Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಕುಂದಾಪ್ರ ಭಾಷೆ ತನ್ನದೆ ಆದ ಪರಂಪರೆಯನ್ನು ವಿಶ್ವದೆಲ್ಲೆಡೆ ಪಸರಿಸಿಕೊಂಡಿದೆ, ಇಲ್ಲಿನ ಭಾಷೆಯ ಜತೆಗೆ ಸಾಂಪ್ರಾದಾಯಿಕ ಬದುಕು ಕಟ್ಟಿಕೊಟ್ಟಿದೆ ಎಂದು ಸಾಹಿತಿ ಕುಂದಗನ್ನಡದ ಪೂರ್ಣಿಮಾ ಕಮಲಶಿಲೆ  ಹೇಳಿದರು.

    Click Here

    Call us

    Click Here

    ಅವರು ಭಾನುವಾರ ಕೋಟದ ಹಂದಟ್ಟು ಗೆಳೆಯರ ಬಳಗ ಗೀತಾನಂದ ವೇದಿಕೆಯಲ್ಲಿ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲ ಕೋಟ ಇದರ ಮಾರ್ಗದರ್ಶನದಲ್ಲಿ ನಾಲ್ಕನೇ ವರ್ಷದ ಆಸಾಡಿ ಒಡ್ರ್‌-2025 ಊರ್ ಕೇರಿ ಬದ್ಕಿನ್ ಹಬ್ಬು ಕುಂದಾಪ್ರ ಭಾಷಿಯ ಗಮ್ಜಲ್ ಮಾಡಿ ಮಾತನಾಡಿದರು.

    ಇಂದಿನ ಮಕ್ಕಳು ಬರೇ ಮೊಬೈಲ್ ಗೀಳಿನಲ್ಲಿ ಕುಂದಾಪ್ರ ಭಾಷೆ ಬದುಕಿನ ವಿಚಾರಧಾರೆಯನ್ನು ಮೆರೆತಿರುವುದು ಬೇಸರದ ಸಂಗತಿ. ಮನೆಯ ಹಿರಿಯರು ಮಕ್ಕಳಿಗೆ ಇದರ ಉಳಿವಿನ ಬಗ್ಗೆ ಆಗಾಗ ತಿಳಿಹೇಳುವ ಕಾರ್ಯಮಾಡಬೇಕು. ಪಂಚವರ್ಣ ಮಹಿಳಾ ಮಂಡಲ ಈ ಕುಂದಗನ್ನಡ ಸಂಸ್ಕತಿ ಉಳಿಸುವ ಕಾರ್ಯ ಪ್ರಶಂಸನೀಯ. ಇಂತಹ ಕಾರ್ಯಕ್ರಮ ಎಲ್ಲೆಡೆ ಪಸರಿಸಿಕೊಳ್ಳಲಿ ಭಾಷಾಭಿಮಾನ, ಬದುಕಿನ ಸಂಸ್ಕಾರದ ಬೀಜ ಬಿತ್ತೋಣ ಎಂದರು.

    ಕಾರ್ಯಕ್ರಮವನ್ನು ಸಮಾಜಸೇವಕಿ  ಡಾ. ವಾಣಿಶ್ರೀ ಐತಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುಂದಾಪ್ರ ಭಾಷೆಯಲ್ಲಿ ವೈವಿಧ್ಯತೆ ಇದೆ ನಮ್ಮ ಪೂರ್ವಜರು ಬಳುವಳಿಯಾಗಿ ನೀಡಿದ ಬದುಕಿನ ಸಂಸ್ಕತಿಯನ್ನು  ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರು ಮಾಡಬೇಕು ಎಂದರು.

    ಗ್ರಾಮೀಣ ಪರಿಕರವನ್ನು ಮಾಜಿ ಜಿ.ಪಂ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಉದ್ಘಾಟಿಸಿದರು. ಆಸಾಡಿ ಒಡ್ರ್ ಗ್ರಾಮೀಣ ತಿನಿಸುಗಳನ್ನು ಸಾಂಸ್ಕತಿಕ ಚಿಂತಕಿ ಪ್ರೇಮ ಶೆಟ್ಟಿ  ಅನಾವರಣಗೊಳಿಸಿದರು.

    Click here

    Click here

    Click here

    Call us

    Call us

    ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಸಭಾ ಕಾರ್ಯಕ್ರಮ ತೆಂಗಿನ ಹೂ ಅರಳಿಸುವ ಮೂಲಕ ಚಾಲನೆ ನೀಡಿದರು.

    ಆಸಾಡಿ ಒಡ್ರ್ ಸಾಧಕ ಪುರಸ್ಕಾರವನ್ನು ಸಾಮಾಜಿಕ ಚಿಂತಕಿ ಭಾರತಿ ವಿ. ಮಯ್ಯ ಅವರಿಗೆ ನೀಡಲಾಯಿತು.ಲೇಖಕಿ ಪೂರ್ಣಿಮಾ ಕಲಮಶಿಲೆ ಇವರನ್ನು ಅಭಿನಂದಿಸಲಾಯಿತು.

    ಹಂದಟ್ಟು ಮಹಿಳಾ ಬಳಗದ ವತಿಯಿಂದ ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ದಿನಸಿ ಪರಿಕರವನ್ನು ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ರತ್ನಾ ಪೂಜಾರಿ ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ ಅವರಿಗೆ ಹಸ್ತಾಂತರಿಸಿದರು.

    ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ  ಪಂಚವರ್ಣ ಮಹಿಳಾ ಮಂಡಲದ ಗೌರವಾಧ್ಯಕ್ಷೆ ಕುಸುಮಾ ದೇವಾಡಿಗ, ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಗೆಳೆಯರ ಬಳಗ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಮಹಿಳಾ ಮಂಡಲದ ಚಾಲಕಿ ಸುಜಾತ ಬಾಯರಿ ಹಾಗೂ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರೆ, ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರೆ, ಸದಸ್ಯೆ ವೀಣಾ ಪ್ರಕಾಶ್  ಪಡುಕರೆ ಪ್ರಾಸ್ತಾವನೆ ಸಲ್ಲಿಸಿದರು, ಸದಸ್ಯೆ  ವಸಂತಿ ಕುಂದರ್ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಕೋಶಾಧಿಕಾರಿ ಸುಜಾತ ಉದಯ್ ತಿಂಗಳಾಯ ವಂದಿಸಿದರು.ಕಾರ್ಯಕ್ರಮವನ್ನು ಯುವಕ ಮಂಡಲದ ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.

    ಕಾರ್ಯಕ್ರಮದಲ್ಲಿ ಗಾಡಿ ಕೂಸಣ್ಣನ ಎತ್ತಿನ ಗಾಡಿ,ಗ್ರಾಮೀಣ ಪರಿಕರಗಳಾದ ಚೆನ್ನಿಮಣಿ, ಕೊಪ್ಪರಿಗೆ, ನೇಗಿಲು ನೋಗ, ತಾಮ್ರದಹರಿ, ಮಣ್ ಮರ್ಗಿ, ಹಳೆಯ ಕಾಲದ ಗಡಿಯಾರ, ಗಾಡಿ ಕೂಸಣ್ಣನ ಎತ್ತಿನಗಾಡಿ, ಗಿರೀಜಾ ಬೋಜಣ್ಣ ಇವರ ಕಂಬಳ ಪರಿಕರ, ಸಾಂಬಾರ್ ಬಟ್ಲ್,ನರೋಳಿ ಸೊಪ್ಪಿನ ದೊಸೆ,ಬೆಸಿದ ಕಡ್ಲೆ,ಅಕ್ಕಿ ಉಂಡಿ, ಹೀಗೆ ೮೦ಕ್ಕೂ ಅಧಿಕ ಬಗೆಯ ತಿಂಡಿ ತಿನಿಸುಗಳ ಸ್ಪರ್ಧೆಯಲ್ಲಿ ಕಂಡುಬಂತು.  ಹಂದಟ್ಟು ಸುಬ್ಬಯ್ಯ ಪೂಜಾರಿ ಹೊಲಿ ಕರೆಯುವ ಹಾಗೂ ಸ್ಥಳೀಯ ಪುಟಾಣಿಗಳು ಹೊಲಿ ಕೂಗುವ ದೃಶ್ಯ ವಿಶೇಷವಾಗಿ ಗಮನ ಸೆಳೆಯಿತು.

    ಆರಂಭದಲ್ಲಿ ಸ್ನೇಹಕೂಟದಿಂದ ಸಾಂಸ್ಕತಿಕ ಕಾರ್ಯಕ್ರಮ
    ಆಸಾಡಿ ಒಡ್ರ್ ಕಾರ್ಯಕ್ರಮದ ಸಾಂಸ್ಕ್ರೃತಿಕ ಕಾರ್ಯಕ್ರಮಕ್ಕೆ ವಿಶಿಷ್ಠವಾಗಿ ಪಂಚವರ್ಣ ಮಹಿಳಾ ಮಂಡಲದ ಪದಾಧಿಕಾರಿಗಳು ಹಳೆಯ ಸಂಪ್ರದಾಯದಂತೆ ದೀಪ, ಭತ್ತ ಸಸಿ, ವಿಳ್ಯೆದೆಲೆ, ಅಡಿಕೆ, ತುಳಸಿ ಕಟ್ಟೆ, ಕಳಶ, ಅರಸಿನ ಕುಂಕುಮ, ಬಳೆ, ಹೂವು, ಸಿಂಗಾರ, ಹಣ್ಣು, ನೀರು ಬೆಲ್ಲ ಹಿಡಿದು ವೇದಿಕೆಯ ಮೇಲೆ ತಂದಿರಿಸಿ ಗಣ್ಯರನ್ನು  ಸ್ವಾಗತಿಸಿದರು. ಕಾರ್ಯಕ್ರಮಕ್ಕೆ ಸ್ನೇಹಕೂಟದ ಸಂಚಾಲಕಿ ಭಾರತಿ ವಿಷ್ಣುಮೂರ್ತಿ ಮಯ್ಯ ದಂಪತಿಗಳು ಭತ್ತಸ ಗಿಡಕ್ಕೆ ನೀರೇರೆವ ಮೂಲಕ ಉದ್ಘಾಟಿಸಿದರು.ಸ್ನೇಹಕೂಟ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಸಂಪನ್ನಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    19/12/2025

    ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.