Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್
    ಉಡುಪಿ ಜಿಲ್ಲೆ

    ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಕಾರ್ಯನಿರ್ವಹಿಸಬೇಕು: ಸಿ.ಇ.ಓ ಪ್ರತೀಕ್ ಬಾಯಲ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ ಕರೆ ನೀಡಿದರು.

    Click Here

    Call us

    Click Here

    ಅವರು ಬುಧವಾರ ನಗರದ ಕಡಿಯಾಳಿಯ ದಿ ಓಷ್ಯನ್ ಪರ್ಲ್ ಹೋಟೆಲ್‌ನಲ್ಲಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು ಟೆಕ್ಸಾಕ್ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಮಣಿಪಾಲ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ರ್ಯಾಪ್) ಯೋಜನೆಯಡಿಯಲ್ಲಿ ಒಂದು ದಿನದ ಝೆಡ್ ಮತ್ತು ಲೀನ್ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

    ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳು ಕೇವಲ ಆರ್ಥಿಕತೆಯ ಲಾಭಕ್ಕೆ ಹೆಚ್ಚು ಒತ್ತು ನೀಡುವ ಜೊತೆಗೆ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕ ಉತ್ಪನ್ನಗಳ ತಯಾರಿಕೆಗೆ ಮುಂದಾಗಬೇಕು. ಇದರಿಂದಾಗಿ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುತ್ತದೆ. ಕೈಗಾರಿಕೆಗಳು ಸುಧೀರ್ಘವಾಗಿ ನಡೆಯುವುದರ ಜೊತೆಗೆ ದೇಶದ ಆರ್ಥಿಕತೆಗೂ ಸಹಕಾರಿಯಾಗುತ್ತದೆ ಎಂದರು.

    ನಮ್ಮ ದೇಶಕ್ಕೆ ಯೂರೋಪಿಯನ್ನರು ವ್ಯಾಪಾರವನ್ನು ಅರಿಸಿ, ಬರುವುದಕ್ಕೂ ಮುನ್ನ ಸಣ್ಣ ಹಾಗೂ ಗುಡಿ ಕೈಗಾರಿಕೆಗಳು ಹೆಚ್ಚು ಇದ್ದವು. ಅವರು ತಯಾರಿಸುತ್ತಿದ್ದ ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು ಸೇರಿದಂತೆ ಮತ್ತಿತರ ಉತ್ಪನ್ನಗಳು ವಿಶ್ವದಲ್ಲಿಯೇ ಹೆಚ್ಚಿನ ಬೇಡಿಕೆ ಹೊಂದಿದ್ದವು. ವ್ಯಾಪಾರವನ್ನು ಅರಸಿ ದೇಶಕ್ಕೆ ಬಂದವರು ತಮ್ಮ ಕೈಗಾರಿಕಾ ಉತ್ಪನ್ನಗಳ ಮಾರುಕಟ್ಟೆಯಿಂದ ನಮ್ಮ ಸಾಂಪ್ರದಾಯಿಕ ಉತ್ಪನ್ನಗಳ ತಯಾರಿಕೆ ಬಹುತೇಕ ಕುಂಠಿತಗೊಂಡು ಸಾಂಪ್ರದಾಯಿಕ ಕುಶಲಕರ್ಮಿಗಳು ಕೃಷಿಯತ್ತ ಸಾಗಿದರು. ಗಾಂಧೀಜಿಯವರು ಸ್ವದೇಶಿ ಉತ್ಪನ್ನಗಳ ತಯಾರಿಕೆಗೆ ಒತ್ತು ನೀಡಬೇಕು, ವಿದೇಶಿ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಕರೆ ನೀಡಿದ್ದರು ಎಂದರು.

    ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆಗಳು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದ ಅವರು, ಮುಂದಿನ 2050 ರ ವೇಳೆಗೆ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ ಕೈಗಾರಿಕೆಗಳು ಮಹತ್ವದ ಪಾತ್ರ ವಹಿಸಲು ಕೈಗಾರಿಕೋದ್ಯಮಿಗಳು ಮುಂದಾಗಬೇಕು ಎಂದರು.

    Click here

    Click here

    Click here

    Click Here

    Call us

    Call us

    ಬೆಂಗಳೂರು ಟೆಕ್ಸಾಕ್ ಸಿ.ಇ.ಓ ಸಿದ್ಧರಾಜು ಪ್ರಾಸ್ತಾವಿಕವಾಗಿ ಮಾತನಾಡಿ, 2019-20 ನೇ ಅವಧಿಯ ಕೊರೋನಾ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಸ್ಥಿರವಾಗಿ ನಿಲ್ಲಲು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದ ಸಣ್ಣ ಕೈಗಾರಿಕೆಗಳಿಗೆ ರ‍್ಯಾಂಪ್ ಯೋಜನೆಯನ್ನು ಜಾರಿ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರಗಳ ಜೊತೆಗೆ ವಿಶ್ವ ಬ್ಯಾಂಕ್‌ಗಳು ಆರ್ಥಿಕ ಬಲ ನೀಡಿದವು. ಯಾವುದೇ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿವೆ ಎಂದು ತಿಳಿಸಲು ಪ್ರಮಾಣಪತ್ರ ಅಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಶೂನ್ಯ ದೋಷ, ಶೂನ್ಯ ಪರಿಣಾಮದೊಂದಿಗೆ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳನ್ನು ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಉತ್ಪಾದಿಸಲು ಝಡ್.ಇ.ಡಿ ಪ್ರಮಾಣಪತ್ರಗಳು ಪ್ರಮುಖಪಾತ್ರ ವಹಿಸಲಿದ್ದು, ಇದರಲ್ಲಿ ಕಂಚು, ಬೆಳ್ಳಿ, ಚಿನ್ನದಂತಹ ಪ್ರಮಾಣೀಕರಣ ಪತ್ರವನ್ನು ಪಡೆಯಬಹುದು. ಅದನ್ನು ಪಡೆಯುವ ಕುರಿತು ಕಾರ್ಯಾಗಾರದಲ್ಲಿ ಅರಿವು ಮೂಡಿಸಲಾಗುವುದು ಎಂದ ಅವರು, ಸಣ್ಣ ಕೈಗಾರಿಕೋದ್ಯಮಗಳ ವ್ಯರ್ಥವನ್ನು ಕಡಿಮೆ ಮಾಡಲು, ಗುಣಮಟ್ಟ, ಉತ್ಪಾದಕತೆ ಹಾಗೂ ಅವರುಗಳ ಕಾರ್ಯಕ್ಷಮತೆಯನ್ನು ಸುಧಾರಿಸಲು ಲೀನ್ ಕುರಿತ ಮಾಹಿತಿ ಕಾರ್ಯಕ್ರಮವು ಉದ್ಯಮಿಗಳಿಗೆ ಪ್ರಯೋಜನಕಾರಿಯಾಗಲಿದೆ ಎಂದರು.

    ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಂ.ಎಸ್.ಎಂ.ಇ ನ ಗೋಪಿನಾಥ್ ಝೆಡ್ ಮತ್ತು ಲೀನ್ ಯೋಜನೆಗಳ ಕುರಿತು ಉದ್ಯಮಿಗಳಿಗೆ ಮಾಹಿತಿ ನೀಡಿದರು.

    ಇದೇ ಸಂದರ್ಭದಲ್ಲಿ ಝೆಡ್.ಇ.ಡಿ ಯೋಜನೆಯಡಿ ಅರ್ಹ ಉದ್ಯಮಿಗಳಿಗೆ ಸಿಲ್ವರ್ ಸರ್ಟಿಫಿಕೇಟ್ ಅನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಎಂ.ಎಸ್.ಎಂ.ಇ ಜಂಟಿ ನಿರ್ದೇಶಕ ಸುಂದರ್ ಶೇರಿಗಾರ್, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ವಸಂತ ಕಿಣಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಜಿಲ್ಲೆಯ ಕೈಗಾರಿಕೋದ್ಯಮಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    ಟೆಕ್ಸಾಕ್ ಅಸೋಸಿಯೇಟ್ ಕನ್ಸಲ್ಟೆಂಟ್ ಅರವಿಂದ್ ಡಿ ಬಾಳೇರಿ ಸ್ವಾಗತಿಸಿ, ಶ್ರುತಿ ನಿರೂಪಿಸಿ, ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಸೀತಾರಾಮ ಶೆಟ್ಟಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    thirteen − 3 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.