Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಾಲಾ ವಾಹನಕ್ಕೆ ನಕಲಿ ವಿಮಾ ಪಾಲಿಸಿ ಮಾಡಿಸುತ್ತಿದ್ದ ವ್ಯಕ್ತಿಗಳ ಬಂಧನ
    ಊರ್ಮನೆ ಸಮಾಚಾರ

    ಶಾಲಾ ವಾಹನಕ್ಕೆ ನಕಲಿ ವಿಮಾ ಪಾಲಿಸಿ ಮಾಡಿಸುತ್ತಿದ್ದ ವ್ಯಕ್ತಿಗಳ ಬಂಧನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಶಾಲೆ, ಕಾಲೇಜು ಬಸ್ಸಿಗೆ ಹೊಸ ವಿಮೆ ಪಾಲಿಸಿ ಮಾಡಿಸುವುದಾಗಿ ಹಣ ಪಡೆದು ನಕಲಿ ವಿಮೆ ಮಾಡಿಸಿ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕೋಟ ಪೋಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಪಾಂಡೇಶ್ವರ ಗ್ರಾಮದ ರಾಕೇಶ ಎಸ್., ಹಾಗೂ ಚರಣ ಬಾಬು ಮೇಸ್ತ ಬಂಧಿತ ಆರೋಪಿಗಳು.

    Click Here

    Call us

    Click Here

    ಘಟನೆಯ ವಿವರ:
    ಕುಂದಾಪುರ ತಾಲೂಕಿನ ಹೊಂಬಾಡಿ – ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕೋಟ ಪೊಲೀಸ್ ಠಾಣೆಯಲ್ಲಿ ಬಿಎನ್ ಎಸ್ ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವು ಕುಂದಾಪುರ ಸೆಷನ್ಸ್ ನ್ಯಾಯಾಲಯದ ವಿಚಾರಣೆಯಲ್ಲಿದ್ದು ರಿಕ್ಷಾದ ಚಾಲಕರಾದ ಉದಯ ಶೆಟ್ಟಿ ಎಂಬುವರು ವಿಮಾ ಪರಿಹಾರವಾಗಿ ರೂ, 15,95,000/- ಕೋರಿಕೊಂಡಿರುತ್ತಾರೆ. ಸದ್ರಿ ಪ್ರಕರಣವನ್ನು ವಿಮಾ ಕಂಪೆನಿಯವರು ಪರಿಶೀಲಿಸಲಾಗಿ ಶಾಲಾ ಬಸ್ಸಿನ ವಿಮಾ ಪಾಲಿಸಿಯು ನಕಲಿ ವಿಮಾ ಪಾಲಿಸಿಯಾಗಿರುವುದು ಕಂಡುಬಂದಿರುತ್ತದೆ. ಆರೋಪಿಯು ನಕಲಿ ವಿಮಾ ಪಾಲಿಸಿಯನ್ನು ಸೃಷ್ಟಿಸಿ ಠಾಣೆಗೆ ಹಾಗೂ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಈ ಮೂಲಕ ವಿಮಾ ಕಂಪೆನಿಗೆ ಮೋಸ ಮಾಡಿರುತ್ತಾರೆ  ಎಂಬುದಾಗಿ  ರಿಲಯನ್ಸ್ ಜನರಲ್ ಇನ್ಯೂರೆನ್ಸ್ ಕಂಪೆನಿಯ ಮೇನೇಜರ್ ನಿಖಿಲ್ ಜಿ.ಆರ್ ರವರು ಅ.04ರಂದು ದೂರು ನೀಡಿದ್ದರು.

    ಆರೋಪಿಗಳ ಪತ್ತೆಯ ಬಗ್ಗೆ ಬ್ರಹ್ಮಾವರ ಸಿ.ಪಿ.ಐ ಗೋಪಿ ಕೃಷ್ಣ ನೇತೃತ್ವದಲ್ಲಿ ಕೋಟ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರವೀಣ ಕುಮಾರ್ ಆರ್ ಅವರನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತನಿಖಾ ತಂಡವು ಸೆ.06ರಂದು ಪ್ರಕರಣದ ಆರೋಪಿತನಾದ ರಾಕೇಶ ಎಸ್ (33) ಎಂಬವನನ್ನು ದಸ್ತಗಿರಿ ಮಾಡಿದ್ದರು. ವಿಚಾರಣೆ ಸಮಯದಲ್ಲಿ ಆರೋಪಿತನು ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿಯಲ್ಲಿ ಎಸ್ಡಿಓ ಆಗಿದ್ದ ಚರಣ ಬಾಬು ಮೇಸ್ತ ಎಂಬವನ ಜೊತೆ ಸೇರಿಕೊಂಡು ಕುಂದಾಪುರ, ಕೋಟ, ಬ್ರಹ್ಮಾವರ, ಶಿರೂರು, ಭಟ್ಕಳ ಸ್ಥಳಗಳಲ್ಲಿ ಶಾಲೆ ಹಾಗೂ ಕಾಲೇಜಿನ ಬಸ್ಸಿಗೆ ವಿಮೆ ಪಾಲಿಸಿ ಮಾಡುವುದಾಗಿ ನಂಬಿಸಿ ನಕಲಿ ವಿಮೆ ಪಾಲಿಸಿಯನ್ನು ಮಾಡಿ ಶಾಲೆಯವರಲ್ಲಿ ಅಸಲಿ ವಿಮೆ ಪಾಲಿಸಿ ಎಂದು ನಂಬಿಸಿ ಮೋಸ ಮಾಡಿರುವುದಾಗಿ ತಪ್ಪೋಪ್ಪಿಕೊಂಡಿರುತ್ತಾನೆ.

    ಪ್ರಕರಣದ 2 ನೇ ಆರೋಪಿತ ಚರಣ ಬಾಬು ಮೇಸ್ತ ಎಂಬವನನ್ನು ಅ.03ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ತನಿಖೆ ಬಗ್ಗೆ ಪೊಲೀಸ್‌ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಆರೋಪಿಗಳು ಭಟ್ಕಳ  ಹಾಗೂ ಉಡುಪಿ ಕಡೆಗಳಲ್ಲಿಯ ಖಾಸಗಿ/ಅನುದಾನಿತ ಶಾಲಾ ಕಾಲೇಜಿನಲ್ಲಿ ಶಾಲಾ ಬಸ್ಸಿನ ವಿಮೆ ಮಾಡಿಸುವುದಾಗಿ ಹಣ ಪಡೆದು ಇದೇ ರೀತಿಯ ಕೃತ್ಯವೆಸಗಿರುವುದು ತಿಳಿದು ಬಂದಿರುತ್ತದೆ.

    ಆರೋಪಿತರು ಈಗಾಗಲೇ ರಿಲಾಯನ್ಸ್ ಜನರಲ್ ಇನ್ಸೂರೆನ್ಸ್ ಕಂಪೆನಿಯಲ್ಲಿ ಈ ಹಿಂದೆ ಕೆಲಸ ಮಾಡಿದವರಾಗಿದ್ದು, ಹಳೆ ಪಾಲಿಸಿಗಳನ್ನು PDF ಪೈಲ್ ಮಾಡಿ ಕಂಪ್ಯೂಟರನಲ್ಲಿ ಸಂಗ್ರಹಿಸಿ PDF Editor App ಮೂಲಕ ವಿಮೆ ಪಾಲಿಸಿಯಲ್ಲಿ ವಿಮೆ ನಂಬ್ರ, ದಿನಾಂಕ, ವಾಹನದ ನಂಬ್ರ  ಮತ್ತು ವಿಮೆ ಮೊತ್ತದ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ಎಡಿಟ್ ಮಾಡಿ ವಿಮೆ ಪಾಲಿಸಿ ಮಾಡಲು ನೀಡಿದ ಶಾಲಾ /ಕಾಲೇಜಿಗೆ ಕಳುಹಿಸಿರುವುದು ತಿಳಿದು ಬಂದಿರುತ್ತದೆ.

    Click here

    Click here

    Click here

    Call us

    Call us

    ಇದೇ ರೀತಿಯಾಗಿ ಉತ್ತರ ಕನ್ನಡ ಜಿಲ್ಲೆ ಭಟ್ಕಳ, ಉಡುಪಿ ಜಿಲ್ಲೆಯ ಕುಂದಾಪುರ, ಕೋಟ ಠಾಣಾ ವ್ಯಾಪ್ತಿಯಲ್ಲಿರುವ ಶಾಲೆ / ಕಾಲೇಜಿನ ಶಾಲಾ ಬಸ್ಸಿಗೆ ವಿಮೆ ಮಾಡಿಸುವುದಾಗಿ ಆರೋಪಿ 1 ಮತ್ತು 2ನೇಯವರು ಸೇರಿ ಸುಮಾರು 86 ಪಾಲಿಸಿಗಳಲ್ಲಿ 29 ಪಾಲಿಸಿ ನಕಲಿ  ಹಾಗೂ 2ನೇ ಆರೋಪಿತ ಒಬ್ಬನೇ 111 ಪಾಲಿಸಿಯಲ್ಲಿ 17 ನಕಲಿ ಪಾಲಿಸಿ ಮಾಡಿ ಒಟ್ಟು  46  ಶಾಲೆ/ಕಾಲೇಜು ವಾಹನಗಳ ವಿಮೆಯನ್ನು ನಕಲಿ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿರುತ್ತದೆ.

    Like this:

    Like Loading...

    Related

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    06/12/2025

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d