Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಗೊತ್ತುವಳಿ ತಿರಸ್ಕೃತ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ಗೊತ್ತುವಳಿ ತಿರಸ್ಕೃತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಗಂಗೊಳ್ಳಿ: ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯ ಕೋರಂ ಅಭಾವದ ಹಿನ್ನಲೆಯಲ್ಲಿ ತಿರಸ್ಕೃತಗೊಂಡಿದೆ. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಸಹಾಯಕ ಕಮೀಷನರ್ ಚಾರುಲತಾ ಸೋಮಲ್ ಅಧ್ಯಕ್ಷತೆಯಲ್ಲಿ ಜರಗಿದ ಗ್ರಾಪಂ ಅಧ್ಯಕ್ಷರ ವಿರುದ್ಧ ಸಲ್ಲಿಸಲಾಗಿರುವ ಅವಿಶ್ವಾಸ ಸೂಚನೆ ಪರ್ಯಾಲೋಚನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಹೊರ ಬಿದ್ದಿದೆ.

    Click Here

    Call us

    Click Here

    ಸಭೆಯಲ್ಲಿ ಗಂಗೊಳ್ಳಿ ಗ್ರಾಮ ಪಂಚಾಯತ್‌ನ 33 ಸದಸ್ಯರಲ್ಲಿ ಕೇವಲ ನಾಲ್ಕು ಜನ ಸದಸ್ಯರು ಹಾಜರಾಗಿರುವ ಹಿನ್ನಲೆಯಲ್ಲಿ ಕೋರಂ ಅಭಾವದಿಂದ ಅಧ್ಯಕ್ಷರ ವಿರುದ್ಧ ನಡೆದ ಅವಿಶ್ವಾಸ ಗೊತ್ತುವಳಿಯ ನಿರ್ಣಯವನ್ನು ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ 1993 ಪ್ರಕರಣ 49ರಂತೆ ತಿರಸ್ಕರಿಸಿ ಸಭೆಯಲ್ಲಿ ಘೋಷಣೆ ಮಾಡಲಾಯಿತು. ಗಂಗೊಳ್ಳಿ ಗ್ರಾಪಂ ನ 33 ಸದಸ್ಯರಲ್ಲಿ 19 ಮಂದಿ ಬಿಜೆಪಿ ಬೆಂಬಲಿಯ ಹಾಗೂ 14 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಗ್ರಾಪಂ ಅಧ್ಯಕ್ಷರು ಸೇರಿದಂತೆ 15 ಮಂದಿ ಬಿಜೆಪಿ ಬೆಂಬಲಿತ ಮತ್ತು ಕಾಂಗ್ರೆಸ್ ಬೆಂಬಲಿತ ಎಲ್ಲಾ 14 ಮಂದಿ ಸದಸ್ಯರು ಸಭೆಗೆ ಗೈರು ಹಾಜರಾಗಿದ್ದರು. ಗಂಗೊಳ್ಳಿ ಪಿಡಿಒ ಪ್ರವೀಣ ಡಿಸೋಜ ಹಾಗೂ ಗ್ರಾಮ ಲೆಕ್ಕಿಗ ರಾಘವೇಂದ್ರ ದೇವಾಡಿಗ ಹಾಗೂ ಸಹಾಯಕ ಕಮೀಷನರ್ ಕಛೇರಿಯ ಸಿಬ್ಬಂದಿಗಳು ಹಾಗೂ ಗಂಗೊಳ್ಳಿ ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಹಿನ್ನಲೆ: ಕಳೆದ ಸುಮಾರು 2 ವರ್ಷಗಳಿಂದ ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಗ್ರಾಪಂ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಕಳೆದ ಕೆಲವು ತಿಂಗಳಿನಿಂದ ಗ್ರಾಪಂ ಅಧ್ಯಕ್ಷರ ವಿರುದ್ಧ ಅನೇಕ ಸ್ವಪಕ್ಷೀಯ ಗ್ರಾಪಂ ಸದಸ್ಯರು ತೀವ್ರ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಪಕ್ಷದ ಮುಖಂಡರು ಅನೇಕ ಬಾರಿ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರ ನಡುವೆ ಹೊಂದಾಣಿಕೆ ಏರ್ಪಡಿಸುವ ನಿಟ್ಟಿನಲ್ಲಿ ಸಭೆಗಳನ್ನು ನಡೆಸಿ ಅಧ್ಯಕ್ಷರು ಹಾಗೂ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳಿಗೆ ತೇಪೆ ಹಚ್ಚುವ ಕೆಲಸ ನಡೆಸಲಾಗಿತ್ತು. ಆದರೆ ಗ್ರಾಪಂ ಅಧ್ಯಕ್ಷರ ಕಾರ್ಯಶೈಲಿ ಹಾಗೂ ನಡುವಳಿಕೆಯಲ್ಲಿ ಯಾವುದೇ ಬದಲಾವಣೆ ಕಂಡು ಬಾರದ ಹಿನ್ನಲೆಯಲ್ಲಿ ಮತ್ತು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಂದರ್ಭ ಗ್ರಾಪಂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಗ್ರಾಪಂ ಅಧ್ಯಕ್ಷರ ವಿರುದ್ಧ ಗ್ರಾಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷರ ವಿರುದ್ಧ ಗ್ರಾಪಂ.ನ 24 ಜನ ಸದಸ್ಯರು ಸಹಿ ಮಾಡಿದ ಅವಿಶ್ವಾಸ ಗೊತ್ತುವಳಿ ಸೂಚನೆಯನ್ನು ಕುಂದಾಪುರದ ಸಹಾಯಕ ಕಮೀಷನರ್ ಅವರಿಗೆ ಸಲ್ಲಿಸಿದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ಈ ಹಿನ್ನಲೆಯಲ್ಲಿ ಸಹಾಯಕ ಕಮೀಷನರ್ ಅವರು ಕರ್ನಾಟಕ ಪಂಚಾಯತ್‌ರಾಜ್ ಅಧಿನಿಯಮ 1993 ಪ್ರಕರಣ 49ರಂತೆ ಎಲ್ಲಾ ಗ್ರಾಪಂ ಸದಸ್ಯರಿಗೆ ನ.16ರಂದು ಪರ್ಯಾಲೋಚನಾ ಸಭೆಯ ನೋಟಿಸನ್ನು ಜಾರಿಗೊಳಿಸಿದ್ದರು. ಈ ನಡುವೆ ಬಿಜೆಪಿ ಬೆಂಬಲಿತ ಸದಸ್ಯರೊಂದಿಗೆ ನಿರಂತರ ಸಭೆ ನಡೆಸಿ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆಯನ್ನು ನೀಡಿದ ಬಿಜೆಪಿ ಮುಖಂಡರು, ಅವಿಶ್ವಾಸ ಗೊತ್ತುವಳಿ ಸೂಚನೆ ಮಂಡಿಸಿದ ಗ್ರಾಪಂ. ಸದಸ್ಯರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026
    Leave A Reply Cancel Reply

    twenty − sixteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.