ಕ್ರಿಕೆಟ್: ನಾಯಕವಾಡಿ ಫ್ರೆಂಡ್ಸ್ ತಂಡಕ್ಕೆ ಪ್ರಶಸ್ತಿ

Call us

Call us

Call us

ಗಂಗೊಳ್ಳಿ: ವಿಶ್ವಸಾಗರ ಕ್ರಿಕೆಟರ‍್ಸ್ ಮತ್ತು ಸಹರಾ ಕ್ರಿಕೆಟರ‍್ಸ್ ಇವರ ಜಂಟಿ ಆಶ್ರಯದಲ್ಲಿ ಗುಜ್ಜಾಡಿ ಶಾಲಾ ವಠಾರದಲ್ಲಿ ಜರಗಿದ ಜಿಲ್ಲಾ ಮಟ್ಟದ 30ಗಜಗಳ ಸೀಮಿತ ಓವರ್‌ಗಳ ಕ್ರಿಕೆಟ್ ಪಂದ್ಯಾಟದಲ್ಲಿ ನಾಯಕವಾಡಿ ಫ್ರೆಂಡ್ಸ್ ತಂಡವು ನ್ಯೂಸ್ಟಾರ್ ಕುಂದಾಪುರ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Call us

Click Here

ನಾಯಕವಾಡಿ ಫ್ರೆಂಡ್ಸ್ ತಂಡದ ಪ್ರಸಿದ್ಧ ಉತ್ತಮ ದಾಂಡಿಗ ಮತ್ತು ನ್ಯೂಸ್ಟಾರ್ ಕುಂದಾಪುರ ತಂಡದ ಆದಿತ್ಯ ಖಾರ್ವಿ ಉತ್ತಮ ಎಸೆತಗಾರ ಪ್ರಶಸ್ತಿಯನ್ನು ಪಡೆದುಕೊಂಡರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಮನಾಥ ಚಿತ್ತಾಲ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಗಂಗೊಳ್ಳಿ ಹಿಂದು ಜಾಗರಣ ವೇದಿಕೆಯ ಸಹಸಂಚಾಲಕ ಶಂಕರ ದೇವಾಡಿಗ, ಗಂಗೊಳ್ಳಿಯ ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ ನಾಗರಾಜ ಖಾರ್ವಿ, ಸಹರಾ ಕ್ರಿಕೆಟರ‍್ಸ್‌ನ ಅಧ್ಯಕ್ಷ ಚೇತನ್ ಆರ್ಕಾಟಿ ಉಪಸ್ಥಿತರಿದ್ದರು. ರೋಹಿತ್ ಆರ್ಕಾಟಿ ಸ್ವಾಗತಿಸಿದರು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು. ವಿಶ್ವಸಾಗರ ಕ್ರಿಕೆಟರ‍್ಸ್‌ನ ಅಧ್ಯಕ್ಷ ಅಕ್ಷಯ ಖಾರ್ವಿ ವಂದಿಸಿದರು.

Leave a Reply