Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನ ಬಾಡ: ಜ.10ರಿಂದ 12ರ ತನಕ ನೂತನ ಕಟ್ಟಡಗಳ ಲೋಕಾರ್ಪಣೆ, ಪುನಃಪ್ರತಿಷ್ಠಾ ಮಹೋತ್ಸವ
    ಊರ್ಮನೆ ಸಮಾಚಾರ

    ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನ ಬಾಡ: ಜ.10ರಿಂದ 12ರ ತನಕ ನೂತನ ಕಟ್ಟಡಗಳ ಲೋಕಾರ್ಪಣೆ, ಪುನಃಪ್ರತಿಷ್ಠಾ ಮಹೋತ್ಸವ

    Updated:06/01/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಬಾಡ ಗ್ರಾಮದ ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನದ ನೂತನ ದೈವಸ್ಥಾನ ಕಟ್ಟಡಗಳ ಲೋಕಾರ್ಪಣೆ ಕೆಂಪಿನಕೆರೆ ಜಟ್ಟಿಗೇಶ್ವರ ಹಾಗೂ ಸಪರಿವಾರ ದೈವಗಳು ಮತ್ತು ನಾಗ ದೇವರ ಪುನಃಪ್ರತಿಷ್ಠಾ ಮಹೋತ್ಸವವು ದಿನಾಂಕ 10 ಜನವರಿ 2026ರ ಶನಿವಾರದಿಂದ ಮೊದಲ್ಗೊಂಡು 12 ಜನವರಿ 2026ರ ಸೋಮವಾರದ ತನಕ ನಡೆಯಲಿದೆ.

    Click Here

    Call us

    Click Here

    ದಿನಾಂಕ 10-01-2026ರ ಶನಿವಾರ ದೇವತಾ ಕಾರ್ಯಗಳಿಗೆ ಚಾಲನೆ ದೊರೆಯಲಿದ್ದು, ದೇವರ ಪ್ರಾರ್ಥನೆ, ಮೆರವಣಿಗೆ, ಪೂಜೆ ಹಾಗೂ ಹೋಮಹವನಗಳು ಜರುಗಲಿದೆ.

    ದಿನಾಂಕ 11-01-2026ರ ಭಾನುವಾರ ಬೆಳಿಗ್ಗೆ ಗಂಟೆ 08-00ರಿಂದ ವಿವಿಧ ಹೋಮ, ಬೆಳಿಗ್ಗೆ ಗಂಟೆ 10-40ರ ಕುಂಭ ಲಗ್ನದಲ್ಲಿ ಶ್ರೀ ಜಟ್ಟಿಗೇಶ್ವರ ದೇವರ ಹಾಗೂ ಸಪರಿವಾರ ದೈವಗಳ ಪುನಃಪ್ರತಿಷ್ಠೆ, ವಿವಿಧ ಹವನಗಳು ಗಂಟೆ 11-40ರ ಶುಭ ಲಗ್ನದಲ್ಲಿ ನಾಗಶಿಲಾ ಪ್ರತಿಷ್ಠೆ, ಹೋಮಾದಿಗಳು, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅಂದು ಮಧ್ಯಾಹ್ನ ಗಂಟೆ 03-00ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮಗಳು ಜರುಗಲಿದೆ. ಸಂಜೆ ಗಂಟೆ 06-00ರಿಂದ ಮಂಡಲ ದರ್ಶನ, ಕಲಶ ಸ್ಥಾಪನೆ ಹಾಗೂ ಇನ್ನಿತರ ಧಾರ್ಮಿಕ ವಿಧಿಗಳು ಜರುಗಲಿದೆ.

    ದಿನಾಂಕ 12-01-2026ರ ಸೋಮವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಂಡ ಬಳಿಕ ದೇವರ ಬ್ರಹ್ಮಕಲಶಾಭಿಷೇಕ, ಶಾಂತಿ ಹೋಮಗಳ ಪೂರ್ಣಾಹುತಿ, ಮಹಾಪೂಜೆ, ಪ್ರಾರ್ಥನೆ, ತೀರ್ಥಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಗಂಟೆ 12-30ರಿಂದ ಮಹಾ ಅನ್ನಸಂತರ್ಪಣೆ ಜರುಗಲಿದೆ. ಮಧ್ಯಾಹ್ನ ಗಂಟೆ 03-00ಕ್ಕೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ, ಸಂಜೆ ಗಂಟೆ 05-00ರಿಂದ ಬಾಡ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಗಂಟೆ 06ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ ಗಂಟೆ 08-00ರಿಂದ ಬೈಂದೂರಿನ ಇನಿದನಿ ಸಂಗೀತ ತಂಡದಿಂದ ಭಕ್ತಿ ಭಾವ ಲಹರಿ – ಸುಗಮ ಸಂಗೀತ ಕಾರ್ಯಕ್ರಮಗಳು ಜರುಗಲಿದೆ.

    ಪುನಃಪ್ರತಿಷ್ಠಾ ಮಹೋತ್ಸವಕ್ಕೆ ಹೊರೆಕಾಣಿಕೆಗಳನ್ನು ನೀಡುವವರು 09-01-2026ರ ಶುಕ್ರವಾರದ ಮೊದಲು ನೀಡಿ ಸಹಕರಿಸುವಂತೆ ಕೋರಲಾಗಿದೆ. ಪುನಃಪ್ರತಿಷ್ಠಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಬಾಡ – ಬೈಂದೂರು ಇದರ ಅಧ್ಯಕ್ಷರಾದ ಅಧ್ಯಕ್ಷರಾದ ನಾಗಭೂಷಣ ಭಟ್ಟ, ಕಾರ್ಯಾಧ್ಯಕ್ಷರಾದ ಜನಾರ್ಧನ ಯು. ಬಾಡ, ಕಾರ್ಯದರ್ಶಿ ಸತ್ಯನಾರಾಯಣ ಜಿ. ಹಾಗೂ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಕೋರಿದ್ದಾರೆ.

    Click here

    Click here

    Click here

    Call us

    Call us

    ಕೆಂಪಿನಕೆರೆ ಶ್ರೀ ಜಟ್ಟಿಗೇಶ್ವರ ದೈವಸ್ಥಾನ ಹಾಗೂ ಪರಿವಾರ ದೈವಗಳ ವಾರ್ಷಿಕ ಗೆಂಡಸೇವೆ ಹಾಗೂ ಹಾಲುಹಬ್ಬ ಉತ್ಸವವು ದಿನಾಂಕ 17-01-2026ನೇ ಶನಿವಾರದಿಂದ ಮೊದಲ್ಗೊಂಡು 18-01-2026ನೇ ಭಾನುವಾರದ ತನಕ ಜರುಗಲಿದ್ದು ಭಕ್ತಮಹಾಶಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

    ಮಾಹಿತಿಗಾಗಿ
    9449487514, 9448428958, 8050266747

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    13/01/2026

    ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ

    13/01/2026

    ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    13/01/2026
    Leave A Reply Cancel Reply

    11 + seven =

    Call us

    Click Here

    Call us

    Call us

    Call us
    Highest Viewed Recently
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು
    • ಪೆರಂಪಳ್ಳಿ ಸುಬ್ರಮಣ್ಯ ಹೆಬ್ಬಾರ್ ಅವರಿಗೆ ʼವಿಶ್ವೇಶ ಸೇವಾ ಪ್ರಶಸ್ತಿʼ
    • ಹಾಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    • ಸಾಲಿಗ್ರಾಮ ಹಬ್ಬ- 2026 ಸಿದ್ಧತಾ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.