ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಏಕತೆಯಲ್ಲಿ ಬಲವಿದೆ. ಏಕತೆಯಲ್ಲಿ ಬದುಕಿನ ಸಾರ್ಥಕತೆ ಇದೆ ಎಂದು ಎ.ಎಸ್. ಭಂಡಾರ್ಕರ್ ಅವರು ಮೊಮ್ಮಗಳು ಡಾ. ಗಾಯತ್ರಿ ಭಂಡಾರ್ಕರ್ ಮತ್ತು ಅಮೇರಿಕಾದಲ್ಲಿ ಚರ್ಮರೋಗ ವೈದ್ಯರಾಗಿರುವ ಡಾ. ಸುಲೋಚನಾ ಹೇಳಿದರು.
ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಶುಕ್ರವಾರದಂದು ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಇವರೀರ್ವರು ಜೊತೆಯಲ್ಲಿ ಮಾತನಾಡಿದರು.

ಪರರ ಕುರಿತು ಟೀಕೆ ಮಾಡುವುದು, ಹೋಲಿಕೆ ಮಾಡುವುದು ಹಾಗು ದೂರು ಹೇಳುವುದು ಈ ಮೂರು ಅನಗತ್ಯ ಯೋಚನೆಗಳನ್ನು ತೊಡೆದುಹಾಕಿ ಏಕತೆಯ ಬೀಜವನ್ನು ನೆಟ್ಟು ಬೆಳೆಯೋಣ. ಇನ್ನೊಬ್ಬರ ಬದುಕಿನ ಯಶಸ್ಸು ಮತ್ತು ಸಂತೋಷ ನಾವು ಪಾಲ್ಗೊಳ್ಳುವಿಕೆಯಲ್ಲಿ ಶಕ್ತಿ ಇದೆ. ಪರಸ್ಪರ ಜೊತೆಯಲ್ಲಿ ಏಕತೆಯ ಕುರಿತು ಯೋಚಿಸೋಣ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪರಮಪೂಜ್ಯ ಶಾಂತಾರಾಮ್ ಭಂಡಾರ್ಕಾರ್ ಮಾತನಾಡಿ, ದೇವರ ಭಯವೇ ಜ್ಞಾನದ ಮೂಲ. ಜ್ಞಾನದ ಜೊತೆಗೆ ಒಳ್ಳೆಯದನ್ನು ಯೋಚಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಗಳಾದ ಡಾ. ಶ್ರೀಧರ ಪೈ ಮಾತನಾಡಿ ಭಾರತದ ಯಶಸ್ವೀ ಬೆಳವಣಿಗೆಯ ಕುರಿತು ಯೋಚಿಸಿ ಭಾರತದ ನವ ಸಂಕಲ್ಪದ ಆಶಯಗಳನ್ನು ಸಾಕಾರಗೊಳಿಸೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಅರುಣಾ ಭಂಡಾರ್ಕರ್, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ರಾಜೇಂದ್ರ ತೋಳಾರ್ ಮತ್ತು ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್. ಶೆಣೈ ಉಪಸ್ಥಿತರಿದ್ದರು.
ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ನಡೆದ ಅಂತರ್ ಕಾಲೇಜು ಸಂಗೀತ ಸ್ಪರ್ಧೆ ಕಾರ್ಯಕ್ರಮ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಶಶಿಕಾಂತ್ ಹತ್ವಾರ್ ಸಂಸ್ಥಾಪಕರ ಕುರಿತು ಮಾತನಾಡಿದರು.
ಉಪನ್ಯಾಸಕಿಯರಾದ ಶೈಲಾ ಆರ್., ಮತ್ತು ಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಸ್ವಾಗತಿಸಿ, ಕಂಪ್ಯೂಟರ್ ಉಪನ್ಯಾಸಕಿ ವಿಜಯಲಕ್ಷ್ಮಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.ಎಮ್.ಗೊಂಡ ವಂದಿಸಿದರು.















