Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ
    alvas nudisiri

    ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಶಾಲೆಯಲ್ಲಿ ನಿರ್ಮಿಸಲಾದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಖಗೋಳ ವಿಜ್ಞಾನ ಪ್ರಯೋಗಾಲಯವು ಶನಿವಾರ ಉದ್ಘಾಟಿಸಲಾಯಿತು.

    Click Here

    Call us

    Click Here

    ಭಾರತದ ಚಂದ್ರಮಾನವ ಎಂದು ಖ್ಯಾತಿ ಪಡೆದಿರುವ ಪದ್ಮಶ್ರೀ ಪುರಸ್ಕೃತ ಡಾ. ಮೈಲ್ಸ್ವಾಮಿ ಅನ್ನಾದುರೈ ಅವರು ಉದ್ಘಾಟಿಸಿ, ಮಾತನಾಡಿ, ಇದು ಕೇವಲ ಖಗೋಳ ಪ್ರಯೋಗಾಲಯವಲ್ಲ, ಇದು ನಮ್ಮ ಬಾಹ್ಯಾಕಾಶ ಸಾಧನೆಯತ್ತ ಭವಿಷ್ಯದ ದೃಢ ಹೆಜ್ಜೆಯಾಗಬಲ್ಲದು ಎಂದು ಆಶಿಸಿದರು.  

    ಭಾರತವು ಇಂದು ಉಪಗ್ರಹ ಸಂವಹನದಿಂದ ನ್ಯಾವಿಗೇಶನ್ ವ್ಯವಸ್ಥೆ, ದೂರ ಸಂವಹನ, ಚಂದ್ರಯಾನ–ಮಂಗಳಯಾನ ಮುಂತಾದ ಸಾಧನೆಗಳ ಮೂಲಕ ಜಗತ್ತನ್ನು ತನ್ನತ್ತಾ ಸೆಳೆಯುತ್ತಿದೆ. ಭಾರತದ ಶಿಕ್ಷಣ ಪದ್ದತಿಯನ್ನು ಉಲ್ಲೇಖಿಸಿದ ಅವರು, ಶಾಲೆಗಳು ಇಂದಿನ ಅಂತರಾಷ್ಟ್ರೀಯ ಚೆಸ್ ಗ್ರ್ಯಾಂಡ್‌ ಮಾಸ್ಟರ್‌ಗಳನ್ನು ಹೊರತರುತ್ತಿದ್ದರೆ, ನಾಳೆಯ ವಿಜ್ಞಾನಿಗಳನ್ನು ಕೂಡ ರೂಪಿಸಬಲ್ಲ ಸಾಮಾರ್ಥ್ಯ ಹೊಂದಿದೆ ಎಂದರು.

    ಭಾರತ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚಿದ ಸಾಧನೆಯನ್ನು ನೆನಪಿಸಿಕೊಂಡ ಅವರು ಕೊಲಂಬಸ್ ಭಾರತವನ್ನು ಹುಡುಕುತ್ತ ಅಮೇರಿಕಾವನ್ನು ಕಂಡುಹಿಡಿದ. ಶತಮಾನಗಳ ನಂತರ, ಚಂದ್ರನಲ್ಲಿ ನೀರನ್ನು ಪತ್ತೆಹಚ್ಚುವಲ್ಲಿ ಅಮೇರಿಕಕ್ಕೆ ಸಾಧ್ಯವಾಗಲಿಲ್ಲ, ಆದರೆ ಭಾರತ ಅದನ್ನು ಸಾಧಿಸಿತು. ಮುಂದಿನ ಯುಗದಲ್ಲಿ ಮಾನವ ವಿಸ್ತರಣೆಯ ಹೊಸ ಗಮ್ಯಸ್ಥಾನವಾಗಿ ಚಂದ್ರನು ‘ಮುಂದಿನ ಅಮೇರಿಕಾ’ ವಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

     ಶ್ರೀ ಮಹಾವೀರ ಕಾಲೇಜಿನ ಅಮೆಚೂರ್ ಆಸ್ಟ್ರೋನಾಮರ್ಸ್ ಕ್ಲಬ್‌ನ ಸಂಯೋಜಕ ಡಾ. ರಮೇಶ್ ಭಟ್ ಮಾತನಾಡಿ, ಬಾಹ್ಯಾಕಾಶ ಸಾಧನೆಯಲ್ಲಿ ಅಮೇರಿಕವು ಸಾಧಿಸದ ಹಂತವನ್ನೂ, ಭಾರತವು ತಲುಪಿದುದು ನಮ್ಮ ವಿಜ್ಞಾನಿಗಳ ಗುಣಮಟ್ಟಕ್ಕೆ ಸಾಕ್ಷಿ. ಭಾರತೀಯ ಉಪಗ್ರಹ ತಂತ್ರಜ್ಞಾನದ ಕೀರ್ತಿಯನ್ನರಿತು ಅನೇಕ ದೇಶಗಳು ಭಾರತವನ್ನು ಸಹಯೋಗಕ್ಕಾಗಿ ಸಂಪರ್ಕಿಸುತ್ತಿವೆ ಎಂದರು.  

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಜೀವನದಲ್ಲಿ ಯಶಸ್ಸು ಸಾಧಿಸಲು  ಪ್ರತಿಷ್ಟಿತ ಸಂಸ್ಥೆಗಳಲ್ಲೇ ಶಿಕ್ಷಣ ಪಡೆಯಬೇಕೆಂದೇನಿಲ್ಲ.  ಅನೇಕ ವಿಜ್ಞಾನಿಗಳು ಗ್ರಾಮೀಣ ಹಿನ್ನೆಲೆಯಿಂದ ಬಂದು ತಮ್ಮ ಶ್ರೇಷ್ಠತೆ ಮೆರೆದಿದ್ದಾರೆ. ಒಮ್ಮೆ ಕನಸಿನಂತಿದ್ದ ಚಂದ್ರನ ತಲುಪುವುದು ಈಗ ಸಾಧ್ಯವಾಗಿರುವ ಕಾಲದಲ್ಲಿ, ಮುಂದಿನ ಪೀಳಿಗೆಯವರು ಅಂತರಿಕ್ಷ ಕಾಲೊನಿ ನಿರ್ಮಾಣದಂತಹ ದೊಡ್ಡ ಸವಾಲುಗಳಿಗೆ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಡಾ. ಮೈಲ್ಸ್ವಾಮಿ ಅನ್ನಾದುರೈಯನ್ನು ಆಳ್ವಾಸ್ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಮಂಗಳೂರಿನ ಸೇನಾ ನೇಮಕಾತಿ ಅಧಿಕಾರಿಗಳು, ಕರ್ನಲ್ ಸೋಮು ಮಹಾರಾಜ್, ಮೇಜರ್ ಅಭಿಜಿತ್ ಸಿಂಗ್, ನವ್ರಾಸ್ ಸ್ಪೇಸ್‌ಲ್ಯಾಬ್‌ನ ರವೀಂದ್ರನಾಥ್ ನಾಡೆಲ್ಲ ಹಾಗೂ ಶ್ರವಣ್, ಶಾಲೆಯ ಆಡಳಿತಾಧಿಕಾರಿ ಪ್ರೀತಮ್ ಕುಂದರ್, ಮೆಂಟರ್ ಅಶ್ವಿನ್ ಪೈ, ಪ್ರಾಂಶುಪಾಲೆ ಶೈಲಜಾ ಬೋಳ ಹೆಗ್ಡೆ ಇದ್ದರು. ಪ್ರಾಂಶುಪಾಲ ಮೊಹಮದ್ ಶಫಿ ಶೇಖ್ ಸ್ವಾಗತಿಸಿ, ಉಪನ್ಯಾಸಕ ವಿರನ್ ಕಾರ್ಯಕ್ರಮ ನಿರೂಪಿಸಿದರು.  

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026
    Leave A Reply Cancel Reply

    11 − 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.