Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಸಂವಾದ
    ಊರ್ಮನೆ ಸಮಾಚಾರ

    ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಸಂವಾದ

    Updated:01/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವ್ಯಕ್ತಿತ್ವದಲ್ಲಿ ತೃಪ್ತಿ ಎನ್ನುವ ಮೌಲ್ಯವನ್ನು ಅಳವಡಿಸಿಕೊಂಡರೆ ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ನುಡಿದರು.

    Click Here

    Call us

    Click Here

    ಅವರು ಸೋಮವಾರ ಕುಂದಾಪುರದ ಯಡಾಡಿ ಮತ್ಯಾಡಿಯಲ್ಲಿರುವ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಕಾನೂನು ಬರುವ ಮೊದಲೇ ಸಮಾಜದಲ್ಲಿ ಕೆಲವು ಮೌಲ್ಯಗಳಿದ್ದವು. ಜನರು ಅದಕ್ಕೆ ಗೌರವ ನೀಡುತ್ತಿದ್ದರು. ಆದರೆ ಈಗ ಆ ಸಮಾಜ ಬದಲಾಗಿದೆ. ಶ್ರೀಮಂತರಿಗೆ ಮಣೆ ಹಾಕುವ ಪ್ರವೃತ್ತಿ ತಾಂಡವವಾಡುತ್ತಿದೆ. ಪ್ರಾಮಾಣಿಕತೆಗೆ, ಪ್ರಾಮಾಣಿಕರಿಗೆ ಬೆಲೆ ಇಲ್ಲದ ಹಾಗೇ  ಆಗಿದೆ. ದುರಾಸೆ ಎಂಬ ರೋಗ ಇದಕ್ಕೆ ಕಾರಣವಾಗಿದೆ ಎಂದು ವಿವರಿಸಿದರು.

    ಹಿಂದೆಲ್ಲಾ ತಪ್ಪು ಮಾಡಿದವರಿಗೆ ಅವರನ್ನು ದೂರ ಇಡುವ ಮೂಲಕ ಶಿಕ್ಷೆ ನೀಡಲಾಗುತ್ತಿತ್ತು. ಆದರೆ ಈಗ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವನಿಗೆ ಹಾರ ತುರಾಯಿ ಹಾಕಿ ಸ್ವಾಗತ ಕೋರುತ್ತೇವೆ. ಪ್ರಾಮಾಣಿಕತೆ, ಮೌಲ್ಯಗಳು ಹಣದ ಮುಂದೆ ಗೌಣ್ಯವಾಗಿವೆ ಎಂದು ವಿಷಾದ ವ್ಯಕ್ತಪಡಿಸಿದರು.

    ಕ್ರಾಂತಿ ಮೂಲಕ ಬದಲಾವಣೆ ಆದರೆ ಈ ದೇಶ ಒಡೆದು ಚೂರಾಗುತ್ತದೆ; ಶಾಂತಿ ಸೌಹಾರ್ದ ಮರೆಯಾಗುತ್ತದೆ; ನಾವು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು; ಕಷ್ಟಕ್ಕೆ ಸ್ಪಂದಿಸುವ ಮನೋಭಾವಗಳನ್ನು ಹೊಂದಿರಬೇಕು;  ಅಕ್ರಮವಾಗಿ ಗಳಿಸಿದ ಹಣದಿಂದ ಎಂದಿಗೂ ನೆಮ್ಮದಿ  ಸಾಧ್ಯವಿಲ್ಲ; ತೃಪ್ತಿ ಎಂಬ ಮೌಲ್ಯ ಅಳವಡಿಸಿಕೊಂಡರೆ ನೆಮ್ಮದಿಯ ನಿದ್ರೆ ಮಾಡಬಹುದು ಎಂದು ನುಡಿದರು.

    Click here

    Click here

    Click here

    Call us

    Call us

    ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, “ಭ್ರಷ್ಟಾಚಾರ ಮುಕ್ತ ಸಮಾಜ ಕಟ್ಟುವುದಕ್ಕೆ ನಮ್ಮ ಯುವಕರನ್ನು ಸೃಷ್ಟಿ ಮಾಡಬೇಕು ಎಂಬ ಪಣ ತೊಟ್ಟು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಹಿರಿಯ ವಯಸ್ಸಿನಲ್ಲಿಯೂ ಅವರ ಉತ್ಸಾಹ, ದೇಶಪ್ರೇಮ, ಮುಂದಿನ ಜನಾಂಗದ ಬಗ್ಗೆ ಕಾಳಜಿ ಅನುಕರಣೀಯವಾದುದು” ಎಂದರು.

    “ಸಂತೋಷ್ ಹೆಗ್ಡೆ ಅವರು ದೇಶದಲ್ಲಿನ ಭ್ರಷ್ಟಾಚಾರ, ಅನ್ಯಾಯಗಳ ವಿರುದ್ಧ ದನಿ ಎತ್ತಿದವರು. ನಿವೃತ್ತಿ ಜೀವನದಲ್ಲಿಯೂ ಕೈ ಕಟ್ಟಿ ಕುಳಿತವರಲ್ಲ. ಈ ದೇಶದ ಭವಿಷ್ಯ ಯುವ ಜನಾಂಗದ ಕೈಯಲ್ಲಿದೆ ಎಂದು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಂತೋಷ ಹೆಗ್ಡೆಯವರ ಮೌಲ್ಯಗಳನ್ನು, ಅವರು ಪಾಲಿಸಿದ ತತ್ವಗಳನ್ನು ಅನುಸರಿಸಿದರೆ ಸದೃಢ ದೇಶ ಕಟ್ಟಬಹುದು. ವಿದ್ಯಾರ್ಥಿಗಳು ತಪ್ಪುಗಳನ್ನು ತಿದ್ದಿಕೊಳ್ಳುವಂತಹ ಗುಣ ಬೆಳೆಸಿಕೊಳ್ಳಬೇಕು. ಎಸಗಿದ ತಪ್ಪುಗಳಿಗೆ ಪಶ್ಚಾತ್ತಾಪ ಪಟ್ಟರೆ ಮಾತ್ರ ಸುಂದರ ಬದುಕು ಕಟ್ಟಿಕೊಳ್ಳಬಹುದು ಎಂದು ಸಂಸ್ಥೆಯ ಕಾರ್ಯದರ್ಶಿಯಾದ ಪ್ರತಾಪ್ ಚಂದ್ರ ಶೆಟ್ಟಿ ಕಿವಿಮಾತು ನುಡಿದರು.

    ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ರಂಜನ್ ಬಿ. ಶೆಟ್ಟಿ, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಸಂಸ್ಥೆಯ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ನಿರೂಪಿಸಿದರು.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d