ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ನಿರಂತರ 111ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಸತೀಶ್ ನಾಯಕ್ ಗುಡ್ಡೆಯಂಗಡಿ, ರಾಧಾಕೃಷ್ಣ ಪ್ರಭು, ಡಾ. ಕಾಶೀನಾಥ್ ಪೈ ಗಂಗೊಳ್ಳಿ, ಗಿರೀಶ್ ನಾಗೇಶ್ ಪ್ರಭು, ಗಣೇಶ್ ಭಟ್, ಕೀರ್ತನಾ ಭಟ್, ಜಯಂತಿ ಗಣಪತಿ ಸೇರುಗಾರ್ ಮತ್ತು ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು.

ಪಂಚಮಿ ಭಟ್ ಮಂಗಳೂರು ಅವರನ್ನು ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಗಿರೀಶ್ ನಾಗೇಶ್ ಪ್ರಭು ನೇತೃತ್ವದಲ್ಲಿ ಪಂಚಮಿ ಭಟ್ ಮಂಗಳೂರು ಅವರು ಭಜನ್ ಸಂಧ್ಯಾ ಕಾರ್ಯಕ್ರಮವನ್ನು ಅದ್ಭುತವಾಗಿ ನಡೆಸಿಕೊಟ್ಟರು.
ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಉದಯ ಭಂಡಾರ್ಕಾರ್ ಹಟ್ಟಿಯಂಗಡಿ ಅವರು ವಂದಿಸಿದರು.















