ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ: ಕೇಂದ್ರ ಸರಕಾರದ ಸಬ್ಸಿಡಿ ಲೋನ್ ಮಾಡಿಕೊಡುವ ಆಮಿಷವೊಡ್ಡಿ ಕೋಟಿಗಟ್ಟಲೆ ಹಣ ವಂಚಿಸಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಕೌಶಲ್ಯ ಎಂಬಾಕೆಯನ್ನು ಬಂಧಿಸಲಾಗಿದೆ.
ಘಟನೆಯ ವಿವರ:
ಯಡ್ತಾಡಿ ಗ್ರಾಮದ ಸರಿತಾ ಲೂವಿಸ್ ಎಂಬುವವರಿಗೆ 2023ರ ನವೆಂಬರ್ನಲ್ಲಿ ಪರಿಚಯವಾದ ಕೌಶಲ್ಯ ಎಂಬಾಕೆ PMEGP ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುತ್ತೇನೆ ಎಂದು ಹೇಳಿ ಒತ್ತಾಯದಿಂದ ನಂಬಿಸಿ ಒಪ್ಪಿಸಿರುತ್ತಾರೆ.
ನಂತರ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಕಟ್ಟಬೇಕು ಎಂದು ಹೇಳಿದ್ದು, ಅದರಂತೆ ಅವರಿಂದ ಹಂತ ಹಂತವಾಗಿ ಕೌಶಲ್ಯಳ ಖಾತೆಗೆ ಹಾಗೂ ಆಕೆಯ ಗಂಡ ಸಂದೇಶ ಮತ್ತು ಪ್ರಕಾಶ, ಆಶೀಶ ಶೆಟ್ಟಿ, ರಾಜೇಂದ್ರ ಬೈಂದೂರು, ಗೀತ, ಹರಿಣಿ, ನವ್ಯ, ಕುಮಾರ್, ಮಾಲತಿ, ಪ್ರವೀಣ್, ಹರಿಪ್ರಸಾದ್, ನಾಗರಾಜ ಮತ್ತು ಭಾರತಿ ಸಿಂಗ್ ಎಂಬುವರಿಗೆ ನಗದು ರೂಪದಲ್ಲಿ ಒಟ್ಟು 80,72,000/- ರೂಪಾಯಿ ಹಣವನ್ನು ಸರಿತಾ ಅವರು ಕೊಟ್ಟಿದ್ದರು.
ಅಲ್ಲದೇ ಸರಿತಾ ಅವರ ಸಂಬಂಧಿ ಅಂಜಲಿನ್ ಡಿಸಿಲ್ವಾ ರವರಿಗೂ ಕೂಡಾ PMEGP ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುತ್ತೇನೆ ಎಂದು ಹೇಳಿ ಹಂತ ಹಂತವಾಗಿ ಮೇಲೆ ತಿಳಿಸಿದ ವ್ಯಕ್ತಿಗಳಿಗೆ 65,00,000/- ರೂಪಾಯಿ ನಗದು ಹಣವನ್ನು ನೀಡಿರುತ್ತಾರೆ. ಸರಿತಾ ಮತ್ತು ಅವರ ಸಂಬಂಧಿ ಅಂಜಲಿನ್ ಡಿಸಿಲ್ವಾ ರವರಿಗೆ ಬೇರೆ ಬೇರೆ ಆಗಿ PMEGP ಅಡಿಯಲ್ಲಿ ಒಟ್ಟು 4 ಕೋಟಿ ಸಬ್ಸಿಡಿ ಲೋನ್ ಮಾಡಿಸಿಕೊಡುತ್ತೇನೆ ಎಂದು ನಂಬಿಸಿ ಹಾಗೂ ಬ್ಯಾಂಕ್ ನೌಕರ್ ಎಂದು ಪೋನ್ನಲ್ಲಿ ಮಾತನಾಡಿ ನಂಬಿಸಿ ಒಟ್ಟು 1,45,72,000/- ರೂಪಾಯಿ ಹಣ ಪಡೆದು ವಂಚನೆ ಮಾಡಿರುವುದಾಗಿ ದೂರಲಾಗಿದೆ ಮೋಸಮಾಡಿರುತ್ತಾರೆ.
ಪ್ರಕರಣದ ತನಿಖೆಯನ್ನು ಕೈಗೊಂಡ ಬ್ರಹ್ಮಾವರ ಪೊಲೀಸರು ಆರೋಪಿ ಕೌಶಲ್ಯ ಳನ್ನು ಬಂಧಿಸಿದ್ದಾರೆ.















