Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿಯಲ್ಲಿ ವಶಪಡಿಸಿಕೊಂಡಿದ್ದ 15.21 ಲಕ್ಷ ರೂ. ಮೌಲ್ಯದ ಮಾದಕ ವಸ್ತು ನಾಶ
    ಉಡುಪಿ ಜಿಲ್ಲೆ

    ಉಡುಪಿಯಲ್ಲಿ ವಶಪಡಿಸಿಕೊಂಡಿದ್ದ 15.21 ಲಕ್ಷ ರೂ. ಮೌಲ್ಯದ ಮಾದಕ ವಸ್ತು ನಾಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 9 ಕೆಜಿ 937 ಗ್ರಾಂ 209 ಮಿಲಿಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 7,12,963 ಬೆಲೆಯ ಗಾಂಜಾ, 345 ಗ್ರಾಂ 596 ಮಿಲಿಗ್ರಾಂ ಎಂ.ಡಿ.ಎಂ.ಎ. ಅಂದಾಜು ಮೌಲ್ಯ ರೂಪಾಯಿ 8,08,464 ಹಾಗೂ ಮೌಲ್ಯರಹಿತ 61 ಗ್ರಾಂ 430 ಮಿಲಿಗ್ರಾಂ ಬಿಳಿ ಪೌಡರ್‌ನ್ನು ಪಡುಬಿದ್ರಿ ಠಾಣಾ ಸರಹದ್ದಿನ ಮೆ. ಆಯುಷ್‌ ಎನ್‌ವಿರೋಟೆಕ್‌ ಪ್ರೈ. ಲಿ., ಪಡುಬಿದ್ರಿ ಎಂಬಲ್ಲಿ ನಾಶಪಡಿಸಲಾಯಿತು.

    Click Here

    Call us

    Click Here

    ನಾಶಪಡಿಸಿದ ಮಾದಕ ದ್ರವ್ಯದ ಒಟ್ಟು ಅಂದಾಜು ಮೌಲ್ಯ ರೂಪಾಯಿ 15,21,427 ಆಗಿರುತ್ತದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿಯ ಅಧ್ಯಕ್ಷರಾದ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.

    ಉಡುಪಿ ನಗರ ಠಾಣೆಯ 03 ಪ್ರಕರಣ, ಸೆನ್‌ ಠಾಣೆಯ 2 ಪ್ರಕರಣ ಹಾಗೂ ಮಲ್ಪೆ, ಪಡುಬಿದ್ರಿ, ಶಿರ್ವಾ, ಕಾರ್ಕಳ ನಗರ ಹಾಗೂ ಮಣಿಪಾಲ ಠಾಣೆಯ ತಲಾ 01 ಪ್ರಕರಣ ಸೇರಿ ಒಟ್ಟು 10 ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮಾದಕ ದ್ರವ್ಯ ಪದಾರ್ಥವನ್ನು ಮಾನ್ಯ ನ್ಯಾಯಾಲಯದ ಆದೇಶಾನುಸಾರ ನಾಶಗೊಳಿಸಲಾಗಿದೆ. ಇದರಲ್ಲಿ 2021ರ 01 ಪ್ರಕರಣ, 2024ರ 03 ಪ್ರಕರಣ ಹಾಗೂ 2025ರ 06 ಪ್ರಕರಣ ಒಳಗೊಂಡಿರುತ್ತದೆ. 2021ರ ಪಡುಬಿದ್ರಿ ಠಾಣೆಯ ಅಪರಾಧ ಕ್ರಮಾಂಕ 76/2021ರ ಪ್ರಕರಣವು ಸಜೆಯಲ್ಲಿ ಮುಕ್ತಾಯಗೊಂಡಿದ್ದು, ಆರೋಪಿತ ಅಬ್ದುಲ್‌ ರಹಿಮಾನ್‌ ಎಂಬಾತನಿಗೆ ಮಾನ್ಯ ನ್ಯಾಯಾಲಯವು ರೂಪಾಯಿ 8,000/- ಜುಲ್ಮಾನೆ ವಿಧಿಸಿ ಶಿಕ್ಷೆ ಪ್ರಕಟಿಸಿರುತ್ತದೆ.

    2025ರ ಮಣಿಪಾಲ ಠಾಣೆಯ ಪ್ರಕರಣವು ತನಿಖೆಯಲ್ಲಿದ್ದು, ಉಳಿದ ಎಲ್ಲಾ ಪ್ರಕರಣಗಳು ಮಾನ್ಯ ನ್ಯಾಯಾಲಯದ ವಿಚಾರಣೆಯಲ್ಲಿ ಇರುತ್ತದೆ.

    ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಡ್ರಗ್‌ ಡಿಸ್‌ಪೋಸಲ್‌ ಕಮಿಟಿ ಸದಸ್ಯರು ಹಾಗೂ ಸಹಾಯಕ ಪೊಲೀಸ್‌ ಅಧೀಕ್ಷಕರಾದ ಡಾ. ಹರ್ಷಾ ಪ್ರಿಯಂವದಾ, ಐ.ಪಿ.ಎಸ್. ಮತ್ತು ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ ಸದಸ್ಯರಾದ ಪ್ರಭು ಡಿ.ಟಿ. ಇತರ ಪೊಲೀಸ್‌ ಅಧಿಕಾರಿಯವರು ಭಾಗವಹಿಸಿದ್ದರು.

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d