Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಹು ಕ್ಷೇತ್ರದಲ್ಲಿ ಕೋಡಿ ಗ್ರಾಮ ಪಂಚಾಯತ್ ಮುಂಚೂಣಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ
    ಊರ್ಮನೆ ಸಮಾಚಾರ

    ಬಹು ಕ್ಷೇತ್ರದಲ್ಲಿ ಕೋಡಿ ಗ್ರಾಮ ಪಂಚಾಯತ್ ಮುಂಚೂಣಿ: ಶಾಸಕ ಕಿರಣ್ ಕುಮಾರ್ ಕೊಡ್ಗಿ

    Updated:29/08/2025No Comments
    Facebook Twitter Pinterest LinkedIn WhatsApp Reddit Tumblr Email
    ???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಒಂದು ಗ್ರಾಮಪಂಚಾಯತ್ ಬಹುಕ್ಷೇತ್ರದಲ್ಲಿ ಮುಂಚೂಣಿಗೆ ಬರುವುದು ಸುಲಭದ ಮಾತಲ್ಲ ಈ ದಿಸೆಯಲ್ಲಿ ಕೋಡಿ ಗ್ರಾಮಪಂಚಾಯತ್ ವಿವಿಧ ಯೋಜನೆಗಳ ಅನುಷ್ಠಾನಗಳ ಮೂಲಕ ದಿಟ್ಟ ಹೆಜ್ಜೆ ಇರಿಸಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

    Click Here

    Call us

    Click Here

    ಅವರು ಕೋಡಿ ಗ್ರಾಮ ಪಂಚಾಯತ್‌ನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಉಡುಪಿ ಕೋಡಿ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಪಂಚಾಯತ್ ಇವರ ಆಶ್ರಯದಲ್ಲಿ  ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಜಲಜೀವನ ಮಿಷನ್ ಯೋಜನೆಯಡಿ ಕೋಡಿ ಗ್ರಾಮದಲ್ಲಿ 24*7 ನೀರು ಸರಬರಾಜು ಗ್ರಾಮ ಘೋಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಕೋಡಿ ಗ್ರಾಮಪಂಚಾಯತ್ ಪ್ರಧಾನಮಂತ್ರಿಗಳ ಪ್ರತಿ ಕಾರ್ಯವನ್ನು ಯಶಸ್ಸಿನತ್ತ ಕೊಂಡ್ಯೋಯ್ದು ದಿನದ 24ಗಂಟೆ ನೀರುಣಿಸು ಯೋಜನೆಯನ್ನು ಅನುಷ್ಠಾನ ಅಸಮಾನ್ಯ ಕಾರ್ಯವನ್ನು ಸಾಧಿಸಿದ್ದಾರೆ.ಅದರಲ್ಲೂ ಪಂಚವರ್ಣ ಸಂಘಟನೆ, ಗೀತಾನಂದ ಫೌಂಡೇಶನ್ ಸಹಕಾರ ಪಡೆದು ಇಡೀ ಗ್ರಾಮ ಹಸಿರಿಕರಣಗೊಳಿಸುವ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪ್ರಶಂಸಿದರು.

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತಾನಾಡಿ, ಗ್ರಾಮಪಂಚಾಯತ್‌ನಲ್ಲಿ ಕ್ರೀಯಾಶೀಲ ಅಭಿವೃದ್ಧಿ ಅಧಿಕಾರಿಯಾಗಿ ರವೀಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದು ಈ ಅನುಷ್ಠಾನಕ್ಕೆ ರೂವಾರಿಯಾಗಿಸಲು ಸಾಧ್ಯವಾಗಿದೆ ಅಲ್ಲದೆ ತ್ಯಾಜ್ಯ ಮತ್ತು ವ್ಯಸನ ಮುಕ್ತವಾಗುವುದರ ಜತೆಗೆ ಒಂದು ಕಾಲದಲ್ಲಿ ನೀರಿಗಾಗಿ ಧರಣಿಗೈದ ಪಂಚಾಯತ್ ಇಂದು ಗ್ರಾಮಪಂಚಾಯತ್ ವ್ಯಾಪ್ತಿಯ ಪ್ರತಿ ಮನೆಗೆ ನೀರುಣಿಸುವ ಕಾರ್ಯ ಗ್ರಾಮಪಂಚಾಯತ್ ಹಿರಿಮೆಗೆ ಕಾರಣವಾಗಿದೆ. ಇದು ಸುಲಭದ ಕಾರ್ಯವಲ್ಲ ಇದರ ಹಿಂದೆ ಒಗ್ಗಟ್ಟಿನ ಶಕ್ತಿ ಇದೆ ಎಂದು ಬಣ್ಣಿಸಿದರು.

    ಇದೇ ವೇಳೆ ರತ್ನಾಕರ ಮನೆಯಲ್ಲಿ ಟ್ಯಾಪ್ ತಿರುಗಿಸುವ ಮೂಲಕ ಜಲಜೀವನ್ ಅನುಷ್ಠಾನಕ್ಕೆ ಚಾಲನೆ ನೀಡಿದರು.

    Click here

    Click here

    Click here

    Call us

    Call us

    ರಾಜ್ಯ ಸರಕಾರದ ನಲ್‌ಜಲ್ ಮಿತ್ರ ಸಿಂಪ್ಯೋಟರ್  ಹಸ್ತಾಂತರಿಸಿ ಚಾಲನೆ ನೀಡಲಾಯಿತು. ನೀರು ಟ್ಯಾಂಕಿ ನಿರ್ಮಿಸಲು ಸ್ಥಳಾವಕಾಶ ನೀಡಿದವರನ್ನು ಗುರುತಿಸಿ ಗೌರವಿಸಲಾಯಿತು.

    ಹಸಿರು ಜೀವ ಯೋಜನೆಯ ಸಮಾರೋಪದ ಹಿನ್ನಲ್ಲೆಯಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಗಿಡ ನೆಟ್ಟು ಅಂಗನವಾಡಿ ಹಾಗೂ ಪಂಚಾಯತ್ ಪ್ರತಿನಿಧಿಗಳನ್ನು ಹುರಿದುಂಬಿಸಿದರು.

    ಸಭಾ ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಉದ್ಘಾಟಿಸಿದರು.

    ಈ ಸಂದರ್ಭದಲ್ಲಿ ಪಂಚಾಯತ್ ವಾಟರ್‌ಮೆನ್  ರವಿಚಂದ್ರ,ಕರುಣಾಕರ ಮತ್ತು ಹಸಿರುಜೀವ ಕಾರ್ಯಕ್ರಮದ ಅನುಷ್ಠಾನಕ್ಕೆ ಸಹಕರಿಸಿದ ಗೀತಾನಂದ ಫೌಂಡೇಶನ್ ಸಮಾಜಕಾರ್ಯ ವಿಭಾಗದ ರವಿಕಿರಣ್ ಕೋಟ,ಪಂಚವರ್ಣದ ಪರವಾಗಿ ರವೀಂದ್ರ ಕೋಟ ಇವರನ್ನು ಸನ್ಮಾನಿಸಲಾಯಿತು.

    ಗ್ರಾಮಪಂಚಾಯತ್ ಮಟ್ಟದಲ್ಲಿ ದಿನವಿಡೀ ಕುಡಿಯುವ ನೀರಿನ ಅವಕಾಶ ಕಲ್ಪಿಸಿದ ಪಂಚಾಯತ್‌ಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು

    ಸಭೆಯ ಅಧ್ಯಕ್ಷತೆಯನ್ನು ಕೋಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ ವಹಿಸಿದ್ದರು.

    ಮುಖ್ಯ ಅಭ್ಯಾಗತರಾಗಿ ಜಿ.ಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳಿ, ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ, ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯವಹಕ ಅಭ್ಯಂತರ ವೆಂಕಟೇಶಮೂರ್ತಿ, ಬ್ರಹ್ಮಾವರ ತಾ.ಪಂ ಇಒ ಎಚ್.ವಿ ಇಬ್ರಾಹಿಂಪುರ, ಪಂಚಾಯತ್ ಉಪಾಧ್ಯಕ್ಷ ಪ್ರಸಾದ್ ತಿಂಗಳಾಯ, ನೆಹರು ಕೇಂದ್ರದ ಅಧಿಕಾರಿ ಉಲ್ಲಾಸ್, ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್, ಪಂಚಾಯತ್ ಪ್ರತಿನಿಧಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಮತ್ತ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಪಂಚಾಯತ್ ಸದಸ್ಯ ಪ್ರಭಾಕರ ಮೆಂಡನ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ನಿರೂಪಿಸಿ, ಪ್ರಾಸ್ತಾವನೆ ಸಲ್ಲಿಸಿದರು. ಪಂಚಾಯತ್ ಸದಸ್ಯ ಕೃಷ್ಣ ಪೂಜಾರಿ ವಂದಿಸಿದರು.

    Like this:

    Like Loading...

    Related

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d