Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಹೋಬಳಿ ಹಾಗೂ ಬೈಂದೂರು ಹೋಬಳಿ ಅರ್ಹ 94ಸಿ ಕಡತಗಳು ಪೂರ್ಣ ವಿಲೇವಾರಿ
    ಊರ್ಮನೆ ಸಮಾಚಾರ

    ವಂಡ್ಸೆ ಹೋಬಳಿ ಹಾಗೂ ಬೈಂದೂರು ಹೋಬಳಿ ಅರ್ಹ 94ಸಿ ಕಡತಗಳು ಪೂರ್ಣ ವಿಲೇವಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಂಡ್ಸೆ ಹೋಬಳಿ ಹಾಗೂ ಬೈಂದೂರು ಹೋಬಳಿಯ ಅರ್ಹ ಎಲ್ಲಾ 94ಸಿ ಅರ್ಜಿಗಳನ್ನು  ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದೊಂದಿಗೆ ವಿಲೇವಾರಿ ಮಾಡಲಾಗಿದೆ.

    Click Here

    Call us

    Click Here

    ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಂಡ್ಸೆ ಹೋಬಳಿಯ 94ಸಿ ಕಡತಗಳ ಬಗ್ಗೆ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮಾತನಾಡಿ, ಕಳೆದ ಎರಡು ವರ್ಷ ಗಳಲ್ಲಿ ಸುಮಾರು 800 ಹಕ್ಕು ಪತ್ರಗಳನ್ನು ವಿತರಿಸಲಾಗಿದೆ ಎಂದರು.

    ಭಾಗಶಃ  ಡೀಮ್ಡ್ ವ್ಯಾಪ್ತಿಯಲ್ಲಿ ವಂಡ್ಸೆ ಹೋಬಳಿಯ 460 & ಬೈಂದೂರು ಹೋಬಳಿಯ 117 ಅರ್ಜಿಗಳು ಹಾಗೂ ಕುಮ್ಕಿ ವ್ಯಾಪ್ತಿಯಲ್ಲಿ ವಂಡ್ಸೆ ಹೋಬಳಿಯಲ್ಲಿ 936 ಅರ್ಜಿಗಳು ಹಾಗೂ ಬೈಂದೂರು ಹೋಬಳಿಯಲ್ಲಿ 248 ಅರ್ಜಿಗಳು ಇರುವುದಾಗಿದೆ. ಭಾಗಶಃ ಡೀಮ್ಡ್ ಫಾರೆಸ್ಟ್ ಅರ್ಜಿಗಳನ್ನು ಅರಣ್ಯ ಇಲಾಖೆಯ ಜಂಟಿ ಸರ್ವೇ ಮೂಲಕ ವಿಲೇವಾರಿ ಮಾಡುವ ಪ್ರಕ್ರಿಯೆ ಯನ್ನು ತ್ವರಿತ ಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    ಉಳಿದಂತೆ ಕುಮ್ಕಿ ವ್ಯಾಪ್ತಿಯಲ್ಲಿನ 94 ಸಿ ಅರ್ಜಿಗಳ ವಿಲೇವಾರಿ ಗೆ ಕಾನೂನು ತೊಡಕು ಇರುವುದರಿಂದ  ತಕ್ಷಣದ ಕ್ರಮ ಸಾಧ್ಯವಿಲ್ಲ. ಆದರೂ ಕುಮ್ಕಿ ಭೂಮಿಯಲ್ಲಿ ಕನಿಷ್ಠ ಜಾಗದಲ್ಲಿ ಹಲವಾರು ವರ್ಷಗಳಿಂದ ಮನೆ ಕಟ್ಟಿ ಕೊಂಡ ಬಡವರಿಗೆ ವಿಶೇಷ ನೆಲೆಯಲ್ಲಿ  ಮನೆ ಅಡಿ ಜಾಗಕ್ಕೆ ಸಂಬಂಧಿಸಿದಂತೆ ಹಕ್ಕು ಪತ್ರ ಒದಗಿಸಿ ಕೊಡಲು ಕಂದಾಯ ಸಚಿವರಿಗೆ ಈಗಾಗಲೇ ಅಧಿವೇಶನ ದಲ್ಲಿ ಮನವಿ ಮಾಡಲಾಗಿದ್ದು, ಮುಂದೆಯೂ ಸಚಿವರಿಗೆ ಒತ್ತಡ ಹಾಕಿ ಅಂತಹ ಅರ್ಜಿಗಳನ್ನು ಪುರಸ್ಕರಿಸಲು ಹಾಗೂ ಅರ್ಹರಿಗೆ ಹಕ್ಕು ಪತ್ರ ನೀಡಲು ಪ್ರಯತ್ನಿಸಲಾಗುವುದು  ಹಾಗೂ ಮುಂದಿನ ದಿನಗಳಲ್ಲಿ ಹೋರಾಟದ ಮೂಲಕ ವಾದರೂ ಬಡವರಿಗೆ ಹಕ್ಕು ಪತ್ರ ಒದಗಿಸಲು ಪ್ರಯತ್ನಿಸಲಾಗುವುದು ಎಂದರು.

    ಕುಂದಾಪುರ ತಹಸೀಲ್ದಾರ್  ಪ್ರದೀಪ್ ಕುರುಡೇಕರ್, ಉಪ ತಹಶೀಲ್ದಾರರಾದ ಪ್ರಕಾಶ್, ಕಂದಾಯ ನಿರೀಕ್ಷರಾದ ರಾಘವೇಂದ್ರ ಹಾಗೂ ವಂಡ್ಸೆ ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    five × one =

    Call us

    Click Here

    Call us

    Call us

    Call us
    Highest Viewed Recently
    • 135 ದಿನ ಪೂರೈಸಿದ ಬೈಂದೂರು ರೈತ ಸಂಘದ ಧರಣಿ – ಉಡುಪಿ ಜಿಲ್ಲಾಧಿಕಾರಿ ಭೇಟಿ
    • ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸುಸಜ್ಜಿತ ಐಡಿಯಾ ಲ್ಯಾಬ್‌ ಲೋಕಾರ್ಪಣೆ
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.