Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಕಾರದ ಯೋಜನೆಗಳ ಸದ್ಬಳಕೆ ಮಾಡಿ: ಶೈಲೇಶ್ ಕುಮಾರ್
    ಉಡುಪಿ ಜಿಲ್ಲೆ

    ಸರಕಾರದ ಯೋಜನೆಗಳ ಸದ್ಬಳಕೆ ಮಾಡಿ: ಶೈಲೇಶ್ ಕುಮಾರ್

    Updated:17/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬ್ರಹ್ಮಾವರ:
    ತಾಲೂಕಿನ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಇವರ ಆಶ್ರಯದಲ್ಲಿ ಮಹಿಳಾ ಟೈಲರಿಂಗ್ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಹಾಗೂ ಉದ್ಯಮ ಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ ದೆಹಲಿ ಗ್ರಾಮೀಣಾಭಿವೃದ್ಧಿ ಹಣಕಾಸು ಸಚಿವಾಲಯ ನಿರ್ದೇಶಕರಾದ ಶೈಲೇಶ್ ಕುಮಾರ್ ಅವರು  ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ತರಬೇತಿಯು ನಮ್ಮನ್ನು ಸದೃಢರನ್ನಾಗಿಸಲು ಸಹಕಾರಿಯಾಗಿದೆ. ಮಹಿಳೆಯರು ಜೀವನೋಪಾಯಕ್ಕಾಗಿ ಸ್ವ ಉದ್ಯೋಗವನ್ನು ಕೈಗೊಂಡು ಸ್ವಾವಲಂಬನೆಯ ಜೀವನವನ್ನು ನಡೆಸಲು ಇಂತಹ ತರಬೇತಿಗಳನ್ನು ಸದ್ಬಳಕೆ ಮಾಡಿಕೊಂಡಲ್ಲಿ ಸಾಧ್ಯ.

    ಮನೆಯ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತಿರೋ ಅದೇ ರೀತಿ ಸ್ವಂತ ಉದ್ಯಮವನ್ನು ಕೈಗೊಂಡು ಸ್ವಾವಲಂಬನೆಯ ಬದುಕು ಸಾಗಿಸುವುದು ಮಹಿಳೆಯರಿಗೆ ಕಷ್ಟವೇನಲ್ಲ. ನಾವು ಸ್ವತಂತ್ರರಾದಷ್ಟು, ಮಕ್ಕಳಿಗೂ ಶಿಸ್ತುಬದ್ಧ ಜೀವನ ನಡೆಸುವಂತೆ ತಿಳಿಸಲು ಸಾಧ್ಯವಾಗುತ್ತದೆ. ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ, ಸರಕಾರದಿಂದ ಮತ್ತು ಬ್ಯಾಂಕುಗಳಿಂದ ಸಿಗುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಒಬ್ಬ ಯಶಸ್ವಿ ಉದ್ಯಮಿಗಳಾಗಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನು ವಿತರಿಸಿ, ಶುಭ ಹಾರೈಸಿದರು.

    ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ. ಎಂ. ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಸ್ವಂತ ಉದ್ಯಮವನ್ನು ಕೈಗೊಂಡರೆ ಸಮಾಜದಲ್ಲಿ ಗೌರವ, ಪ್ರಾಶಸ್ತ್ಯ ದೊರೆಯುತ್ತದೆ. ಮನಸ್ಸಿಗೆ ನೆಮ್ಮದಿ, ಶಿಸ್ತು ಬದ್ಧ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ. ಸರಕಾರದ ಉತ್ತಮ ಯೋಜನೆಗಳು ಮಹಿಳೆಯರಿಗೆ ಪೂರಕವಾಗಿ ಕೆಲಸವನ್ನು ಮಾಡುತ್ತಿದೆ.  ಅದರ ಸದ್ಭಳಕೆ ಮಾಡಿದಲ್ಲಿ ಮಾತ್ರವೇ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಲಭಿಸಲು ಸಾಧ್ಯ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    ಈ ಸಂದರ್ಭದಲ್ಲಿ  ಟೈಲರಿಂಗ್ ಅತಿಥಿ ಉಪನ್ಯಾಸಕಿ ವೀಣಾ, ಬ್ಯೂಟಿ ಪಾರ್ಲರ್ ಅತಿಥಿ ಉಪನ್ಯಾಸಕಿ ರಾಜಲಕ್ಷ್ಮಿ, ಸದಸ್ಯರು ಉಪಸ್ಥಿತರಿದ್ದರು.  ಉಪನ್ಯಾಸಕರಾದ ಸಂತೋಷ್ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ಚೈತ್ರ . ಕೆ ಸ್ವಾಗತಿಸಿ, ಕಛೇರಿ ಸಹಾಯಕರಾದ ಶಾಂತಪ್ಪ ವಂದಿಸಿದರು.

    Click here

    Click here

    Click here

    Click Here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026
    Leave A Reply Cancel Reply

    18 + six =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.