Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆನೆಗುಡ್ಡೆ ದೇಗುಲದಲ್ಲಿ ಶ್ರೀ ಪರ್ಣ ಯಕ್ಷ ಬಳಗ, ತೆಕ್ಕಟ್ಟೆ ಹವ್ಯಾಸಿ ಯುವ ಯಕ್ಷಗಾನ ಸಂಘ ಉದ್ಘಾಟನೆ
    ಊರ್ಮನೆ ಸಮಾಚಾರ

    ಆನೆಗುಡ್ಡೆ ದೇಗುಲದಲ್ಲಿ ಶ್ರೀ ಪರ್ಣ ಯಕ್ಷ ಬಳಗ, ತೆಕ್ಕಟ್ಟೆ ಹವ್ಯಾಸಿ ಯುವ ಯಕ್ಷಗಾನ ಸಂಘ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನವು ತಲತಲಾಂತರಗಳಿಂದಲೂ ಯಕ್ಷಗಾನಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದು, ಕರಾವಳಿಯ ಅತ್ಯಂತ ಖ್ಯಾತಿಯ ಮೇಳಗಳಾದ ಮಂದರ್ತಿ, ಚೋಣಮನೆ, ಗೋಳಿಗರಡಿ ಮುಂತಾದ ಯಕ್ಷಗಾನ ಮೇಳಗಳು ನಮ್ಮ ಸೇವೆಯ ಆಟವನ್ನು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಸುತ್ತಿದ್ದು ಪಡಿಯಕ್ಕಿಯೊಂದಿಗೆ ಸಂಭಾವನೆಯನ್ನೂ ಕೊಟ್ಟು ಯಕ್ಷಗಾನಕ್ಕೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಹಾಗೆಯೇ ಅನೇಕ  ಹವ್ಯಾಸಿ ಯಕ್ಷಗಾನ ಸಂಘಗಳು ಹಾಗೂ ಯಕ್ಷ ಶಿಕ್ಷಣ ಟ್ರಸ್ಟ್ ,ಉಡುಪಿ ಇವರಿಗೆ ಉತ್ಸವ ಹಾಗೂ ವಿಶೇಷ ದಿನಗಳಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಿ ಅನುದಾನವನ್ನ ಕೊಡುವುದರೊಂದಿಗೆ ಪ್ರೋತ್ಸಾಹಿಸುತ್ತಾ ಬಂದಿದೆ ಎಂದು ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ. ರಮಣ ಉಪಾಧ್ಯಾಯ ಹೇಳಿದರು.

    Click Here

    Call us

    Click Here

    ಅವರು ದೇವಳದ ಪ್ರಸನ್ನ ಮಂಟಪ ವೇದಿಕೆಯಲ್ಲಿ ನೂತನವಾಗಿ ನಿರ್ಮಾಣವಾದಂತಹ ಮಿಥುನ್ ದೇವಾಡಿಗ ತೆಕ್ಕಟೆ ಇವರ ಸಂಚಾಲಕತ್ವದ ಶ್ರೀ ಪರ್ಣ ಯಕ್ಷ ಬಳಗ, ತೆಕ್ಕಟ್ಟೆ ಹವ್ಯಾಸಿ ಯುವ ಯಕ್ಷಗಾನ ಸಂಘದ ಪ್ರಥಮ ಸೇವೆಯಾಟವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಯುವ ಕಲಾವಿದರು ಹಾಗೂ ನೂತನ ಕಲಾಸಂಘಕ್ಕೆ ಶುಭ ಹಾರೈಸಿ ಆಶೀರ್ವದಿಸಿದರು.

    ಯಕ್ಷ ಸಂಘಟಕ ಕೊಮೆ ವೆಂಕಟೇಶ ವೈದ್ಯರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕಲೆಯೊಂದಿಗೆ ಉತ್ತಮ ಕಲಿಕೆಯಲ್ಲೂ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕರೆ ಕೊಟ್ಟು ಯುವ ಕಲಾವಿದರನ್ನು ಪ್ರೋತ್ಸಾಹಿಸಿದರು. ಅಮಿತ್ ಬಿ. ನೇರಳಕಟ್ಟೆ ಹಾಗೂ ರಾಜಾರಾಮ ಉಪಾಧ್ಯಾಯ ಕ್ರಮವಾಗಿ ಈ ಯಕ್ಷಗಾನ ಸಂಘವು ಹುಟ್ಟಿ ಬೆಳೆದ ಬಗ್ಗೆ ಹಾಗೂ ದೇವಳದ ವತಿಯಿಂದ ಯಕ್ಷಗಾನಕ್ಕೆ ಕೊಡುವ ಪ್ರೋತ್ಸಾಹದ ಬಗ್ಗೆ ಪ್ರಸ್ತಾವನೆ ಮಾಡಿದರು.

    ಮುಖ್ಯ ಅತಿಥಿಯಾಗಿ ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್. ಶಣೈ , ದೇವಳದ ಮ್ಯಾನೇಜರ್ ನಟೇಶ್ ಕಾರಂತ್ ಇದ್ದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮವನ್ನು ನಿರೂಪಿಸಿ, ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three × 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.