟಕದ ನೂತನ ಕೇಂದ್ರ ಉದ್ಘಾಟನೆ
    alvas nudisiri

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಬೆಳಕು -ಆಪ್ತ ಸಮಾಲೋಚನಾ ಘಟಕದ ನೂತನ ಕೇಂದ್ರ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ಬೆಳಕು – ಆಪ್ತ ಸಮಾಲೋಚನಾ ಕೇಂದ್ರ’ವನ್ನು ಆಳ್ವಾಸ್ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಸ್ಥಳಾಂತರಿಸಿ ಉದ್ಘಾಟಿಸಲಾಯಿತು.

    Click Here

    Call us

    Click Here

    ಪ್ರತಿಷಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅವರು ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ, ಭೂಮಿಯಲ್ಲಿರುವ ಎಲ್ಲಾ ಜೀವಿಗಳ ಪೈಕಿ ಮನುಷ್ಯ ಅತ್ಯಂತ ವಿಶೇಷ.  ತನ್ನ ಬುದ್ಧಿಶಕ್ತಿ, ಕಲ್ಪನೆ, ನೈತಿಕ ಮೌಲ್ಯಗಳು ಹಾಗೂ ಸಮಾಜವನ್ನು ರೂಪಿಸುವ ಸಾಮರ್ಥ್ಯವು ಮನುಷ್ಯನನ್ನು ಇತರ ಜೀವರಾಶಿಗಳಿಗಿಂತ ಭಿನ್ನಗೊಳಿಸಿದೆ. ಆದರೆ, ಈ ಅಸಾಧಾರಣ ಸಾಮರ್ಥ್ಯಗಳ ಜೊತೆಗೆ ಮನುಷ್ಯ ತನ್ನ ಭಾವನಾತ್ಮಕ ಅಸ್ಥಿರತೆಯ ಬಲೆಗೆ ಸುಲಭವಾಗಿ ಸಿಲುಕ ಬಲ್ಲ ಎಂದರು.

    ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯತ್ನ ಮಾಡುವ ಸಂದರ್ಭಗಳಲ್ಲಿ, ಸ್ಪರ್ಧೆ, ಅತಿಯಾದ ಆಕಾಂಕ್ಷೆ ಹಾಗೂ ಪೋಷಕರ ಒತ್ತಡದಿಂದಾಗಿ ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಕೆಲವೊಮ್ಮೆ ಸಾಧ್ಯವಾಗುವುದಿಲ್ಲ. ಇಂತಹ ಸಂದರ್ಭಗಳು ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಈ ಸಮಯದಲ್ಲಿ ಆಪ್ತ ಸಮಾಲೋಚನೆಯ ಅಗತ್ಯತೆಯಿದೆ ಎಂದರು.

    ಸಮಸ್ಯೆಯಿಂದ ಬಳಲುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲಕರು ಕೂಡಲೇ ಗುರುತಿಸಿ, ಸೂಕ್ತ ಮಾರ್ಗದರ್ಶನ ಮತ್ತು ಚಿಕಿತ್ಸೆ ನೀಡಿದರೆ ಅವರು ಬೇಗನೆ ಚೇತರಿಸಿಕೊಳ್ಳಬಹುದು ಎಂದು ತಿಳಿಸಿದರು.

    ಕಾರ‍್ಯಕ್ರಮದಲ್ಲಿ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಪದವಿಪೂರ್ವ ಕಾಲೇಜಿನ ಪ್ರಾಚಾರ‍್ಯ ಸದಾಕತ್, ಬೆಳಕು-ಆಪ್ತ ಸಮಾಲೋಚನಾ ಕೇಂದ್ರದ ಮುಖ್ಯ ಆಪ್ತಸಮಾಲೋಚಕಿ ರೆನಿಟಾ ಡಿಸೋಜಾ, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್, ಆಪ್ತಸಮಾಲೋಚಕರಾದ ಆನ್ ಡಿಕೋಸ್ಟಾ, ಸುಜನ್ ಶೆಟ್ಟಿ ಹಾಗೂ ಇನ್ನಿತರರು ಇದ್ದರು.

    Click here

    Click here

    Click here

    Call us

    Call us

     
    ಆಳ್ವಾಸ್ ಆಪ್ತ ಸಮಾಲೋಚನಾ ಕೇಂದ್ರದಲ್ಲಿ ವೃತ್ತಿಪರ ಸಮಾಲೋಚಕರ ಜೊತೆಗೆ ಆಯುರ್ವೇದ, ಪ್ರಕೃತಿ ಚಿಕಿತ್ಸೆ ಹಾಗೂ ಹೋಮಿಯೋಪತಿ ವೈದ್ಯರ ಸೇವೆಯೂ ಲಭ್ಯವಿದೆ. ಕೇಂದ್ರವು ವಿದ್ಯಾರ್ಥಿಗಳ ಮಾನಸಿಕ ಮತ್ತು ಭಾವನಾತ್ಮಕ ಸುಸ್ಥಿತಿಗಾಗಿ ಸುರಕ್ಷಿತ ಹಾಗೂ ಗೌಪ್ಯತೆಯೊಂದಿಗೆ ಚಿಕಿತ್ಸೆಯನ್ನು ನೀಡುತ್ತದೆ. ವೈಯಕ್ತಿಕ ಸಮಾಲೋಚನೆ ಮತ್ತು ಗುಂಪು ಚಟುಚಟಿಕೆಗಳ ಮೂಲಕ ಮನಸ್ಸಿನ ಗೊಂದಲ ನಿವಾರಣೆ, ಸಹನಶೀಲತೆಯ ವೃದ್ಧಿ, ಆತ್ಮವಿಶ್ವಾಸ ಬೆಳೆಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ. ಇಲ್ಲಿ ಪ್ರಮುಖವಾಗಿ ಸೈಕೋ ತೆರೆಪಿ, ಬಿಬ್ಲಿಯೋ ತೆರೆಪಿ ಹಾಗೂ ಮ್ಯೂಸಿಕ್ ತೆರೆಪಿಗಳ  ಮೂಲಕ ವಿದ್ಯಾರ್ಥಿಗಳ ಭಾವನಾತ್ಮಕ ಹಾಗೂ ಮಾನಸಿಕ ಸಮಸ್ಯೆಗಳನ್ನು  ಬಗೆಹರಿಸಲಾಗುತ್ತದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.