Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೈಗೊಂಡ ಕೆಲಸದಲ್ಲಿ ಹೆಮ್ಮೆ, ಪ್ರೀತಿಯಿರಲಿ: ಶಕೀಲಾ ಹೆಗ್ಡೆ
    ಊರ್ಮನೆ ಸಮಾಚಾರ

    ಕೈಗೊಂಡ ಕೆಲಸದಲ್ಲಿ ಹೆಮ್ಮೆ, ಪ್ರೀತಿಯಿರಲಿ: ಶಕೀಲಾ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬ್ರಹ್ಮಾವರ:
     ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಉದ್ಯಮ ಶೀಲಾತಬಿವೃದ್ಧಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬ್ರಹ್ಮಾವರ ಕೌಶಲ್ಯ ಬ್ಯೂಟಿ ಪಾರ್ಲರ್ ಮಾಲಕರು ಹಾಗೂ ಬ್ಯೂಟಿ ಪಾರ್ಲರ್ ತರಬೇತಿಯ ಅತಿಥಿ ಉಪನ್ಯಾಸಕಿ ಶಕೀಲಾ ಹೆಗ್ಡೆ ಮಾತನಾಡಿ, ಉದ್ಯಮದಲ್ಲಿ ಯಾವುದೇ ಕ್ಷೇತ್ರವಾದರೂ ಸರಿಯೇ ಮುಖ್ಯವಾಗಿ ಮಾಡುವ ಕೆಲಸದ ಮೇಲೆ ಪ್ರೀತಿಯಿರಬೇಕು. ಮೊಟ್ಟ ಮೊದಲಿಗೆ ನಮ್ಮನ್ನು ನಾವು ಪ್ರೀತಿಸಬೇಕು, ಆಗ ನಮ್ಮ ಕೆಲಸದ ಮೇಲೆ ನಮಗೆ ಆಸಕ್ತಿ, ಖುಷಿರುತ್ತದೆ. ಏನೇ ತೊಂದರೆಗಳು ಬಂದರೂ ಅವುಗಳನ್ನು ನಿಶ್ಚಿಂತೆಯಿಂದ ಹೋಗಲಾಡಿಸಿ, ಗುರಿ ಸಾಧಿಸುವಲ್ಲಿ ನಾವು ಸಫಲತೆಯನ್ನು ಕಂಡುಕೊಳ್ಳಲು  ಸಾಧ್ಯವಾಗುತ್ತದೆ.

    ಮಹಿಳೆಯರನ್ನು ಅತ್ಯಂತವಾಗಿ ಆಕರ್ಷಿಸುವ ಕ್ಷೇತ್ರವಾಗಿರುವುದು ವಸ್ತ್ರ ವಿನ್ಯಾಸ. ಟೈಲರಿಂಗ್, ಬ್ಯೂಟಿ ಪಾರ್ಲರ್ ಮುಂತಾದ ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಆರ್ಥಿಕವಾಗಿ ಮುಂದೆ ಬರಲು ಸಾಕಷ್ಟು ಅವಕಾಶಗಳು ಇಂದಿನ ಸಾಮಾಜಿಕ ವ್ಯವಸ್ಥೆಯಲ್ಲಿದೆ. ಸರಕಾರದಿಂದ ಹಲವು ಉತ್ತಮ ಸೌಲಭ್ಯಗಳು ಮಹಿಳೆಯರ ಅಭಿವೃದ್ಧಿಗಾಗಿ ಇವೆ, ಅವುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡಲ್ಲಿ ನಮ್ಮ ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾಲು ಕಿಂಚಿತ್ತಾದರೂ ನೀಡಿದಂತಾಗುತ್ತದೆ. ಯಾವುದೇ ಕ್ಷೇತ್ರವಾಗಿರಲಿ ಉದ್ಯಮ ಪ್ರಾರಂಭಿಸಿದ ತಕ್ಷಣ ನಮಗೆ ಯಶಸ್ಸು ಸಿಗುವುದಿಲ್ಲ, ಇಂತಿಷ್ಟು ಕಾಲಮಿತಿಯಿರುತ್ತದೆ,

    ನಮ್ಮ ಸಂಪೂರ್ಣ ಸಮಯ, ಆಲೋಚನೆ, ಮನಸ್ಸು, ಎಲ್ಲವನ್ನೂ ಉದ್ಯಮದ ಯಶಸ್ಸಿಗೆ ನೀಡಬೇಕಾಗುತ್ತದೆ. ಹಾಗದಲ್ಲಿ ಮಾತ್ರವೇ ಉದ್ಯಮದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ. ಶ್ರದ್ಧೆಯಿಂದ ಕೆಲಸದಲ್ಲಿ ತೊಡಗಿಸಿಕೊಳ್ಳಿ ಯಶಸ್ಸು ಖಂಡಿತವಾಗಿ ಸಿಗುತ್ತದೆ ಎಂದು ಹೇಳಿ  ಶಿಬಿರಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ತುಂಬಿ ಶುಭ ಹಾರೈಸಿದರು.

    ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ.  ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ತರಬೇತಿಯನ್ನು ಶ್ರದ್ಧೆಯಿಂದ ಕಲಿಯಿರಿ, ಕಲಿತ ವಿದ್ಯೆ ಎಂದಿಗೂ ನಿಮ್ಮ ಕೈ ಬಿಡುವುದಿಲ್ಲ. ಶ್ರದ್ಧೆಯಿಂದ, ಗಮನವಿಟ್ಟು ಕಲಿಯಿರಿ. ಎಂದು ಹೇಳಿದರು.  ಅದೇ ರೀತಿ ಸರಕಾರದ ಹಾಗು ಬ್ಯಾಂಕಿನ ಸೌಲಭ್ಯಗಳನ್ನು ಉತ್ತಮ ರೀತಿಯಲ್ಲಿ ಪಡೆದುಕೊಳ್ಳಿ. ಅದೇ ರೀತಿ ಸಂಸ್ಥೆಯ ಅನುಭವವನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ ಗ್ರಾಮೀಣ ಜನರು ತರಬೇತಿಯನ್ನು ಪಡೆದು ಆರ್ಥಿಕ ಪ್ರಗತಿಯನ್ನು ಸಾಧಿಸುವಂತೆ ಪ್ರೇರೇಪಿಸಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಈ ಸಂದರ್ಭದಲ್ಲಿ  ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು ಹಾಗು ಉಪನ್ಯಾಸಕರಾದ ಸಂತೋಷ್ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.