Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪ.ಪೂ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಕಾರ್ಯಕ್ರಮ

    Updated:03/12/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ :
    ಯಾವುದೇ ಸರಕಾರಕ್ಕೂ ಅಥವಾ ಯಾವುದೇ ಸಂಸ್ಥೆಗಳಿಗೆ ನೂರಕ್ಕೆ ನೂರರಷ್ಟು ಉದ್ಯೋಗ ನೀಡಲು ಸಾಧ್ಯವಿಲ್ಲ. ಬಹಳಷ್ಟು ಮಂದಿಗೆ ಸ್ವಂತ ಉದ್ಯೋಗ ಮಾಡಲು ಅನುಭವದ ಕೊರತೆ ಇದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಪ್ರವರ್ತಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಸಂತೆ – ಬ್ಯುಸಿನೆಸ್ ಡೇ ಇದು ಆವಿಷ್ಕಾರವಲ್ಲ, ಗಂಗೊಳ್ಳಿಯ ಜನ್ಮದತ್ತ ಕಲೆಯ ಸಾಕ್ಷಾತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಈ ಪ್ರಾಯದಲ್ಲಿ ಸ್ವಂತ ಉದ್ಯೋಗ ಮಾಡುವ ಬಗ್ಗೆ ಮಾಹಿತಿ ಮತ್ತು ಅನುಭವ ದೊರೆತರೆ ಸ್ವಂತ ಉದ್ಯೋಗ ಮಾಡಲು ಸಹಕಾರಿಯಾಗುತ್ತದೆ. ಆರ್ಥಿಕ ಅಭಿವೃದ್ಧಿಗೆ ಊರಿಗೆ, ಸಮಾಜಕ್ಕೆ ದೇಣಿಗೆ, ಪರೋಪಕಾರಿ ಸೇವೆ ಮಾಡಲು ಸ್ವಉದ್ಯೋಗ ಸಹಾಯವಾಗುತ್ತದೆ. ಸರಕಾರಿ ಉದ್ಯೋಗ ಮತ್ತಿತರ ಉದ್ಯೋಗಳಿಗಾಗಿ ಅಲೆದಾಡುವ ಬದಲು ಸ್ವ ಉದ್ಯೋಗದತ್ತ ಗಮನ ಹರಿಸಬೇಕು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ಜ್ಞಾನ ಹಾಗೂ ಅನುಭವ ನೀಡುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಮಕ್ಕಳ ಸಂತೆ ಕಾರ್ಯಕ್ರಮ ಅತ್ಯದ್ಭುತವಾದುದು ಎಂದರು.

    ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಗಣೇಶ ನಾಯಕ್ ಶುಭ ಹಾರೈಸಿದರು.

    ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯ ವ್ಯವಸ್ಥಾಪಕ ವಾಸು ದೇವಾಡಿಗ, ಮುಳುಗು ತಜ್ಞ ದಿನೇಶ ಖಾರ್ವಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಕರಾಟೆ ಪಟು ಟಿ. ಶಶಾಂಕ ಶೆಣೈ, ತುರ್ತು ಚಿಕಿತ್ಸಾ ವಾಹನಗಳ ಚಾಲಕರಾದ ಇಬ್ರಾಹಿಂ ಗಂಗೊಳ್ಳಿ, ಸಚಿನ್ ಖಾರ್ವಿ, ಮಹಮ್ಮದ್ ಸಿಯಾನ್, ಪ್ಯಾಟ್ರಿಕ್ ವಿಲ್ಸನ್ ರೆಬೆರೊ, ಇಮಾಮ್ ಸಾಬಿ, ನವೀನ್ ಎಂ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾಘವೇಂದ್ರ ಖಾರ್ವಿ, ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್, ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಸದಸ್ಯರಾದ ಕೆ. ರಾಮನಾಥ ನಾಯಕ್, ಎಂ. ನಾಗೇಂದ್ರ ಪೈ, ಎಸ್.ವಿ.ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಭಾಸ್ಕರ ಎಚ್.ಜಿ., ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ವೆಂಕಟೇಶಮೂರ್ತಿ ಮತ್ತು ಅಕ್ಷಯಾ ಸನ್ಮಾನಿತರರನ್ನು ಪರಿಚಯಿಸಿದರು.

    ಕಾರ್ಯಕ್ರಮದಲ್ಲಿ ಮಕ್ಕಳಿಂದ ವೈವಿಧ್ಯಮಯ ಉತ್ಪನ್ನಗಳು ಮತ್ತು ಆಹಾರ ತಿನಿಸುಗಳ ಮುಕ್ತ ಮಾರಾಟ, ಭೂತದ ಮನೆ/ ಹಳ್ಳಿ ಮನೆ/ ಸಾಲು ಮರದ ತಿಮ್ಮಕ್ಕ ನರ್ಸರಿ/ ಭಿನ್ನ ಆಟಗಳ ಭರಾಟೆ ಕಾರ್ಯಕ್ರಮದ ಪ್ರಧಾನ ಆಕರ್ಷಣೆಯಾಗಿತ್ತು.

    Like this:

    Like Loading...

    Related

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

    05/12/2025

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d