ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಕೊಟೇಶ್ವರದ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ಬಿ.ಕಾಂ. ನ 50 ವಿದ್ಯಾರ್ಥಿಗಳಿಗೆ ವಿವಿಧ ಕೈಗಾರಿಕಾ ಕೇಂದ್ರಗಳಿಗೆ ಭೇಟಿ ನೀಡಿ ಅದರ ಸೂಕ್ಷ್ಮ ಅಧ್ಯಯನವನ್ನು ಮಾಡಲಾಯಿತು.
ಮಣಿಪಾಲದ ಉದಯವಾಣಿ ಮುದ್ರಣಾಲಯ ಮುಖ್ಯಸ್ಥರು ವಿದ್ಯಾರ್ಥಿಗಳ ಈ ಭೇಟಿಯಿಂದ ನೈಜ ಅಧ್ಯಯನ ಹಾಗೂ ಸಮಾಜಮುಖಿಗಳಾಗಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಉದಯ ಅಲ್ಯುಮೀನಿಯಂ ಘಟಕ ಮಣಿಪಾಲದ ವ್ಯವಸ್ಥಾಪಕರಾದ ಹೇಮಂತ್ ಕುಮಾರ್ ಅವರು ಅಲ್ಯುಮೀನಿಯಂ ಹಾಗೂ ಸ್ಟೀಲ್ನ ವಿವಿಧ ಪರಿಕರಗಳ ಉತ್ಪಾದನಾ ಹಂತಗಳನ್ನು ಸ್ಥೂಲವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಉಪ್ಪೂರಿನಲ್ಲಿರುವ ಕೆ.ಎಂ.ಎಫ್.ನ ಹಾಲಿನ ಸಂಸ್ಕರಣ ಘಟಕದಲ್ಲಿ ಅಲ್ಲಿಯ ಸಿಬ್ಬಂದಿಯವರು ಹಾಲು ಹಾಗೂ ಅದರ ಸಹ – ಉತ್ಪನ್ನಗಳ ಸಂಸ್ಕರಣೆಯ ವಿವಿಧ ಮಜಲುಗಳನ್ನು ವಿವರವಾಗಿ ತಿಳಿಸಿದರು.
ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಶೇಖರ ಬಿ. ಹಾಗೂ ಉಪನ್ಯಾಸಕರಾದ ಶೃತಿ ಆಚಾರ್ಯ ಎನ್. ಹಾಗೂ ಚೈತ್ರಾ ಹೆಚ್. ಅವರು ಈ ಭೇಟಿಯ ನೇತೃತ್ವ ವಹಿಸಿದರು.















