Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರಾವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಇಂಬು ನೀಡಿದ ರಾಜ್ಯ ಸರ್ಕಾರ: ಎಂ.ಎ. ಗಫೂರ್
    ಉಡುಪಿ ಜಿಲ್ಲೆ

    ಕರಾವಳಿ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಇಂಬು ನೀಡಿದ ರಾಜ್ಯ ಸರ್ಕಾರ: ಎಂ.ಎ. ಗಫೂರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ರಾಜ್ಯ ಸರ್ಕಾರವು ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸರ್ವತೋಮುಖ ಅಭಿವೃದ್ಧಿಗೆ ಶಕ್ತಿ ನೀಡಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.

    Click Here

    Call us

    Click Here

    ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರಾವಳಿ ಅಭಿವೃದ್ಧಿ ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕರಾವಳಿ ಅಭಿವೃದ್ಧಿ ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಮಂಡಳಿಗೆ ಹೆಚ್ಚು ಅನುದಾನ ಬಿಡುಗಡೆ ಆಗುವ ನಿರೀಕ್ಷೆಯಿದ್ದು, ಇದರಿಂದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದ ಅವರು, ಕರಾವಳಿ ತೀರದ ಜಿಲ್ಲೆಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದರು. 

    ಉಡುಪಿಯ 5, ದಕ್ಷಿಣ ಕನ್ನಡದ 8 ಹಾಗೂ ಉತ್ತರ ಕನ್ನಡದ 6 ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 19 ವಿಧಾನಸಭಾ ಕ್ಷೇತ್ರಗಳನ್ನೊಳಗೊಂಡಂತೆ ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಆಗಿದೆ. ಈ ಹಿಂದೆ ಮಲ್ನಾಡು ಅಭಿವೃದ್ಧಿ ಮಂಡಳಿಯಲ್ಲಿದ್ದ ಕಾರ್ಕಳ, ಬೆಳ್ತಂಗಡಿ, ಮೂಡಬಿದ್ರೆ, ಸುಳ್ಯ ಹಾಗೂ ಪುತ್ತೂರು ಕರಾವಳಿ ಅಭಿವೃದ್ಧಿ ಮಂಡಳಿಗೆ ಸೇರಿದೆ. ಕರಾವಳಿಯ ವಿವಿಧ ಅಭಿವೃದ್ಧಿ ಇಲಾಖೆಗಳು, ಜಿಲ್ಲಾ ಪಂಚಾಯತಿಗಳು ಮತ್ತು ಮಂಡಳಿಯಿಂದ ಮಾನ್ಯತೆ ಪಡೆದ ಸರ್ಕಾರೇತರ ಸಂಸ್ಥೆಗಳು ಯೋಜನೆಗೆ ಅನುಸಾರವಾಗಿ ರೂಪಿಸಿದ ಕಾರ್ಯಕ್ರಮಗಳನ್ನು ಮಂಡಳಿಯು ಅನುಮೋದಿಸಲಿದೆ ಎಂದರು.

    ಪ್ರಸ್ತುತ ಸಾಲಿನಲ್ಲಿ ಆಯವ್ಯಯದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 1050 ಲಕ್ಷ ರೂ. ಮೊತ್ತದ ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಾರ್ಷಿಕ ಸಾಲಿನ ಕ್ರಿಯಾ ಯೋಜನೆಯಲ್ಲಿ 1082.55 ಲಕ್ಷ ರೂ. ಮೊತ್ತದ ಒಟ್ಟು 153 ಅಭಿವೃದ್ಧಿ ಕಾಮಗಾರಿಗಳನ್ನು ಕ್ರಿಯಾ ಯೋಜನೆಯಲ್ಲಿ ಅನುಮೋದಿಸಲಾಗಿದೆ ಎಂದ ಅವರು, ಕಳೆದ ಸಾಲಿನ ಮುಂದುವರೆದ ಕಾಮಗಾರಿಗಳು ಪ್ರಗತಿಯಲ್ಲಿರುವುದಾಗಿ ಸಭೆಗೆ ಮಾಹಿತಿ ನೀಡಿದರು.

    Click here

    Click here

    Click here

    Call us

    Call us

    ರಾಜ್ಯವು 320 ಕಿ.ಮೀ ಉದ್ದದ ಕರಾವಳಿ ತೀರವನ್ನು ಹೊಂದಿರುವುದರಿಂದ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೀಚ್‌ಗಳಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮತ್ತಷ್ಟು ಹೆಚ್ಚಿನ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಚಿಂತನೆ ನಡೆಸಲಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಹಿನ್ನೀರು ಪ್ರದೇಶಗಳ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ಕಾರ್ಯರೂಪಕ್ಕೆ ತರುವುದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲಾಗುವುದು ಎಂದರು.

    ಉಡುಪಿ ಜಿಲ್ಲೆಯು ಧಾರ್ಮಿಕ ಕ್ಷೇತ್ರವಾಗಿರುವ ಹಿನ್ನೆಲೆ, ಹೊರ ಜಿಲ್ಲೆ, ರಾಜ್ಯ, ದೇಶಗಳಿಂದ ಸಾಕಷ್ಟು ಪ್ರವಾಸಿಗರು ಆಗಮಿಸುತ್ತಾರೆ. ಅವರುಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದ ಅವರು, ಬೀಚ್‌ಗಳ ಅಭಿವೃದ್ಧಿಗೆ ಗೋವಾ-ಕೇರಳ ಮಾದರಿಯನ್ನು ಅಳವಡಿಸಿಕೊಳ್ಳಲು ಚರ್ಚೆ ನಡೆಸಲಾಗುವುದು ಎಂದು ಸಮಿತಿಯ ಸದಸ್ಯರುಗಳಾದ ಯಶ್‌ಪಾಲ್ ಎ ಸುವರ್ಣ ಅವರು, ಕರಾವಳಿ ಜಿಲ್ಲೆಗಳ ಸೆಂಟರ್ ಉಡುಪಿಯಾಗಿರುವುದರಿಂದ ಜಿಲ್ಲೆಯಲ್ಲಿ ಮಂಡಳಿಯ ಕೇಂದ್ರ ಕಚೇರಿಯನ್ನು ತೆರೆಯುವಂತೆ ಹಾಗೂ ಸುನಿಲ್ ಕುಮಾರ್ ಅವರು, ಜಿಲ್ಲೆಯಲ್ಲಿ ಶಾಶ್ವತ ಕಾಮಗಾರಿಗಳನ್ನು ರಚಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಂದಿಕೂರು ಬೆಳಪು ಪರಿಸರದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಿರ್ಮಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದ್ದು, ಅತ್ಯಾಧುನಿಕ ಮೂಲಭೂತ ಸೌಕರ್ಯದೊಂದಿಗೆ ಹೆಚ್ಚು ಪ್ರೇಕ್ಷಕರು ಆಸೀನರಾಗಲು ಹಾಗೂ ಸಾವಿರಾರು ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಕೆ.ಎಸ್.ಸಿ.ಎ ಅವರು ಸ್ಥಳ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. 

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮೊದಲ ಹಂತದಲ್ಲಿ ಓವರ್ ಹೆಡ್ ಮೆಟ್ರೋ ಕಾಮಗಾರಿ ಯೋಜನೆಯನ್ನು ಮಂಗಳೂರು-ಉಡುಪಿ-ಮಣಿಪಾಲ ಮಾರ್ಗವಾಗಿ ಹಾಗೂ ಎರಡನೇ ಹಂತದಲ್ಲಿ ಹೆಜಮಾಡಿ-ಕಾರ್ಕಳ ಮಾರ್ಗವಾಗಿ ಕೈಗೊಳ್ಳಲು ಯೋಜನೆ ರೂಪಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ಸಭೆಯಲ್ಲಿ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಕಾರ್ಯದರ್ಶಿ ಪ್ರದೀಪ್ ಡಿ. ಸೋಜಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    20 − ten =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.