Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಸಹಕಾರ ಸಂಘದ 9ನೇ ವಾರ್ಷಿಕ ಮಹಾಸಭೆ
    alvas nudisiri

    ಆಳ್ವಾಸ್ ಸಹಕಾರ ಸಂಘದ 9ನೇ ವಾರ್ಷಿಕ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಸಹಕಾರ ಸಂಘವು 2024-25 ನೇ ಸಾಲಿನಲ್ಲಿ 3.55 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ 17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ.

    Click Here

    Call us

    Click Here

    ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಸಂಘದ 2024-25 ನೇ ಸಾಲಿನ 9ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು.

    ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 170 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ  ಈ ವರ್ಷ 19 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ 99.62 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊಂಡಿದ್ದು, ಪ್ರಸ್ತುತ 5543 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು.

    ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ನಮ್ಮ ಆಳ್ವಾಸ್ ಸಹಕಾರಿ ಸಂಘ ಮುಂದಿನ ವರ್ಷ ತನ್ನ ದಶಮಾನೋತ್ಸವದ ಹಿರಿಮೆಯ ಮೈಲಿಗಲ್ಲನ್ನು ತಲುಪಲಿದೆ. ಕಳೆದ ಒಂಬತ್ತು ವರ್ಷಗಳಿಂದ ಸಂಘವು ಸಮಾಜಮುಖಿ ಕಾರ್ಯ ಹಾಗೂ ಪಾರದರ್ಶಕತೆಯಿಂದ ಸದಸ್ಯರ ವಿಶ್ವಾಸವನ್ನು ಗಳಿಸಿದೆ. ಸಹಕಾರಿ ಚಳವಳಿಯನ್ನು ಬಲಪಡಿಸುವಲ್ಲಿ, ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವಲ್ಲಿ ಮತ್ತು ಸದಸ್ಯರ ಆರ್ಥಿಕ ಶಕ್ತೀಕರಣದಲ್ಲಿ ಸಂಘವು ಪ್ರಮುಖ ಪಾತ್ರ ವಹಿಸಿದೆ.

    ದಶಮಾನೋತ್ಸವದ ಸಂಭ್ರಮವನ್ನು ಹೊಸ ಯೋಜನೆಗಳು ಮತ್ತು ಸದಸ್ಯರ ಹೆಚ್ಚಿನ ಪಾಲ್ಗೊಳ್ಳಿಕೆಯಿಂದ ಆಚರಿಸಲು ನಿರ್ಧರಿಸಲಾಗಿದೆ.  ಆಳ್ವಾಸ್ ಸಹಕಾರಿ ಸಂಘವು ತನ್ನ ಸದಸ್ಯರಿಗೆ ಇನ್ನಷ್ಟು ಸುಲಭವಾದ, ತ್ವರಿತ ಹಾಗೂ ಪಾರದರ್ಶಕ ಸೇವೆಯನ್ನು ಒದಗಿಸಲು ಹೊಸ ಮೊಬೈಲ್ ಆ್ಯಪ್‌ನ್ನು ಬಿಡುಗಡೆ ಮಾಡುವ ಯೋಜನೆ ಹೊಂದಿದೆ ಎಂದರು.  ಆಳ್ವಾಸ್‌ನ  ಪ್ರತಿ ಕಾರ್ಯದಲ್ಲೂ ಸಮಾಜಮುಖಿ ಚಿಂತನೆ ಒಳಗೊಂಡಿದೆ.  

    Click here

    Click here

    Click here

    Call us

    Call us

    ಸದ್ಯ ಈ ಸಹಕಾರಿ ಸಂಘದ ಶಾಖೆಯನ್ನು ಬೇರೆಲ್ಲೂ ತೆಗೆಯುವ ಯೋಚನೆ ಹೊಂದಿಲ್ಲ, ಸರಕಾರ ನಿಗದಿಪಡಿಸಿರುವ ನಿಯಮವನ್ನು ಪಾಲನೆ ಮಾಡಿ, ವ್ಯವಹಾರವನ್ನು ವೃದ್ಧಿಸುವ ಗುರಿಯನ್ನು ಹೊಂದಿದ್ದೆವೆ.  ಮುಂದಿನ ವರ್ಷಕ್ಕೆ 100 ಕೋಟಿ ಠೇವಣಿ ಸಂಗ್ರಹಿಸಿ, ಬ್ಯಾಂಕಿನ ವ್ಯವಹಾರವನ್ನು 195 ಕೋಟಿಗೆ ಹೆಚ್ಚಿಸುವ  ಗುರಿ ಹೊಂದಿದೆ ಎಂದರು.

    ಸಂಘದ ವ್ಯವಹಾರದಲ್ಲಿ ಯಾವುದೇ ನ್ಯೂನತೆಗಳಿಲ್ಲದೆ ಈ ವರ್ಷವೂ ಸೇರಿ ಸತತ 8 ವರ್ಷಗಳಿಂದ ಆಡಿಟ್ ವರ್ಗೀಕರಣದಲ್ಲಿ ‘ಎ’ ಶ್ರೇಣಿಯ ಸಂಘ ಎಂಬ ಗೌರವಕ್ಕೆ ಪಾತ್ರವಾಗಿದ್ದೇವೆ.

    2024-25ನೇ ಸಾಲಿನ  ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ  ರಾಜ್ಯದ ಟಾಪರ್‌ಗಳಾದ ಆಳ್ವಾಸ್ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ, ಪ್ರಸ್ತುತ ಪ.ಪೂ ಕಾಲೇಜಿನಲ್ಲಿ ಓದುತ್ತಿರುವ  ಪಾವನಾ ಶರಣಾ ಬಸಪ್ಪ ಮೇಗೂರ್,  ಹರೀಶ ಬಡಿಗೇರ್,  ರಿಯಾ ವಿಧ್ಯಾದರ್ ಕಾಮ್ಟೆ, ವಿನಯ, ಮಾನ್ಯ, ಐತ್ಯಾ, ಚಿನ್ಮಯ್ ಹಾಗೂ ದ್ವಿತೀಯ ಪದವಿಪೂರ್ವ ವಾಣಿಜ್ಯ  ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವೈಷ್ಣವಿ ಪ್ರಸಾದ ಭಟ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ನಗದಿನೊಂದಿಗೆ ಅಭಿನಂದಿಸಲಾಯಿತು.

    ಸಹಕಾರ ಶಿಕ್ಷಣ ನಿಧಿಯ 3,19,821 ಲಕ್ಷದ ಚೆಕ್ ಅನ್ನು  ಕರ್ನಾಟಕ ರಾಜ್ಯ ಸಹಕಾರಿ ಮಹಾಮಂಡಳಿಗೆ  ಮೂಡುಬಿದಿರೆಯ ಸಹಕಾರಿ ತರಬೇತಿ ಸಂಸ್ಥೆಯ  ಉಪನ್ಯಾಸಕಿ ಬಿಂದು ಬಿ ನಾಯರ್ ಮೂಲಕ ಹಸ್ತಾಂತರಿಸಲಾಯಿತು.

    ಸಂಘದ ಉಪಾಧ್ಯಕ್ಷ ಎ ಮೋಹನ್ ಪಡಿವಾಳ್, ನಿರ್ದೇಶಕರುಗಳಾದ ಶ್ರೀಪತಿ ಭಟ್, ಜಯಶ್ರೀ ಅಮರನಾಥ್ ಶೆಟ್ಟಿ,  ನಾರಾಯಣ ಪಿಎಂ, ವಿವೇಕ್ ಆಳ್ವ, ರಾಮಚಂದ್ರ ಮಿಜಾರು, ಪ್ರಕಾಶಿನಿ ಹೆಗ್ಡೆ, ಅಶ್ವಿನ್ ಜೊಸ್ಸಿ ಪಿರೇರಾ, ಮೀನಾಕ್ಷಿ ಇದ್ದರು.

    ನಿರ್ದೇಶಕ ಜಯರಾಮ್ ಕೋಟ್ಯಾನ್ ಸ್ವಾಗತಿಸಿ,  ಆಳ್ವಾಸ್ ಪ.ಪೂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025

    ಧನ್ವಿ ಮರವಂತೆ ಅವರಿಗೆ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.