ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪ್ರಕೃತಿಯನ್ನು ಪ್ರೀತಿಸಿ ಅಲ್ಲಿನ ಮರಗಳನ್ನೆ ಮಕ್ಕಳಾಗಿಸಿಕೊಂಡು ಮನುಕುಲಕ್ಕೆ ಸ್ಪೂರ್ತಿಯ ಚಲುಮೆಯಾದ ಸಾಲು ಮರದ ತಿಮ್ಮಕ್ಕನ ಬದುಕೆ ಪ್ರಸ್ತುತ ಜನಾಂಗಕ್ಕೆ ಆದರ್ಶವಾಗಲಿ ಎಂದು ಸಾಹಿತಿ, ಶಿಕ್ಷಕ ನರೇಂದ್ರ ಕುಮಾರ್ ಕೋಟ ಹೇಳಿದರು.
ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಶುಕ್ರವಾರ ಪ್ರಕೃತಿ ಮಾತೆಯಲ್ಲಿ ಲೀನರಾದ ಸಾಲುಮರದ ತಿಮ್ಮಕ್ಕನಿಗೆ ನುಡಿನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಿಮ್ಮಕ್ಕನವರು ತಮ್ಮ ಸುಧೀರ್ಘ ಜೀವಿತ ಅವಧಿಯಲ್ಲಿ ಮರೆಯಲಾಗ ಅಧ್ಯಾಯವನ್ನು ಸೃಷ್ಠಿಸಿದ್ದಾರೆ ಇಂತಹ ಮಹಾನ್ ಕಾರ್ಯ ಇಂದಿನ ಯುವ ಜನಾಂಗಕ್ಕೆ ದಾರಿದೀಪವಾಗಬೇಕಿದೆ. ಪ್ರಸ್ತುತ ಪಂಚವರ್ಣ ಸಂಘಟನೆ ಅದೇ ದಾರಿಯಲ್ಲಿರುವುದು ತಿಮ್ಮಕ್ಕನವರಿಗೆ ಸಲ್ಲಿಸುವ ದೊಡ್ಡ ಸೇವೆಯಾಗಿದೆ ಎಂದರು.
ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ ಜಯರಾಮ ಶೆಟ್ಟಿ ತಿಮ್ಮಕ್ಕನ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಭನಮನ ಸಲ್ಲಿಸಿದರು. ಇದೇ ವೇಳೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷ ಕುಸುಮಾ ದೇವಾಡಿಗ ಉಪಸ್ಥಿತರಿದ್ದರು. ಮಹಿಳಾ ಮಂಡಲದ ಕಲಾವತಿ ಅಶೋಕ್ ಸ್ವಾಗತಿಸಿ, ನಿರೂಪಿಸಿದರು. ಪಂಚವರ್ಣದ ಮಹೇಶ್ ಹವಲ್ದಾರ್ ಬೆಳಗಾವಿ ವಂದಿಸಿದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.










