ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾಮಾಜಿಕ ಜವಾಬ್ದಾರಿತ್ವದ ನೈಜ ಉದಾಹರಣೆಯನ್ನು ನೀಡಿದ ಕುಂದಾಪುರದ ಮೂಡಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ (ಡೇಟಾ ಸೈನ್ಸ್) ವಿಭಾಗ ಮತ್ತು ಕಾಲೇಜಿನ ಎನ್ಎಸ್ಎಸ್ ಘಟಕ ಸಮಾಜಮುಖಿ ಚಟುವಟಿಕೆಯ ಅಂಗವಾಗಿ ಬ್ರಹ್ಮಾವರದ ‘ಸ್ಪಂದನ’ ವಿಶೇಷ ಚೇತನ ಮಕ್ಕಳ ಶಾಲೆಗೆ ₹10,000 ದೇಣಿಗೆಯನ್ನು ನೀಡಿತು.
ಮಕ್ಕಳಿಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡುವ ಉದ್ದೇಶದಿಂದ ಎಂಐಟಿ ತಂಡವು ಶಾಲೆಗೆ ಭೇಟಿ ನೀಡಿ,ದೇಣಿಗೆಯ ಚೆಕ್ ಅನ್ನು ನೇರವಾಗಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು.
ಈ ಕಾರ್ಯಕ್ರಮವನ್ನು ವಿಭಾಗದ ಮುಖ್ಯಸ್ಥರಾದ ಕಾರ್ತಿಕೇಯನ್ ಅವರ ನೇತೃತ್ವದಲ್ಲಿ ನಿರ್ಮಲ್, ಡಾ. ಸ್ಯಾಮ್, ಫರಾನಾ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ನೆರವೇರಿಸಿದರು. ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಂವೇದನೆಯನ್ನು ಬೆಳೆಸುವ ಉದ್ದೇಶ ಈ ಭೇಟಿಯ ಪ್ರಮುಖ ಭಾಗವಾಗಿತ್ತು.
ಈ ಸಂದರ್ಭದಲ್ಲಿ ಕಾರ್ತಿಕೇಯನ್ ಅವರು ಮಾತನಾಡಿ, “ಶಿಕ್ಷಣದೊಂದಿಗೆ ಮಾನವೀಯತೆ, ಸಹಾನುಭೂತಿ ಮತ್ತು ಸಾಮಾಜಿಕ ಅರಿವು ವಿದ್ಯಾರ್ಥಿಗಳಲ್ಲಿ ಬೆಳದರೆ ಮಾತ್ರ ನಿಜವಾದ ಉತ್ತಮ ನಾಗರಿಕರು ನಿರ್ಮಾಣವಾಗುತ್ತಾರೆ,” ಎಂದು ಅಭಿಪ್ರಾಯಪಟ್ಟರು.
‘ಸ್ಪಂದನ’ ಶಾಲೆಯ ಸಿಬ್ಬಂದಿಗಳು ಎಂಐಟಿಯ ಈ ಸಾರ್ಥಕ ಸಹಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿ, ಮಕ್ಕಳ ಪರವಾಗಿ ಈ ಮಾನವೀಯ ಸಂಕೇತವನ್ನು ಶ್ಲಾಘಿಸಿದರು.
ಎನ್ಎಸ್ಎಸ್ ಮುಖೇನ ಎಂಐಟಿ ಕೈಗೊಂಡ ಈ ಕಾರ್ಯ, ಸಮಾಜ ಸೇವೆ ಮತ್ತು ಸಮುದಾಯದೊಂದಿಗೆ ಸಂಸ್ಥೆಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುತ್ತದೆ.










