Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತುಂಬಾಡಿ ರಾಮಯ್ಯ ಅವರಿಗೆ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ತುಂಬಾಡಿ ರಾಮಯ್ಯ ಅವರಿಗೆ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ

    Updated:14/08/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಅ.13:
    ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ಗುಣಗಳನ್ನು ಮೈಗೂಡಿಸಿಕೊಂಡರೆ ಮಾತ್ರ ಎಲ್ಲರನ್ನೂ ಗೌರವಾದರದಿಂದ ಕಾಣಲು ಸಾಧ್ಯವಾಗುತ್ತದೆ. ಎಲ್ಲಾ ಜಾತಿ, ಧರ್ಮಗಳು ಹಾಗೂ ಸಂಸ್ಕೃತಿಯನ್ನು ಗೌರವಿಸುವ ಬಹುತ್ವ ಈ ನೆಲೆದಲ್ಲಿ ಸಾವಿರಾರು ವರ್ಷಗಳಿಂದಲೂ ಇದೆ. ಈ ಬಹುತ್ವದ ನೆಲಗಟ್ಟನ್ನು ಗಟ್ಟಿಗೊಳಿಸುವ ಕಾರ್ಯ ಮುಖ್ಯವಾದದ್ದು ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರು ಹೇಳಿದರು.

    Click Here

    Call us

    Click Here

    ಅವರು ಬುಧವಾರ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆದ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಜಾಲ್ಗಿರಿ’ ಕೃತಿಕಾರ ತುಂಬಾಡಿ ರಾಮಯ್ಯ ಅವರಿಗೆ ಪ್ರಶಸ್ತಿ ಪ್ರದಾನಿಸಿ ಮಾತನಾಡಿ, ಸಾಂವಿಧಾನಿಕ ಮೌಲ್ಯ, ಜಾತ್ಯಾತೀತ ಮೌಲ್ಯ ಹಾಗೂ ಮಾನವೀಯ ಮೌಲ್ಯವನ್ನು ಎತ್ತಿಹಿಡಿಯುವ ಕಾರ್ಯ ಇಂದು ಪ್ರಾಮುಖ್ಯವಾದದ್ದು. ತುಂಬಾಡಿ ಅವರ ಕೃತಿಗಳು ಈ ಮೌಲ್ಯಗಳಿಗೆ ಒತ್ತು ನೀಡಿದೆ ಎಂದರು.

    ಸಾಂಸ್ಕೃತಿಕ ಚಿಂತಕ, ಪ್ರಶಸ್ತಿ ಸಮಿತಿಯ ತೀರ್ಪುಗಾರರಾದ ಡಾ.‌ ಬಂಜೆರೆ ಜಯಪ್ರಕಾಶ್ ಅವರು ವರ್ಚುವಲ್ ವೇದಿಕೆಯಲ್ಲಿ ಮಾತನಾಡಿ, ತುಂಬಾಡಿ ಅವರ ಕಥನ ಒಂದು‌‌ ಕಾಲಘಟ್ಟದ ಕಥನ‌ ಮಾತ್ರವಾಗಿರದೇ ಆಲ್ಲಿ‌ ಊರು ಕೇರಿಗಳು ಹಾಗೂ ವ್ಯಕ್ತಿಗಳ ನಿಜ ಬದುಕಿನ ದರ್ಶನವಾಗಿದೆ ಎಂದ ಅವರು, ಇಂತಹ ಕೃತಿಗಳನ್ನು ಪ್ರೋತ್ಸಾಹಿಸುವುದರಿಂದ ಕನ್ನಡದ ಸಾಹಿತ್ಯದ ಬೆಳವಣಿಗೆ ಹಾಗೂ ಅದರ ಸತ್ವವನ್ನು‌ ವಿಸ್ತರಿಸಲು ಕಾರಣವಾಗುತ್ತದೆ ಎಂದರು.

    ಪ್ರಶಸ್ತಿ ಸ್ವೀಕರಿಸಿದ ತುಂಬಾಡಿ ರಾಮಯ್ಯ ಅವರು ಮಾತನಾಡಿ, ಜಾತಿಯ ಕಾರಣಕ್ಕೆ ಎದುರಿಸುತ್ತಿದ್ದ ಸವಾಲುಗಳು, ಎಲ್ಲಾ ರೀತಿಯ ವ್ಯಕ್ತಿತ್ವಗಳು ನನ್ನ ಬರವಣಿಗೆ ಕಾರಣವಾಯಿತು. ಎದುರಾದ ವ್ಯಕ್ತಿಗಳೇ ಪಾತ್ರಗಳಾದರು. ಧರ್ಮ, ಜಾತಿ ಕಲಹದ ನಡುವೆ ಯುವ ಪೀಳಿಗೆಯ ಭವಿಷ್ಯದ ಬಗ್ಗೆ ಆತಂಕ ಮೂಡುತ್ತದೆ. ಆದರೆ ಈ ಕ್ಷಣದ ಕಲಹಗಳ ಕೊನೆಗೊಳ್ಳುವ ಭರವಸೆ ಇದೆ ಎಂದರು.

    ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕರಾದ ಡಾ. ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕವನ್ನೊಳಗೊಂಡಿದೆ.

    Click here

    Click here

    Click here

    Call us

    Call us

    ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅಧ್ಯಕ್ಷತೆ ವಹಿಸಿದ್ದರು. ಆಡಳಿತ ಮಂಡಳಿ ಸದಸ್ಯ ಯು.ಎಸ್. ಶೆಣೈ, ಪ್ರಶಸ್ತಿ ಸಮಿತಿಯ ವಸಂತ ಬನ್ನಾಡಿ ಉಪಸ್ಥಿತರಿದ್ದರು.

    ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಂ. ಗೊಂಡ ಸ್ವಾಗತಿಸಿದರು. ಪ್ರಶಸ್ತಿ ಸಮಿತಿಯ ಜಾನಕಿ ಬ್ರಹ್ಮಾವರ ವಂದಿಸಿದರು. ಉಪನ್ಯಾಸಕಿ ಅರ್ಚನಾ ಕಾರ್ಯಕ್ರಮ ನಿರೂಪಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌

    17/12/2025

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.