ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Call us

Call us

Call us

ಬೈಂದೂರು: ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೀಜಿನ 2015-16ನೇ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗೋಳಿಹೊಳೆ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆಯಿತು.

Call us

Click Here

ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ ಶಿಬಿರ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಸಹಕಾರಿಯಾಗಿದೆ. ಎಲ್ಲಾ ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಶುಭಹಾರೈಸಿದರು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ರಾಜ್ಯ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಗ್ರಾಪಂ ಸದಸ್ಯ ಸಾಯಿಕುಮಾರ್, ತಾಪಂ ಮಾಜಿ ಸದಸ್ಯರಾದ ರಾಮ್‌ಕಿಶನ್ ಶೆಟ್ಟಿ, ರಾಜೀವ ಶೆಟ್ಟಿ, ಬೈಂದೂರು ಗ್ರಾಪಂ ಉಪಾಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು, ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದ ಮೊಕ್ತೇಸರ ಶಿವರಾಜ್ ಪೂಜಾರಿ, ಮಂಜು ಪೂಜಾರಿ ಸಸಿಹಿತ್ಲು, ನಿವೃತ್ತ ಮುಖ್ಯಶಿಕ್ಷಕ ಜನ್ಮನೆ ಗೋಪಾಲ ಶೆಟ್ಟಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಸನತ್ ಅಡಿಗ, ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಸೀಮಾ ಪಿ. ಶೆಟ್ಟಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಕ್ಷಿತ ರಾವ್ ಗುಜ್ಜಾಡಿ ಸ್ವಾಗತಿಸಿ, ಸಹಯೋಜನಾಧಿಕಾರಿ ಪ್ರೀತಿ ಹೆಗ್ಡೆ ವಂದಿಸಿದರು. ಶಿಬಿರಾಧಿಕಾರಿ ಚೇತನ್‌ಕುಮಾರ್ ಶೆಟ್ಟಿ ಕೊವಾಡಿ ನಿರೂಪಿಸಿದರು.

Leave a Reply