Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ
    ವಿಶೇಷ ವರದಿ

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ವರದಿ.
    ಕುಂದಾಪುರ:
    ತಾಲೂಕಿನ ಹಳ್ಳಿಹೊಳೆಯ ದಿನೇಶ್ ಬೋವಿ ಅವರು ʼಪರಿಸರ ಉಳಿಸಿʼ ಎಂಬ ಸಂದೇಶದೊಂದಿಗೆ ಸತತ 11 ತಿಂಗಳ ಕಾಲ ಉಡುಪಿಯಿಂದ ಲಡಾಕ್ ತನಕ 3,300 ಕಿಮೀ ಯಾತ್ರೆಯನ್ನು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದ ದಿನೇಶ್‌, 2025ರ ಸೆ.15ರಂದು ಲಡಾಖ್ ತಲುಪಿ ಸತತ 330 ದಿನಗಳ ಸೈಕಲ್ ಯಾತ್ರೆಯನ್ನು ಸಂಪೂರ್ಣಗೊಳಿಸಿದ್ದಾರೆ. ಕರ್ನಾಟಕದಿಂದ ಆರಂಭಗೊಂಡ ಸೈಕಲ್‌ ಪ್ರಯಾಣ ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮೂಲಕವಾಗಿ ಜಮು ಕಾಶ್ಮೀರ ತಲುಪಿದ್ದು 8 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ. ಲಡಾಕ್‌ಗೆ 11 ತಿಂಗಳಿಗಿಂತ ಬೇಗ ತಲುಪ ಬಹುದಾಗಿದ್ದರೂ, ಕಾಶ್ಮೀರದ ಥಾಂಗ್ ಗ್ರಾಮದ ರಸ್ತೆ ವರ್ಷದಲ್ಲಿ 6 ತಿಂಗಳು ಮಾತ್ರ ತೆರೆದಿರುತ್ತದೆ. ಹಾಗಾಗಿ 1 ತಿಂಗಳು ಮುಂಬೈಯಲ್ಲಿ ವಿಶ್ರಾಂತಿ ಮಾಡಿದ್ದರೆ, 3 ತಿಂಗಳು ಗುಜರಾತಿನಲ್ಲಿ ತಂಗಿದ್ದರು. 11 ತಿಂಗಳ ಸೈಕಲ್ ಪ್ರಯಾಣದಲ್ಲಿ ಒಟ್ಟು ಸುಮಾರು 1.5 ಲಕ್ಷ ರೂ. ವೆಚ್ಚವಾಗಿದೆ.

    ಪ್ರಾಂಶುಪಾಲರ ಪ್ರೋತ್ಸಾಹ:
    ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ದಿನೇಶ್ ಅವರ ಸೈಕಲಿಂಗ್‌ ಆಸಕ್ತಿಯನ್ನು ಪ್ರಾಂಶುಪಾಲರಾದ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ಅವರು ಪ್ರೋತ್ಸಾಹಿಸಿದ್ದರು. ದಿನೇಶ್‌ ಲಡಾಕ್‌ ಯಾತ್ರೆ ಕೈಗೊಂಡಾಗ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಭರಿಸಿದ್ದಾರೆ ಪ್ರಯಾಣ ವೆಚ್ಚ ಭರಿಸಲು ಅವರು ಸಹಕರಿಸಿದ್ದರು. ಸ್ವತಃ ಸೈಕಲಿಸ್ಟ್ ಆಗಿರುವ ವಿನ್ಸೆಂಟ್ ಆಳ್ವಾ ಸೈಕಲ್ ಸಹ ಕೊಡುಗೆಯಾಗಿ ನೀಡಿ, ತನ್ನ ವಿದ್ಯಾರ್ಥಿಗೆ ಪ್ರೋತ್ಸಾಹಿಸಿದ್ದಾರೆ. ಅಪ್ರತಿಮ ಸಾಧನೆ ತೋರಿ ಊರಿಗೆ ಮರಳಿದಾಗ ದಿನೇಶ್ ಅವರಿಗೆ ಕಾಲೇಜಿನ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ದಿನೇಶ್‌ ಬೋವಿ ಅವರು ಹಳ್ಳಿಹೊಳೆಯ ಪಾರ್ವತಿ ಮತ್ತು ಶೇಷು ಬೋವಿ ದಂಪತಿಯ ಪುತ್ರರಾಗಿದ್ದಾರೆ.

    ಪ್ರಯಾಣಕ್ಕೆ ಸಾಥ್‌ ನೀಡಿದ ಚಾರ್ಲಿ:
    ಸೈಕಲ್ ಯಾತ್ರೆಯ ಸಂದರ್ಭ ಕರ್ನಾಟಕ – ಗೋವಾ ಗಡಿಭಾಗದಲ್ಲಿ ತಂಗಿದ್ದಾಗ ಬೀದಿ ಬದಿಯಲ್ಲಿದ್ದ ಹೆಣ್ಣು ನಾಯಿ ಮರಿಯೊಂದು ದಿನೇಶ್‌ ಅವರಿಗೆ ದೊರಕಿತ್ತು. ಅದನ್ನು ಜೊತೆಯಲ್ಲಿ ಕರೆದುಕೊಂಡು ಲಡಾಕ್‌ಗೆ ಸೈಕಲಿನಲ್ಲಿಯೇ ಪ್ರಯಾಣ ಬೆಳೆಸಿದ್ದಾರೆ. ಅವರ ಜೊತೆ ನಾಯಿ ಕೂಡ 326 ದಿನಗಳ ಕಾಲ ಸಂಚಾರ ಮುಗಿಸಿದೆ. ಅಲ್ಲಿಂದ ಆ ನಾಯಿಯೊಂದಿಗೆ ಅವರು ಊರಿಗೆ ವಾಪಾಸಾಗಿದ್ದು ಮನೆಗೆ ಕೊಂಡೊಯ್ದಿದ್ದಾರೆ.

    ಸೈಕಲ್‌ ಪ್ರಯಾಣದ ಅನುಭವ:
    ದಿನೇಶ್‌ ಈ ಹಿಂದೆ ಉಡುಪಿ ಯಿಂದ ಧರ್ಮಸ್ಥಳ ಕಾಲ್ನಡಿಗೆ ಮಾಡಿದ್ದರು. ಅದಾದ ಬಳಿಕ ಉಡುಪಿಯಿಂದ ಕನ್ಯಾಕುಮಾರಿಗೆ 1.500 ಕಿ.ಮೀ. ದೂರವನ್ನು  21 ದಿನಗಳಲ್ಲಿ ಸೈಕಲ್‌ ಮೂಲಕ ತೆರಳಿದ್ದರು. ಆ ಬಳಿಕ ಉಡುಪಿಯಿಂದ ಲಡಾಕ್ ತನಕ 3,300 ಕಿಮೀ ಯಾತ್ರೆಯನ್ನು ಸೈಕಲ್‌ನಲ್ಲಿ ಕೈಗೊಂಡಿದ್ದಾರೆ. ರಸ್ತೆಯಲ್ಲಿ ಸಿಕ್ಕವರಿಗೆ ಪರಿಸರ ಉಳಿಸಿ ಅನ್ನುವ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಸಫಲವಾಗಿಸಿಕೊಂಡಿದ್ದಾರೆ. ಅವರ ಈ ಪ್ರಯತ್ನಕ್ಕೆ ಮನೆಯವರು, ಕಾಲೇಜಿನವರ ಸಹಕಾರದಿಂದ ದೊಡ್ಡದಿದೆ ಎಂದು ದಿನೇಶ್‌ ಹೇಳಿತ್ತಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    ನಾಲ್ಕು ದಶಕಗಳ ಕಾಲ ಕುಂದಾಪುರದ ಜನರನ್ನು ರಂಜಿಸಿದ ಶ್ರೀ ವಿನಾಯಕ ಚಿತ್ರಮಂದಿರ ತೆರೆಮರೆಗೆ

    18/05/2024
    Leave A Reply Cancel Reply

    ten − seven =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.